ಶೀಘ್ರವೇ ದಾವಣಗೆರೆ ಪ್ರತ್ಯೇಕ ಹಾಲು ಒಕ್ಕೂಟ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ದಾವಣಗೆರೆ, ಆಗಸ್ಟ್ 14: ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ದಾವಣಗೆರೆ-ಚಿತ್ರದುರ್ಗ ಪ್ರತ್ಯೇಕ ಹಾಲು ಒಕ್ಕೂಟ ರಚನೆ ಮಾಡಿ, ಹಾಲು ಉತ್ಪಾದಕರಿಗೆ ಹಸು ಖರೀದಿಸಲು 40 ಸಾವಿರ ರೂ ಸಬ್ಸಿಡಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ಈ ಕುರಿತು ದಾವಣಗೆರೆಯಲ್ಲಿ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಜಿಲ್ಲಾ ಸಹಕಾರಿಗಳಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ನಮ್ಮ ಸರ್ಕಾರದ ಅವಧಿಯಲ್ಲಿಯೇ ಶಿವಮೊಗ್ಗ ಹಾಲು ಒಕ್ಕೂಟದಿಂದ ದಾವಣಗೆರೆ-ಚಿತ್ರದುರ್ಗ ಹಾಲು ಒಕ್ಕೂಟ ಬೇರ್ಪಡಿಸಿ ಪ್ರತೇಕ ಹಾಲು ಒಕ್ಕೂಟ ಮಾಡಲು ಕಳೆದ 6 ವರ್ಷಗಳ ಹಿಂದೆ ಪ್ರಯತ್ನಿಸಿದ್ದೆವು. ಅದಕ್ಕೂ ಕಲ್ಲು ಹಾಕಿದರು. ಆದಾದ ನಂತರ ಅಲ್ಲಿ ಒಂದು ಲೋಡು ಮಣ್ಣು ಕೂಡ ಹಾಕಿಸಲು ಸಾಧ್ಯವಾಗಿಲ್ಲ ಎಂದರು.

ಇದೀಗ ದಾವಣಗೆರೆ- ಚಿತ್ರದುರ್ಗ ಪ್ರತ್ಯೇಕ ಹಾಲು ಒಕ್ಕೂಟ ನಿರ್ಮಾಣ ಮಾಡಿ, ಪ್ರತಿ ಹಸು ಖರೀದಿಗೆ 40 ಸಾವಿರ ರೂ ಸಬ್ಸಿಡಿ ಕೊಡಲಾಗುವುದು. ಗ್ರಾಮೀಣ ಪ್ರದೇಶದ ಜನರು ಇದರಿಂದ ಅಭಿವೃದ್ಧಿಯಾಗುತ್ತಾರೆ. 5 ರಿಂದ 10 ಸಾವಿರ ಹಸು ಖರೀದಿಸಿದರೂ ಕೂಡ ಸಬ್ಸಿಡಿ ನೀಡಲಾಗುವುದು.ಹಾಲು ಒಕ್ಕೂಟದ ಸದಸ್ಯರು ಮತ್ತು ಡಿಸಿಸಿ ಬ್ಯಾಂಕ್ ನಿರ್ದೇಶಕರು ಜನರಿಗೆ ಒಳ್ಳೆಯ ಸೇವೆ ನೀಡಿದ್ದೇ ಆದಲ್ಲಿ ಜನರು ಆರ್ಥಿಕವಾಗಿ ಸ್ವಾವಲಂಭಿಗಳಾಗಲಿದ್ದಾರೆ. ಸರ್ಕಾರಕ್ಕೂ ತೆರಿಗೆ ಹೆಚ್ಚು ಬರಲಿದೆ ಎಂದು ಹೇಳಿದರು.
ದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಆಗಬೇಕೆಂಬುದು ಜಿಲ್ಲೆ ಹೈನುಗಾರರ, ಸಹಕಾರಿಗಳ ಬಹಳ ವರ್ಷಗಳ ಕನಸಾಗಿದೆ, ಹಾಗೇ ಅದು ನಮ್ಮ ಕನಸು ಕೂಡ. ಈ ನಿಟ್ಟಿನಲ್ಲಿ ನಾವು ಸಚಿವರಾಗಿದ್ದಾಗಲೇ ಸಾಕಷ್ಟು ಪ್ರಯತ್ನ ನಡೆದಿದ್ದವು. ಆದರೆ, ಆ ವೇಳೆಗೆ ಸರಕಾರ ಬದಲಾದ ಕಾರಣ ಕನಸು ನನಸಾಗಲಿಲ್ಲ. ಈ ಬಾರಿ ಶಿವಮೊಗ್ಗ ಹಾಲು ಒಕ್ಕೂಟದಿಂದ ದಾವಣಗೆರೆ-ಚಿತ್ರದುರ್ಗ ಬೇರ್ಪಡಿಸಿ ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಸಚಿವ ಮಲ್ಲಿಕಾರ್ಜುನ್ ಭರವಸೆ ನೀಡಿದರು.
ಹಸು ಖರೀದಿಗೆ ಸಬ್ಸಿಡಿ; ಜಿಲ್ಲೆಯಲ್ಲಿ ಹಾಲು ಒಕ್ಕೂಟ ಆಗಬೇಕಾದರೆ ಇಲ್ಲಿ ಹಾಲು ಉತ್ಪಾದನೆ ಹೆಚ್ಚಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿಯೊಬ್ಬ ಹೈನುಗಾರರಿಗೆ ಹಸು ಖರೀದಿಸಲು ಸರಕಾರದಿಂದ 40,000 ರೂ. ಸಬ್ಸಿಡಿ ಕೊಡಿಸುವ ಜವಾಬ್ದಾರಿ ನಮ್ಮದು. ಇದರಿಂದ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಹೆಚ್ಚುವ ಜತೆಗೆ, ರೈತರ ಆದಾಯ ಕೂಡ ಹೆಚ್ಚಾಗುತ್ತದೆ. ಈಗಾಗಲೆ ಈ ಸಂಬಂಧ ನಾವು ಯೋಜನೆ ಒಂದನ್ನು ಸಿದ್ಧಪಡಿಸಿದ್ದೇವೆ,'' ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
-
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ










Click it and Unblock the Notifications