'ಸಿಎಂ, ಪರಮೇಶ್ವರ ಪ್ರತ್ಯೇಕ ರಾಜ್ಯ ಪ್ರವಾಸ ಅನಗತ್ಯ'
ಬೆಂಗಳೂರು, ಡಿಸೆಂಬರ್. 14 : 'ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಪ್ರತ್ಯೇಕವಾಗಿ ರಾಜ್ಯ ಪ್ರವಾಸ ಮಾಡಿ ಪ್ರಚಾರ ಮಾಡುವುದು ಅನಗತ್ಯ' ಎಂದು ಜಾಫರ್ ಷರೀಫ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್, 'ಇಬ್ಬರು ನಾಯಕರು ಪ್ರತಿಷ್ಠೆ ಬದಿಗಿಟ್ಟು ಒಟ್ಟಿಗೆ ರಾಜ್ಯ ಪ್ರವಾಸ ಮಾಡಬೇಕಿತ್ತು. ಪ್ರತ್ಯೇಕವಾಗಿ ಪ್ರವಾಸ ಮಾಡುವುದು ಸರಿಯಲ್ಲ' ಎಂದರು.

ಬಸವಕಲ್ಯಾಣದಿಂದ ನವ ಕರ್ನಾಟಕ ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.13ರಿಂದ ಪ್ರವಾಸ ಆರಂಭಿಸಿದ್ದಾರೆ. ಕಾಂಗ್ರೆಸ್ ಶಾಸಕರ ಗೆದ್ದ ವಿಧಾನಸಭಾ ಕ್ಷೇತ್ರಗಳಲ್ಲಿ ಅವರು ಪ್ರವಾಸ ನಡೆಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಡಿ.27ರಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತ ಕ್ಷೇತ್ರಗಳಲ್ಲಿ ಪರಮೇಶ್ವರ ಮತ್ತು ವಿವಿಧ ನಾಯಕರು ಪ್ರವಾಸ ನಡೆಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರ ಪ್ರವಾಸದ ಬಗ್ಗೆ ಭಾರೀ ಗೊಂದಲ ಉಂಟಾಗಿತ್ತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಕಳೆದ ವಾರ ಬೆಂಗಳೂರಿಗೆ ಬಂದಾಗ ಈ ಗೊಂದಲ ನಿವಾರಿಸಿದ್ದರು.
ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರು ಅಧಿಕಾರವಹಿಸಿಕೊಂಡ ಬಳಿಕ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಆಗ ಬೆಂಗಳೂರು ಅಥವ ಚಿಕ್ಕಮಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲು ಕೆಪಿಸಿಸಿ ಚಿಂತನೆ ನಡೆಸುತ್ತಿದೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications