ಕಲಾಪಕ್ಕೆ ಪ್ರತ್ಯೇಕ ಟಿವಿ ಚಾನೆಲ್, ದೆಹಲಿಗೆ ಭೇಟಿ
ಬೆಂಗಳೂರು, ಜುಲೈ 20 : ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳನ್ನು ನೇರ ಪ್ರಸಾರ ಮಾಡುವ ಬೇಸಿಲ್ ಸಂಸ್ಥೆ ಅಳವಡಿಸಿಕೊಂಡಿರುವ ತಂತ್ರಜ್ಞಾನದ ಬಗ್ಗೆ ತಿಳಿದುಕೊಳ್ಳಲು ಡಿ.ಎಚ್.ಶಂಕರಮೂರ್ತಿ ಅವರ ನೇತೃತ್ವದ ನಿಯೋಗ ನವದೆಹಲಿಗೆ ಭೇಟಿ ನೀಡಲಿದೆ. ನಂತರ ಕರ್ನಾಟಕದಲ್ಲಿ ಪ್ರತ್ಯೇಕ ಟಿವಿ ಚಾನೆಲ್ ಆರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ.
ಕರ್ನಾಟಕದ ಉಭಯ ಸದನಗಳ ಕಾರ್ಯಕಲಾಪಗಳ ನೇರ ಪ್ರಸಾರಕ್ಕೆ ಪ್ರತ್ಯೇಕ ಚಾನೆಲ್ ಆರಂಭಿಸುವ ಕುರಿತಂತೆ ಸೋಮವಾರ ವಿಧಾನಸೌಧದಲ್ಲಿ ಸಮಾಲೋಚನಾ ಸಭೆ ನಡೆಯಿತು. ಪ್ರಸ್ತುತ ಉಭಯ ಸದನಗಳಲ್ಲಿ ಸಿಸಿ ಟಿವಿ ಕ್ಯಾಮರಾ ಮೂಲಕ ಚಿತ್ರೀಕರಣ ನಡೆಸುವ ಉಪಕರಣಗಳು ಸುಮಾರು 20 ವರ್ಷದಷ್ಟು ಹಳೆಯದಾಗಿದ್ದು, ಅದನ್ನು ಅಭಿವೃದ್ಧಿಪಡಿಸಲು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಲೋಕಸಭೆ ಮತ್ತು ರಾಜ್ಯ ಸಭೆ ಕಾರ್ಯಕಲಾಪವನ್ನು ನೇರ ಪ್ರಸಾರ ಮಾಡುವ ಬೇಸಿಲ್ (Broadcast Engineering Consultants India Limited) ಸಂಸ್ಥೆ ಸಭೆಯಲ್ಲಿ ನೇರ ಪ್ರಸಾರದ ತಾಂತ್ರಿಕ ಮಾಹಿತಿಯನ್ನು ಒಳಗೊಂಡ ಪ್ರಾತ್ಯಕ್ಷಿಕೆಯನ್ನು ನೀಡಿತು. [ವಿಧಾನಸಭೆ ಕಲಾಪವನ್ನು ಸರ್ಕಾರಿ ಚಾನೆಲ್ ನಲ್ಲಿ ನೋಡಿ]
ಡಿಜಿಟಲ್ ತಂತ್ರಜ್ಞಾನದ ಮುಖಾಂತರ ವಿಧಾನಮಂಡಲದ ಉಭಯಸದನಗಳ ಕಾರ್ಯಕಲಾಪಗಳನ್ನು ಪ್ರಸಾರ ಮಾಡುವ ಸಲುವಾಗಿ ಬೆಸಿಲ್ ಸಂಸ್ಥೆ ಪ್ರಸ್ತುತಪಡಿಸಿದ ತಂತ್ರಜ್ಞಾನದ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ, ಪರಿಷತ್ ಸಭಾಪತಿ ಡಿ. ಎಚ್. ಶಂಕರಮೂರ್ತಿ, ಕಾನೂನು ಸಚಿವ ಟಿ. ಬಿ. ಜಯಚಂದ್ರ, ವಾರ್ತಾ ಸಚಿವ ರೋಷನ್ ಬೇಗ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications