BPL Card: ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಸಮಸ್ಯೆ: ರೊಚ್ಚಿಗೆದ್ದ ಫಲಾನುಭವಿಗಳು ಹೇಳೋದೇನು ಗೊತ್ತಾ?
BPL Card: ಇದೀಗ ಯಾವುದೇ ಸರ್ಕಾರಿ ಕೆಲಸಗಳಿಗೆ ಬೇಕಾಗುವ ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿಯೂ ಒಂದಾಗಿದೆ. ಇನ್ನು ಲೋಕಸಭೆ ಚುನಾವಣೆ ಬಳಿಕ ಇದೀಗ ಕಳೆ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸರ್ವರ್ ತುಂಬಾ ಸ್ಲೋ ಆಗಿರುವ ಹಿನ್ನೆಲೆ ಜನರು ಅಧಿಕಾರಿಗಳ ವಿರುದ್ದ ಆಕ್ರೋಶ ಹೊರಹಾಕುತ್ತಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ಬಿಪಿಎಲ್ ರೇಷನ್ ಕಾರ್ಡ್ ತಿದ್ದುಪಡಿ ಕಾರ್ಯವನ್ನು ನಿಲ್ಲಿಸಲಾಗಿತ್ತು. ಇದೀಗ ಚುನಾವಣೆ ಮುಗಿದಿರುವ ಹಿನ್ನೆಲೆ ಕಳೆದ ಮೂರು ದಿನಗಳಿಂದ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಆಹಾರ ಇಲಾಖೆ ಅವಕಾಶ ಕಲ್ಪಿಸಿದೆ. ಆದರೆ ಸರ್ವರ್ ಡೌನ್ ಆಗಿರುವುದರಿಂದ ಜನರು ಅಧಿಕಾರಿಗಳ ವಿರುದ್ಧ ಕೆಂಡಕಾರುತ್ತಿದ್ದಾರೆ.

ಸರ್ವರ್ ಡೌನ್ ಹಿನ್ನೆಲೆ ಜನರು ಕಾರ್ಡ್ಗಳನ್ನು ತಿದ್ದುಪಡಿ ಮಾಡಲಾಗದೇ ಬೇಸತ್ತು ಹೋಗಿದ್ದಾರೆ. ಬೆಂಗಳೂರು ಒನ್ ಸೆಂಟರ್ಗಳಲ್ಲಿ ಸರ್ವರ್ ಸಮಸ್ಯೆ ಆಗಿದ್ದು, ಇದರಿಂದ ಫಲಾನುಭವಿಗಳು ಪ್ರತಿದಿನ ಕಾದು ನಿಂತು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮೂರು ತಿಂಗಳ ಬಳಿಕ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ಇದಕ್ಕೆ ಸಮಯವನ್ನು ಸಹ ನಿಗದಿಪಡಿಸಲಾಗಿದೆ. ಪ್ರತಿದಿನ ಬೆಳ್ಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯವರೆಗೂ, ಮತ್ತೆ ಸಂಜೆ 4ರಿಂದ 6 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಪ್ರತಿ ದಿನ ಈ ಸಮಯಕ್ಕೆ ಫಲಾನುಭವಿಗಳು ತಿದ್ದುಪಡಿಗೆಂದು ಬಂದರೆ, ಸರ್ವರ್ ಸಮಸ್ಯೆ ಕಾಡುತ್ತಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮಾಂತರ ಒನ್ ಕೇಂದ್ರಗಳಲ್ಲಿ ನಿಂತು.. ನಿಂತು ಜನರು ಬೇಸತ್ತು ಹೋಗಿದ್ದಾರೆ.
ಇದರಿಂದ ಹಣವು ಇಲ್ಲದೇ.. ಅಕ್ಕಿಯೂ ಇಲ್ಲದೇ ಬಿಪಿಎಲ್ ಫಲಾನುಭವಿಗಳು ಪರದಾಡುವಂತಹ ಪರಿಸ್ಥಿನಿ ನಿರ್ಮಾಣವಾಗಿದೆ. ನಾವು ನಮ್ಮ ದಿನಗೂಲಿ ಬಿಟ್ಟು ಕ್ಯೂ ನಿಂತುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಹೀಗೆ ಪ್ರತಿದಿನ ಆದರೆ ನಮ್ಮ ದಿನಗೂಲಿ ಹಣವೂ ಕೈತಪ್ಪಿ ಹೋಗುತ್ತದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.
ಮತ್ತೊಂದೆಡೆ ಹೆಚ್ಚಿನ ಸಂಖ್ಯೆಯಲ್ಲಿ ಫಾಲಾನುಭವಿಗಳು ಬರುತ್ತಿರುವುದರಿಂದ ಜನರನ್ನು ನಿಭಾಯಿಸುವುದಕ್ಕೆ ಕಷ್ಟ ಆಗುತ್ತಿದೆ ಎಂದು ಬೆಂಗಳೂರು ಒನ್ ಸಿಬ್ಬಂದಿ ಹೇಳುತ್ತಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications