ಸೆ.17 ರಿಂದ ಅ.2 ರವರೆಗೆ ವಿವಿಧ ಸೇವಾ ಕಾರ್ಯಕ್ರಮ: ಸಿ.ಟಿ. ರವಿ
ಬೆಂಗಳೂರು, ಸೆಪ್ಟಂಬರ್ 04: ಸೆಪ್ಟಂಬರ್ 17 ರಿಂದ ಅಕ್ಟೋಬರ್ 2ರ ವರೆಗೆ ಇರುವ ವಿವಿಧ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರ ಜನ್ಮದಿನ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಈ ಅವಧಿಯಲ್ಲಿ 'ಸೇವಾ ಪಾಕ್ಷಿಕ' ದಿನಾಚರಣೆ ಆಚರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಭಾನುವಾರ ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ ತಿಂಗಳ ಸೆಪ್ಟಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ ಇದೆ. ಸೆಪ್ಟಂಬರ್ 25ರಂದು ಬಿಜೆಪಿ ಸಂಸ್ಥಾಪಕರಲ್ಲಿ ಒಬ್ಬರಾದ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಹಾಗೂ ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಇದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇವಾ ಪಾಕ್ಷಿಕ ಆಚರಿಸಲಿದ್ದಾರೆ.
ಸೆಪ್ಟಂಬರ್ 17ರಂದು ಪ್ರಧಾನಿ ಜನ್ಮದಿನ ಅಂಗವಾಗಿ ಬಿಜೆಪಿ ಯುವಾ ಮೋರ್ಚಾ ವತಿಯಿಂದ ದೇಶಾದ್ಯಂತ ರಕ್ತದಾನ ಶಿಬಿರ ಏರ್ಪಡಿಸಲಿದೆ. ಪ್ರತಿ ಆಸ್ಪತ್ರೆಯಲ್ಲಿ ರಕ್ತ ದಾನಿಗಳ ವಿವರ ಸಿಗುವಂತೆ ಮಾಡಲಾಗುವುದು. ಆರೋಗ್ಯ ಶಿಬಿರವನ್ನೂ ಆಯೋಜಿಸಲಿದ್ದೇವೆ. ಅಲ್ಲದೆ ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ ಶಿಬಿರ ಏರ್ಪಡಿಸಲಾಗುವುದು ಎಂದು ವಿವರಿಸಿದರು.

ಕೆರೆ, ಬಾವಿ ಸ್ವಚ್ಚತಾ ಅಭಿಯಾನ
75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೆ 75 ಕೆರೆಗಳ ನಿರ್ಮಾಣಕ್ಕೆ ಸರಕಾರ ನಿರ್ದೇಶನ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅಮೃತ ಸರೋವರ ನಿರ್ಮಾಣ ಆಗಿದೆ. ಈ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು ನದಿ, ಕೆರೆ, ಬಾವಿಗಳ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವರು. ಸಸಿಗಳನ್ನೂ ನೆಡಲಿದ್ದಾರೆ.
2025ಕ್ಕೆ ಭಾರತವು ಕ್ಷಯ ರೋಗದಿಂದ ಮುಕ್ತ ಆಗಬೇಕೆಂಬುದು ನರೇಂದ್ರ ಮೋದಿಯವರ ಸಂಕಲ್ಪವಾಗಿದೆ. ಅದಕ್ಕಾಗಿ ಪ್ರತಿ ಕಾರ್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು 5 ಜನ ರೋಗಿಗಳಿಗೆ ಮಾರ್ಗದರ್ಶನ, ಚಿಕಿತ್ಸಾ ವ್ಯವಸ್ಥೆ, ಪೂರಕ ಬೆಂಬಲ ಕೊಡಲಿದ್ದಾರೆ ಎಂದರು.

ಕಾಂಗ್ರೆಸ್ ಅವಧಿಯ ಹಗರಣ ಬಯಲಿಗೆ
ಇನ್ನು ಜನಸಂವಾದ, ಜನೋತ್ಸವ ಕಾರ್ಯಕ್ರಮಗಳನ್ನೂ ಆಯೋಜಿಸಲು ಮುಖ್ಯಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಯೋಜನೆಗಳನ್ನು ಈಗಾಗಲೇ ರೂಪಿಸಲಾಗಿದೆ. ಕಾಂಗ್ರೆಸ್ ಕಾಲದಲ್ಲಿ ನಡೆಸಿ ಮರೆಮಾಚಿದ ಹಗರಣಗಳನ್ನೂ ಬಯಲಿಗೆ ಎಳೆಯಬೇಕು. ಆ ಹಗರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಇಂದು ಸುದೀರ್ಘವಾಗಿ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಫಲಾನುಭವಿಗಳು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶೇ 65ರಿಂದ 80 ಪ್ರತಿಶತದಷ್ಟಿದ್ದಾರೆ. ಈ ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸುವ ಕುರಿತು ಪ್ರಮುಖ ಸಭೆಯಲ್ಲಿ ವಿವರವಾಗಿ ಚರ್ಚೆ ನಡೆಸಿ, ಕಾರ್ಯಯೋಜನೆ ತಯಾರಿಸಲಾಗಿದೆ.

ರಾಜಕಾಲುವೆ ಒತ್ತುವರಿ ಯಾವಾಗಿನಿಂದ?
ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಯಾರೂ ಹಾಳು ಮಾಡಲು ಸಾಧ್ಯವಿಲ್ಲ. ಮೂಲಸೌಕರ್ಯ ಮೂರು ದಿನಗಳಲ್ಲಿ ಮಾಡುವುದೇ? ಅಥವಾ 3 ವರ್ಷದಲ್ಲಿ ಮಾಡುವುದೇ? ರಾಜಕಾಲುವೆಯನ್ನು ಒತ್ತುವರಿ ಮಾಡಿ ನಿರ್ಮಾಣ ನಡೆಸಿದ್ದು ಬಿಜೆಪಿ ಸರ್ಕಾರ ಬಂದ ಮೇಲೋ ಅಥವಾ ಹತ್ತಿಪ್ಪತ್ತು ವರ್ಷದ ಹಿಂದಿನಿಂದಲೂ ರಾಜಕಾಲುವೆ ಒತ್ತುವರಿ ಪ್ರವೃತ್ತಿ ನಡೆದುಕೊಂಡು ಬಂದಿದೆಯೇ? ಕೆರೆಗಳನ್ನು ಮುಳುಗಿಸಿದ್ದು ಯಾರು? ಕೆರೆಗಳನ್ನು ಅಕ್ರಮ ಬಡಾವಣೆಯಾಗಿ ನಿರ್ಮಿಸಿದವರು ಯಾರು? ಅವರೆಲ್ಲರೂ ಉತ್ತರಿಸಬೇಕಾಗುತ್ತದೆ ಎಂದು ಸುದ್ದಿಗಾರರ ಕೆಲವು ಸಿ.ಟಿ.ರವಿ ಉತ್ತರಿಸಿದರು.

ಅತೀವೃಷ್ಟಿಗೂ ಎಚ್ಡಿಕೆಯೇ ಕಾರಣ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜಲಧಾರೆ ಕಾರ್ಯಕ್ರಮದಿಂದ ರಾಜ್ಯದ ತುಂಬ ಮಳೆ ಆಗಿದೆ ಎಂದಿದ್ದಾರೆ. ಅವರಿಂದಲೇ ಮಳೆ ಆಗಿದ್ದರೆ ಅತಿವೃಷ್ಟಿಗೂ ಅವರೇ ಕಾರಣ ಇರಬೇಕಲ್ಲವೇ ಎಂದು ಕೇಳಿದರು. ರಾಮನಗರಕ್ಕೆ ಜಾಸ್ತಿ ಪ್ರೀತಿ ಇದ್ದ ಕಾರಣ ಅತಿ ಹೆಚ್ಚು ಮಳೆ ಬಂದಿರಬೇಕು ಎಂದು ನುಡಿದರು. ಅವರ ಹೇಳಿಕೆ ಸತ್ಯ ಎಂದು ಭಾವಿಸುವುದಿಲ್ಲ. ಇವರು ಜಲಧಾರೆ ಮಾಡಿದ್ದು ಕರ್ನಾಟಕದಲ್ಲಿ. ಆದರೆ ದೇಶದ ತುಂಬೆಲ್ಲ ಮಳೆಯಾಗಿದೆ ಎಂದು ಅವರು ಲೇವಡಿ ಮಾಡಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications