ಸದ್ದು. ನಮ್ಮ ಹುಡುಗರು, ಹುಡುಗಿಯರು ಪರೀಕ್ಷೆ ಬರೀತಾಯಿದಾರೆ
ಯುಗಾದಿ ಹಬ್ಬದ ಮರು ದಿನ ಗುರುವಾರ 8.77 ಲಕ್ಷ 10ನೇ ತರಗತಿ ವಿದ್ಯಾರ್ಥಿಗಳು, 2,770 ಪರೀಕ್ಷಾ ಕೇಂದ್ರಗಳಲ್ಲಿ ಪಬ್ಲಿಕ್ ಪರೀಕ್ಷೆ ಬರೆಯಲಿದ್ದಾರೆ.
ಬೆಂಗಳೂರು, ಮಾರ್ಚ್ 30: ಇಂದಿನಿಂದ (ಗುರುವಾರ) 8.77 ಲಕ್ಷ 10ನೇ ತರಗತಿ ವಿದ್ಯಾರ್ಥಿಗಳು 2,770 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಸಾರ್ವಜನಿಕ ಮಾಹಿತಿ ಆಯುಕ್ತೆ ಸೌಜನ್ಯ ಮತ್ತು ಕೆಎಸ್ಇಇಬಿ ನಿರ್ದೇಶಕಿ ಯಶೋದಾ ಬೋಪಣ್ಣ ಪರೀಕ್ಷೆಯ ವಿವರಗಳ ಮಾಹಿತಿ ನೀಡಿದರು.[ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ]
ಪರೀಕ್ಷೆ ಬರೆಯಲಿರುವ ಒಟ್ಟು 8.77 ಲಕ್ಷ ವಿದ್ಯಾರ್ಥಿಗಳಲ್ಲಿ 4.69 ಲಕ್ಷ ಬಾಲಕರು ಹಾಗೂ 4.07 ಲಕ್ಷ ಬಾಲಕಿಯರಾಗಿದ್ದಾರೆ.
ನಿಯಮ ಕೈಬಿಟ್ಟ ಇಲಾಖೆ
ಆರಂಭದಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪರೀಕ್ಷೆಗೆ 5 ನಿಮಿಷ ತಡವಾಗಿ ಬಂದರೂ ಪರೀಕ್ಷಾ ಕೊಠಡಿಗೆ ಪ್ರವೇಶ ನಿಷೇಧ ಎಂಬ ಸುತ್ತೋಲೆ ಹೊರಡಿಸಿತ್ತು. ಆದರೆ ವಿದ್ಯಾರ್ಥಿಗಳು ಮತ್ತು ಪೋಷಕರ ತೀವ್ರ ಒತ್ತಡದಿಂದಾಗಿ ನಿಯಮ ಕೈಬಿಟ್ಟಿದ್ದು 15 ನಿಮಿಷ ತಡವಾಗಿ ಬಂದರೂ ಪರೀಕ್ಷಾ ಕೊಠಡಿಗೆ ಪ್ರವೇಶ ಅವಕಾಶ ಕಲ್ಪಿಸಿದೆ. 9.30 ಕ್ಕೆ ಪರೀಕ್ಷೆ ಆರಂಭವಾಗಲಿದ್ದು 9.45ರ ವರೆಗೂ ಕೊಠಡಿಗೆ ವಿದ್ಯಾರ್ಥಿಗಳು ಬರಬಹುದು.[ಎಸ್ಸೆಸ್ಸೆಲ್ಸಿ ಪರೀಕ್ಷೆ, ಜಾಗೃತದಳದವರಿಗೂ ಮೊಬೈಲ್ ಫೋನ್ ನಿಷೇಧ]

ಪರೀಕ್ಷಾ ಕೇಂದ್ರಗಳು
ಸೂಕ್ಷ್ಮ - 72
ಅತೀ ಸೂಕ್ಷ್ಮ - 17
ಸರಕಾರಿ ಶಾಲೆಗಳು - 1,092
ಅನುದಾನಿತ ಶಾಲೆಗಳು - 1,084
ಖಾಸಗಿ ಶಾಲೆಗಳು - 594
ಒಟ್ಟು - 2,770

ವಿದ್ಯಾರ್ಥಿಗಳು- ನಗರ
ಬಾಲಕರು - 2,02,707
ಬಾಲಕಿಯರು - 1,87,625
ಗ್ರಾಮೀಣ
ಬಾಲಕರು - 2,67,128
ಬಾಲಕಿಯರು - 2,19,714
ಒಟ್ಟು - 8,77,174

ನಕಲು ತಡೆಯಲು ಬಿಗಿ ಭದ್ರತೆ
40 ಸಿಸಿಟಿವಿ ಕ್ಯಾಮೆರಾಗಳನ್ನು ಕೆಎಸ್ಇಇಬಿ ಕಚೇರಿಯಲ್ಲಿ ಅಳವಡಿಸಲಾಗಿದೆ. 30 ಜಿಲ್ಲಾ ಖಜಾನೆಗಳಲ್ಲೂ ಸಿಸಿಟಿವಿ ಅಳವಡಿಸಲಾಗಿದೆ. ದಿನದ 24 ಗಂಟೆಯೂ ಖಜಾನೆಗಳಿಗೆ ಭದ್ರತೆ ಒದಗಿಸಲಾಗಿದೆ. ಇನ್ನು 2,770 ಪರೀಕ್ಷಾ ಕೇಂದ್ರಗಳಲ್ಲಿ 1,184 ಕಡೆಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಈ ಮೂಲಕ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬುಕ್ ಲೆಟ್ ಇಲ್ಲ
ಹಿಂದಿನ ವರ್ಷದ ವರೆಗೆ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯನ್ನು ಒಳಗೊಂಡ ಬುಕ್ ಲೆಟ್ ನೀಡಲಾಗುತ್ತಿತ್ತು. ವಿದ್ಯಾರ್ಥಿಗಳು ಇದರಲ್ಲೇ ಉತ್ತರ ಬರೆಯಬೇಕಾಗಿತ್ತು. ಆದರೆ ಈ ಬಾರಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಯನ್ನು ಬೇರೆ ಬೇರೆಯಾಗಿ ನೀಡಲಾಗುತ್ತದೆ. ಪರೀಕ್ಷೆ ಬರೆದು ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಮನೆಗೆ ಕೊಂಡೊಯ್ಯಬಹುದು.

ಸಹಾಯವಾಣಿ
ಎಸ್ಎಸ್ಎಲ್ಸಿ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಪರೀಕ್ಷಾ ದಿನಗಳಲ್ಲಿ ಮಧ್ಯಾಹ್ನ 2.30ರವರೆಗೆ ಈ ಸಹಾಯವಾಣಿ ಕಾರ್ಯಾಚರಿಸಲಿದೆ. ಸಹಾಯವಾಣಿ ಸಂಖ್ಯೆ 080-23310075, 76.

ಉಚಿತ ಬಸ್ ಪಾಸ್
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ತಲುಪಲು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ನಿರ್ವಾಹಕರಿಗೆ ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳುವ ವ್ಯವಸ್ಥೆಯನ್ನು ಮಾಡಲಾಗಿದೆ.
-
SSLC: ಹಿಂದಿ ಪರೀಕ್ಷೆಯಲ್ಲಿ ಅಂಕ ಲೆಕ್ಕಕ್ಕೆ ಇಲ್ಲ: ವಿದ್ಯಾರ್ಥಿಗಳ ಹೊರೆ ಇಳಿಕೆ, ಸರ್ಕಾರದ ನಿರ್ಧಾರಕ್ಕೆ ಬೆಂಬಲ ಕೊಟ್ಟ ಕರವೇ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications