Get Updates
Get notified of breaking news, exclusive insights, and must-see stories!

15 ಡಿನೋಟಿಫಿಕೇಶನ್ ಪ್ರಕರಣದಲ್ಲಿ ಯಡಿಯೂರಪ್ಪ ಖುಲಾಸೆ

Recommended Video

      ಬಿ ಎಸ್ ಯಡಿಯೂರಪ್ಪನವರಿಗೆ ವಿಶೇಷ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್ | Oneindia Kannada

      ಬೆಂಗಳೂರು, ಆಗಸ್ಟ್ 28 : ರಾಚೇನಹಳ್ಳಿ ಡಿನೋಟಿಫಿಕೇಶನ್ ಸೇರಿದಂತೆ 15 ಪ್ರಕರಣಗಳಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಖುಲಾಸೆಗೊಂಡಿದ್ದಾರೆ. ತಾಂತ್ರಿಕ ಕಾರಣಗಳನ್ನು ನೀಡಿ ಅವರನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ.

      ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ರಾಚೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಸಹ ಯಡಿಯೂರಪ್ಪ ಅವರನ್ನು ಖುಲಾಸೆಗೊಳಿಸಿತ್ತು.

      Sessions court acquits Yeddyurappa in 15 denotification cases

      ಸಿರಾಜಿನ್ ಬಾಷಾ ಮತ್ತು ಬಾಲಕೃಷ್ಣ ಅವರು ಯಡಿಯೂರಪ್ಪ ವಿರುದ್ಧ ದೂರು ಸಲ್ಲಿಸಿದ್ದರು. ದೂರು ಸಲ್ಲಿಸುವ ಮೊದಲು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದಿಲ್ಲ ಎಂಬ ಕಾರಣ ನೀಡಿ, ಪ್ರಕರಣಗಳಿಂದ ಖುಲಾಸೆಗೊಳಿಸಲಾಗಿದೆ.

      ರಾಚೇನಹಳ್ಳಿ ಡಿನೋಟಿಫಿಕೇಶನ್ ಸೇರಿದಂತೆ 15 ಪ್ರಕರಣಗಳಲ್ಲಿ ಯಡಿಯೂರಪ್ಪ ಆರೋಪಿಯಾಗಿದ್ದರು. ಎಲ್ಲಾ ಪ್ರಕರಣದಲ್ಲಿಯೂ ಅವರನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ. ಈ ಹಿಂದೆ ಎಲ್ಲಾ ಪ್ರಕರಣಗಳಲ್ಲಿ ಯಡಿಯೂರಪ್ಪ ಅವನ್ನು ಕರ್ನಾಟಕ ಹೈಕೋರ್ಟ್ ಸಹ ಖುಲಾಸೆಗೊಳಿಸಿತ್ತು.

      ರಾಚೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಎಸ್‌.ಆರ್.ಹಿರೇಮಠ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಕೋರ್ಟ್ ಖುಲಾಸೆ ಮಾಡಿತ್ತು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+