ಕಂದಾಯ ಇಲಾಖೆ ತಕರಾರು ಅರ್ಜಿ ಬಾಕಿ: ಇತ್ಯರ್ಥಗೊಳಿಸಲು ಡೆಡ್‌ಲೈನ್‌ ಫಿಕ್ಸ್‌

ಬೆಂಗಳೂರು ಮಾರ್ಚ್ 28: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ.20ಕ್ಕೆ ಎರಡು ವರ್ಷವಾಗಲಿದೆ. ಅಷ್ಟರೊಳಗೆ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದರು.

ಗುರುವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, "ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 32,787 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ ಶೇ.82 ರಷ್ಟು ಸರಾಸರಿಯಲ್ಲಿ 26,961 ಪ್ರಕರಣಗಳಿಗೆ ಇದೀಗ ಮುಕ್ತಿ ನೀಡಲಾಗಿದೆ. ಇದೇ ಸಮಯದಲ್ಲಿ ಒಂದು ವರ್ಷಕ್ಕೆ ಮೇಲ್ಪಟ್ಟ 59,339 ಪ್ರಕರಣಗಳ ಪೈಕಿ 40,394 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ" ಎಂದು ಅಧಿಕಾರಿಗಳ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದರು.

Settle Pending Dispute Cases in AC Courts by May 20 Krishna Byre Gowda s Directive

ಮುಂದುವರೆದು, "ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದೀರಿ. ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ವಿಲೇವಾರಿ ವೇಗ ಪಡೆಯುತ್ತಿದೆ. ಆದರೂ, ಎರಡು ವರ್ಷದಲ್ಲಿ ಎಲ್ಲಾ ಬಾಕಿ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು ಎಂಬ ಇಲಾಖೆಯ ಗುರಿಯನ್ನು ಮುಟ್ಟಲು ಸಾಧ್ಯವಾಗಿಲ್ಲ. ಪರಿಣಾಮ ಇನ್ನೂ 22,967 ಪ್ರಕರಣಗಳು ಬಾಕಿ ಇವೆ. ಮುಂದಿನ ಮೇ 20ಕ್ಕೆ ಸರ್ಕಾರಕ್ಕೂ ಎರಡು ವರ್ಷ ತುಂಬುತ್ತಿದ್ದು, ಅಷ್ಟರೊಳಗೆ ಈ ಪೈಕಿ ಕನಿಷ್ಟ 10 ರಿಂದ 12 ಸಾವಿರ ಪ್ರಕರಣಗಳನ್ನು ಇತ್ಯರ್ಥಗೊಳಿಸಿ" ಎಂದರು

ಅಲ್ಲದೆ, "ಸರ್ಕಾರದ ಕಾನೂನಿನಂತೆ ಎಸಿ ನ್ಯಾಯಾಲಯದ ಪ್ರಕಣಗಳನ್ನು ಆರು ತಿಂಗಳ ಒಳಗೆ ಮುಗಿಸಬೇಕು ಎಂಬ ನಿಯಮ ಇದೆ. ಆದರೂ, ನಿಮಯ ಮೀರಿ ಐದು ವರ್ಷಕ್ಕೂ ಮೇಲ್ಪಟ್ಟ 5826ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಆದ್ಯತೆ ಮೇರೆ ಶೀಘ್ರ ವಿಲೇವಾರಿಗೊಳಿಸಬೇಕು. ಜೊತೆಗೆ ಉಪ ವಿಭಾಗಾಧಿಕಾರಿಗಳು ತಿಂಗಳಿಗೆ 300 ಹಾಗೂ ವಿಶೇಷ ಉಪ ವಿಭಾಗಾಧಿಕಾರಿಗಳು ತಿಂಗಳಿಗೆ ಕನಿಷ್ಟ 150 ಪ್ರಕರಣಗಳನ್ನು ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಅಭಿಯಾನ ಮಾದರಿಯಲ್ಲಿ ಇತ್ಯರ್ಥಗೊಳಿಸಲಾಗುತ್ತಿದೆ. ಬಾಕಿ ಪ್ರಕರಣಗಳ ಇತ್ಯರ್ಥ ಹಿಂದೆದಿಗಿಂತಲೂ ಭಾರೀ ಮಟ್ಟದಲ್ಲಿ ಸುಧಾರಣೆಯಾಗಿದೆ. ಈ ನಡುವೆ ಪ್ರಕರಣಗಳ ಗುಣಮಟ್ಟದ ವಿಲೇವಾರಿಗೂ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಿರುವುದು ಉತ್ತಮ ಬೆಳವಣಿಗೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮೆಚ್ಚುಗೆ ಸೂಚಿಸಿದರು.

ಎಸಿ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ ಪ್ರಕರಣಗಳ ಪೈಕಿ ಶೇ.80 ರಷ್ಟು ಹಾಗೂ ಒಂದು ವರ್ಷಕ್ಕೆ ಮೇಲ್ಪಟ್ಟ ಶೇ.70 ರಷ್ಟು ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಆದರೆ, ಡಿಸಿ ನ್ಯಾಯಾಲಯಕ್ಕೆ ಬಂದಿರುವ ಮೇಲ್ಮನವಿಗಳ ಸಂಖ್ಯೆ ಕೇವಲ ಶೇ.6 ರಷ್ಟು ಮಾತ್ರ. ಈ ಸಂಖ್ಯೆ ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಗುಣಮಟ್ಟದ ಇತ್ಯರ್ಥಕ್ಕೆ ಸಾಕ್ಷಿಯಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಗುಣಮಟ್ಟದ ಬಗ್ಗೆ ಪ್ರಶ್ನೆ ಏಳಬಹುದು. ಹೀಗಾಗಿ ಅಧಿಕಾರಿಗಳು ಎಂದಿನಂತೆ ಎಚ್ಚರ ವಹಿಸಬೇಕಿದೆ ಎಂದು ತಿಳಿಸಿದರು.

ʼಭೂ ಸುರಕ್ಷಾ ʼ ಯೋಜನೆಯ ಅಡಿಯಲ್ಲಿ ಈಗಾಗಲೇ ಭೂ ಮಾಪನಾ ಇಲಾಖೆ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಉಪ ವಿಭಾಗಾಧಿಕಾರಿಗಳ ಕಚೇರಿಗಳಲ್ಲೂ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಬೇಕು. ಅಲ್ಲದೆ, ಇಂಟರ್ ಲಿಂಕ್ ಮಾಡಿ ಸಾರ್ವಜನಿಕ ಡೊಮೈನ್ನಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಕಂದಾಯ ಇಲಾಖೆಯಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಿದ್ರೆ ಜನ ಗುರುತಿಸುತ್ತಾರೆ. ಇದನ್ನೇ ಪ್ರೇರಕ ಶಕ್ತಿಯನ್ನಾಗಿಸಿಕೊಂಡು ಜನರಿಗಾಗಿ ಮತ್ತಷ್ಟು ಕೆಲಸ ಮಾಡಲು ಶಕ್ತಿಮೀರಿ ಶ್ರಮಿಸಬೇಕು. ಇದರಿಂದ ಇಲಾಖೆ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ, ಜನರಿಗೂ ಒಳ್ಳೆಯದಾಗುತ್ತದೆ ಎಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+