ಅಯ್ಯೋ ದೇವರೇ..ಹಾಸನ ಮಾತ್ರವಲ್ಲ ಈ ಜಿಲ್ಲೆಯಲ್ಲೂ ಹೃದಯಾಘಾತಕ್ಕೆ ಹಲವರು ಬಲಿ; ಜೂನ್ನಲ್ಲಿ ಇಷ್ಟೊಂದು ಸಾವು
ಬೆಂಗಳೂರು, ಜುಲೈ 01: ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ 40 ದಿನಗಳ ಅಂತರದಲ್ಲಿ ಬರೋಬ್ಬರಿ 23 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹಾಸನದಲ್ಲಿ ಕಳೆದ ಒಂದೂವರೆ ತಿಂಗಳಿನಲ್ಲಿ 23 ಕ್ಕೂ ಹೆಚ್ಚು ಮಂದಿ ಹೃದಯಾಘಾತಕ್ಕೆ ಬಲಿಯಾಗಿರುವುದು ಜಿಲ್ಲೆಯ ಜನರಲ್ಲಿ ಮತ್ತು ರಾಜ್ಯದ ಜನತೆಯಲ್ಲಿ ತೀವ್ರ ಆತಂಕವನ್ನು ಹೆಚ್ಚಿಸಿದ್ದು, ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ ನಾಲ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಕೊರೊನಾ ನಂತರ ಜನರ ಆರೋಗ್ಯ ಸಮಸ್ಯೆ ತೀವ್ರವಾಗಿ ಆರೋಗ್ಯ ಹದಗೆಡುತ್ತಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಹಲವು ಯುವಕರು ಬಲಿಯಾಗುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತಕ್ಕೆ ಸರಣಿ ಸಾವು ಸಂಭವಿಸುತ್ತಿರುವುದರ ಕುರಿತು ತನಿಖೆ ನಡೆಸಲು ಸಮಿತಿಯನ್ನೂ ಸಹ ಈಗಾಗಲೇ ರಾಜ್ಯ ಸರ್ಕಾರ ರಚಿಸಿದೆ. ಇಷ್ಟು ಗಂಭೀರ ಸ್ವರೂಪವನ್ನು ಪಡೆದುಕೊಂಡಿರುವ ಹೃದಯಾಘಾತದ ಸಮಸ್ಯೆ ಕೇವಲ ಹಾಸನ ಮಾತ್ರವಲ್ಲದೇ ಚಿತ್ರದುರ್ಗ ಜಿಲ್ಲೆಯಲ್ಲೂ ಕಾಡಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಕೋಟೆನಾಡು ಚಿತ್ರದುರ್ಗದ ಜನತೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ 23 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಜೂನ್ ತಿಂಗಳೊಂದರಲ್ಲಿಯೇ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕಂಬಾಳಿಮಠ ತಿಳಿಸಿದ್ದಾರೆ. ಈ ಪೈಕಿ ಚಿತ್ರದುರ್ಗ ನಗರದಲ್ಲಿ ನಾಲ್ವರು, ಮೊಳಕಾಲೂರಿನಲ್ಲಿ ನಾಲ್ವರು, ಹೊಸದುರ್ಗದಲ್ಲಿ ಓರ್ವ, ಚಳ್ಳಕೆರೆಯಲ್ಲಿ ಇಬ್ಬರು ಹಾಗೂ ಹಿರಿಯೂರಿನಲ್ಲಿ ಮೂವರು ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
-
ಡಿಕೆಶಿ ನನ್ನದು ಹಾಲು-ಜೇನಿನಂತಹ ಸಂಬಂಧ, ಹುಳಿ ಹಿಂಡಲು ಬರಬೇಡಿ: ಅಶೋಕ್-ಕುಮಾರಸ್ವಾಮಿಗೆ ಸಿದ್ದರಾಮಯ್ಯ ಟಾಂಗ್ -
ಮಧ್ಯಪ್ರಾಚ್ಯ ಸಂಘರ್ಷ: ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ -
ಕರ್ನಾಟಕ ರಾಜಕೀಯದಲ್ಲಿ ಫೋನ್ ಟ್ಯಾಪಿಂಗ್ ಚರ್ಚೆ ಜೋರು: ಗೃಹ ಸಚಿವರು ಹೇಳಿದ್ದೇನು? -
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್












Click it and Unblock the Notifications