ಬಿಜೆಪಿ ಸಮಾವೇಶದಲ್ಲಿ ಅಸಮಾಧಾನ ಬಯಲು: ಹಿರಿಯ ಮುಖಂಡರೇ ಗೈರು
ಬೆಂಗಳೂರು, ಅಕ್ಟೋಬರ್ 15: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಇಷ್ಟೊಂದು ಇದೆಯೆ ಎಂದು ಪ್ರಶ್ನಿಸುವಂತೆ ಮಾಡಿದ್ದು ಶುಕ್ರವಾರ ನಡೆದ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಪಕ್ಷ ಸೇರ್ಪಡೆ ಕಾರ್ಯಕ್ರಮ. ಕೇಂದ್ರ ಗೃಹಸಚಿವ ರಾಜ್ ನಾಥ್ ಸಿಂಗ್ ಅವರೇ ಸ್ವತಃ ಬಂದಿದ್ದು, ದೊಡ್ಡ ಮಟ್ಟದ ಸಮಾವೇಶ ಆಗಬೇಕಿದ್ದದ್ದು, ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತು.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಶಿವರಾಂ ಸೇರ್ಪಡೆ ಕಾರ್ಯಕ್ರಮ ಆಯೋಜಿಸಿದ್ದವರು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ. ಆದರೆ ಇದಕ್ಕೆ ಪಕ್ಷದ ಹಿರಿಯ ನಾಯಕರಾದ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್, ಪ್ರಹ್ಲಾದ್ ಜೋಶಿ ಅಂಥವರೇ ಗೈರಾದರು.[ಬಿಜೆಪಿಯೊಂದಿಗೆ ಕೆ.ಶಿವರಾಂ 'ಮಧುಚಂದ್ರ' ಆರಂಭ]

ಇದು ಹಲವರ ಹುಬ್ಬೇರುವಂತೆ ಮಾಡಿತು. ರಾಜ್ಯ ಬಿಜೆಪಿಯಲ್ಲಿ ನಿಜಕ್ಕೂ ಒಗ್ಗಟ್ಟಿದೆಯಾ ಎಂಬ ಪ್ರಶ್ನೆ ಹುಟ್ಟುಹಾಕಿತು. ಇನ್ನು ನಿರೀಕ್ಷೆಯಷ್ಟು ಜನರನ್ನು ಸೇರಿಸಲು ಸಾಧ್ಯವಾಗದೇ ಹೋದದ್ದು ಕೂಡ ಎದ್ದು ಕಾಣುತ್ತಿತ್ತು. ಆ ಕಾರಣಕ್ಕೆ ಇದೇ ನ್ಯಾಷನಲ್ ಕಾಲೇಜಿನಲ್ಲಿ ಈ ಹಿಂದೆ ಬಿಜೆಪಿಯಿಂದ ಆಯೋಜನೆಯಾಗಿದ್ದ ಕಾರ್ಯಕ್ರಮಗಳಿಗೆ ಇದನ್ನು ಹೋಲಿಸಲು ಸಾಧ್ಯವೇ ಇರಲಿಲ್ಲ.
ಶುಕ್ರವಾರದ ಕಾರ್ಯಕ್ರಮಕ್ಕೆ ಗೈರು ಹಾಜರಾದವರಿಂದ ಯಾವುದೇ ಅಧಿಕೃತ ಸ್ಪಷ್ಟನೆಯೂ ಬಂದಿಲ್ಲ. ವೇದಿಕೆ ಹಿಂಭಾಗದ ಹೋರ್ಡಿಂಗ್ ನಲ್ಲಿ ನಾಯಕರ ಚಿತ್ರಗಳಿದ್ದವೇ ಹೊರತು ಯಾರೂ ಬರಲಿಲ್ಲ. ಈ ಬಗ್ಗೆ ಸ್ವತಃ ಮತನಾಡಿರುವ ಕೆ.ಶಿವರಾಮ್, ನಾನು ಪಕ್ಷಕ್ಕೆ ಸೇರ್ಪಡೆಯಾಗಿದ್ದರ ಬಗ್ಗೆ ಯಾರಿಗಾದರೂ ಅಸಮಾಧಾನ ಇದ್ದರೆ ಅದನ್ನು ಹಿರಿಯ ನಾಯಕರು ನೋಡಿಕೊಳ್ತಾರೆ ಎಂದಿದ್ದಾರೆ.[ದಲಿತ ನಾಯಕ ಕೆ.ಶಿವರಾಂಗೆ ಬಿಜೆಪಿ ರೆಡ್ ಕಾರ್ಪೆಟ್!]
ಈಶ್ವರಪ್ಪನವರನ್ನು ಹಣಿಯುವ ಕಾರಣಕ್ಕೆ ಶಿವರಾಮ್ ನ ಕರೆತರಲಾಗಿದೆ ಎಂಬ ಮಾತು ಕಾರ್ಯಕ್ರಮದ ಮುನ್ನವೇ ಚಾಲ್ತಿಯಲ್ಲಿತ್ತು. ಶಿವರಾಮ್ ಮೂಲಕ ಪರಿಶಿಷ್ಟ ಜಾತಿ ಮತಗಳನ್ನು ಸೆಳೆಯಬಹುದು ಎಂಬುದು ಬಿಜೆಪಿಯ ನಂಬಿಕೆಯಾಗಿದೆ. ಇನ್ನೊಂದು ಕಡೆ ಈಶ್ವರಪ್ಪ ತಮ್ಮನ್ನು ಹಿಂದುಳಿದ ವರ್ಗಗಳ ನಾಯಕ ಎಂದು ಬಿಂಬಿಸುವ ಯತ್ನದಲ್ಲಿದ್ದಾರೆ.
ದಲಿತ ಹಾಗೂ ಹಿಂದುಳಿದ ವರ್ಗಗಳ ಮತ ಬುಟ್ಟಿಯನ್ನು ಗಟ್ಟಿ ಮಾಡಿಕೊಳ್ಳುವುದಕ್ಕಾಗಿಯೇ ಕೆ.ಶಿವರಾಮ್ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಹೇಳಿದೆ. ಆದರೆ ಇದು ಬಿಎಸ್ ವೈ ಇಟ್ಟಿರುವ ರಾಜಕೀಯ ನಡೆ ಎಂದು ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.[ಈಶ್ವರಪ್ಪ ವಿರುದ್ದ 'ದಲಿತ ಬ್ರಹ್ಮಾಸ್ತ್ರ' ಪ್ರಯೋಗಿಸಲು ಬಿಎಸ್ವೈ ಸಜ್ಜು?]
ಇತ್ತೀಚೆಗೆ ಬಿಎಸ್ ವೈ ಹಾಗೂ ಈಶ್ವರಪ್ಪ ಮಧ್ಯದ ಸಂಬಂಧ ಹಳಸಿರುವುದು ಜಗಜ್ಜಾಹೀರಾದ ಸತ್ಯ. ದಲಿತರ ಪಾಲಿನ ನಾಯಕ ಎಂದು ಈಶ್ವರಪ್ಪ ಬಿಂಬಿಸಿಕೊಳ್ಳಲು ಯತ್ನಿಸುತ್ತಿರುವ ವೇಳೆಗೆ ಕೆ.ಶಿವರಾಮ್ ಅವರನ್ನು ಬಿಜೆಪಿಗೆ ಸೆಳೆದು ತರುವ ಮೂಲಕ ಯಡಿಯೂರಪ್ಪ ಸರಿಯಾದ ಏಟು ಹಾಕಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications