Get Updates
Get notified of breaking news, exclusive insights, and must-see stories!

ಕರುನಾಡಿಗೆ ಕಾದಿದೆ ಬಿಸಿಲ ಕಾವು: ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಅಧಿಕ ಬಿಸಿಲು ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಬಿಸಿಲಿನ ತೀವ್ರತೆ ವಿಪರೀತವಾಗಿರಲಿದ್ದು, ಸಾರ್ವಜನಿಕರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.

ಈಗಾಗಲೇ ಹೆಚ್ಚಾದ ತಾಪಮಾನ

ಫೆಬ್ರವರಿ ಅಂತ್ಯದ ಸುಮಾರಿಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಈಗಾಗಲೇ ವಾಡಿಕೆಗಿಂತ ಅಧಿಕವಾಗಿರುವುದು ವರದಿಯಾಗುತ್ತಿದೆ. ಬಿಸಿಲ ನಾಡು ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಕೆಲವೆಡೆ ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್‌ವರೆಗೂ ಹೆಚ್ಚು ಉಷ್ಣಾಂಶ ದಾಖಲಾಗುತ್ತಿದೆ. ಇದರಿಂದಾಗಿ ಜನಸಾಮಾನ್ಯರು ಈಗಲೇ ಸೆಕೆಯಿಂದ ಕಂಗೆಟ್ಟಿದ್ದಾರೆ.

Summer Heat

ತಾಪಮಾನ ಏರಿಕೆಗೆ ಕಾರಣಗಳೇನು?

ಈ ಬಾರಿಯ ವಿಪರೀತ ಬಿಸಿಲಿಗೆ ಹವಾಮಾನದಲ್ಲಿನ ಹಲವು ಬದಲಾವಣೆಗಳು ಪ್ರಮುಖ ಕಾರಣವಾಗಿವೆ. ಜಾಗತಿಕ ತಾಪಮಾನ ಏರಿಕೆ (Global Warming), ವಾತಾವರಣದಲ್ಲಿ ತೇವಾಂಶದ ಕೊರತೆ, ಕಾರ್ಮೋಡಗಳಿಲ್ಲದ ಶುಭ್ರ ಆಕಾಶ, ಹಾಗೂ 'ಲಾ ನಿನಾ' (La Nina) ಪರಿಣಾಮ (ಉಷ್ಣವಲಯದ ಪೆಸಿಫಿಕ್ ಸಾಗರದಲ್ಲಿ ತಾಪಮಾನ ತಂಪಾಗಿರುವುದು) ಸೇರಿದಂತೆ ವಿವಿಧ ನೈಸರ್ಗಿಕ ಕಾರಣಗಳಿಂದಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ 4 ರಿಂದ 5 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ ವಿಶ್ಲೇಷಿಸಿದೆ.

ಉತ್ತರ ಕರ್ನಾಟಕದಲ್ಲಿ 45 ಡಿಗ್ರಿ ತಾಪಮಾನ

ಮುಂದಿನ ಎರಡು ತಿಂಗಳು ಉತ್ತರ ಒಳನಾಡಿನ ಜನತೆಗೆ ಅಕ್ಷರಶಃ ಅಗ್ನಿಪರೀಕ್ಷೆ ಎದುರಾಗಲಿದೆ. ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್. ಪಾಟೀಲ್, "ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಹಾಗೂ ಬಳ್ಳಾರಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್‌ನಿಂದ 45 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ" ಎಂದು ಎಚ್ಚರಿಸಿದ್ದಾರೆ.

ಕೂಲ್‌ ಸಿಟಿ ಬೆಂಗಳೂರಿಗರಿಗೂ ಕಾಡಲಿದೆ ಸೆಕೆ

ಯಾವಾಗಲೂ ತಂಪಾದ ಹವಾಮಾನಕ್ಕೆ ಹೆಸರಾದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಈ ವರ್ಷ ಬಿಸಿಲಿನ ತಾಪ ಗಣನೀಯವಾಗಿ ಹೆಚ್ಚಾಗುವ ಸಂಭವವಿದೆ. ನಗರದಲ್ಲಿ ಉಷ್ಣಾಂಶವು ಬರೋಬ್ಬರಿ 39 ಡಿಗ್ರಿ ಸೆಲ್ಸಿಯಸ್ ತಲುಪಬಹುದು ಎಂದು ಅಂದಾಜಿಸಲಾಗಿದೆ. ವಾಹನ ದಟ್ಟಣೆ ಹಾಗೂ ಕಾಂಕ್ರೀಟ್ ಕಟ್ಟಡಗಳ ಏರಿಕೆಯಿಂದಾಗಿ ನಗರದಲ್ಲಿ ಸ್ಥಳೀಯವಾಗಿ ತಾಪಮಾನ ವಿಪರೀತವಾಗಿ ಏರಿಕೆಯಾಗುತ್ತಿದೆ.

ಹವಾಮಾನ ತಜ್ಞರ ಸಲಹೆ ಮತ್ತು ಮುನ್ನೆಚ್ಚರಿಕೆಗಳು

ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ ಸಾರ್ವಜನಿಕರು, ಅದರಲ್ಲೂ ಮಕ್ಕಳು ಹಾಗೂ ವಯಸ್ಸಾದವರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವುದು ಅತ್ಯಗತ್ಯ ಎಂದು ತಜ್ಞರು ಕಿವಿಮಾತು ಹೇಳಿದ್ದಾರೆ.

1. ಬೇಸಿಗೆಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬಿಸಿಲಿನ ತೀವ್ರತೆ ಗರಿಷ್ಠ ಮಟ್ಟದಲ್ಲಿರುತ್ತದೆ. ಹೀಗಾಗಿ ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬರುವುದನ್ನು ಆದಷ್ಟು ತಪ್ಪಿಸಿ.

2. ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ (Dehydration) ನೋಡಿಕೊಳ್ಳಲು ಆಗಾಗ ಶುದ್ಧ ನೀರನ್ನು ಕುಡಿಯುತ್ತಿರಬೇಕು.

3. ಕಡು ಬಣ್ಣದ ಬಟ್ಟೆಗಳ ಬದಲು, ತಿಳಿ ಬಣ್ಣದ, ಸಡಿಲವಾದ ಹಾಗೂ ಹತ್ತಿಯ (Cotton) ತೆಳ್ಳನೆ ಬಟ್ಟೆಗಳನ್ನು ಧರಿಸುವುದು ಸೂಕ್ತ.

4. ದೇಹದ ಉಷ್ಣಾಂಶ ಹೆಚ್ಚಿಸುವ ಚಹಾ-ಕಾಫಿ ಬದಲು, ತಂಪು ಪಾನೀಯಗಳಾದ ಮಜ್ಜಿಗೆ, ಎಳನೀರು, ನಿಂಬೆ ಹಣ್ಣಿನ ಶರಬತ್ತು ಸೇವಿಸುವುದು ಆರೋಗ್ಯಕ್ಕೆ ಉತ್ತಮ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+