Big Breaking: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಎಸ್ಐಟಿ ವಶಕ್ಕೆ
ಬೆಂಗಳೂರು, ಮೇ. 04: ದೇಶದ ಗಮನವನ್ನೇ ತನ್ನತ್ತ ಸೆಳೆದಿರುವ ಹಾಸನದ ಲಯಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೊನೆಗೂ ಚೇತರಿಕೆ ಕಂಡು ಬಂದಿದೆ. ತಮ್ಮ ಮಗ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಜೊತೆಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ಪಡೆದಿದೆ.
ಲಯಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಅವರಿಗೆ ಜನಪ್ರತಿನಿಧಿ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಜಾಮೀನು ಸಿಗದ ಬೆನ್ನಲ್ಲೇ ಅವರನ್ನು ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ. ಬೆಂಗಳೂರಿನಲ್ಲಿರುವ ಮಾಜಿ ಪ್ರಧಾನಿ ಮತ್ತು ಅವರ ತಂದೆ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಅವರನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಎಚ್ ಡಿ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಕಾಣಿಸಿಕೊಂಡಿರುವ ಅನೇಕ ಮಹಿಳೆಯರಲ್ಲಿ ಒಬ್ಬರಾಗಿದ್ದ ತನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು 20 ವರ್ಷದ ವ್ಯಕ್ತಿಯೊಬ್ಬರು ಮೈಸೂರಿನಲ್ಲಿ ಕೆಆರ್ ನಗರ ಠಾಣೆಯಲ್ಲಿ ಪೊಲೀಸ್ ದೂರು ದಾಖಲಿಸಿದ್ದಾರೆ. ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ.
ಹೊಳೆನರಸೀಪುರದಲ್ಲಿ ಗದ್ದಲ
ಇತ್ತ, ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯ ಭಾಗವಾಗಿ ವಿಶೇಷ ತನಿಖಾ ತಂಡ ಹೊಳೆನರಸೀಪುರದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿತ್ತು. ಈ ವೇಳೆ ಶಾಸಕರ ಬೆಂಬಲಿಗರು ಅವರ ನಿವಾಸಕ್ಕೆ ನುಗ್ಗಿದ್ದರಿಂದ ಕೆಲ ಕಾಲ ಗೊಂದಲ ಉಂಟಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಮತ್ತು ಎಚ್ ಡಿ ರೇವಣ್ಣ ವಿರುದ್ಧ ಎಸ್ಐಟಿ ಶನಿವಾರ ಎರಡನೇ ಲುಕ್ಔಟ್ ನೋಟಿಸ್ ಜಾರಿ ಮಾಡಿದೆ. ಇದರ ಜೊತೆಗೆ ಕೇಂದ್ರ ತನಿಖಾ ದಳವು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದೆ.
ಸತೀಶ್ ಬಾಬುಗೆ 14 ದಿನಗಳ ನ್ಯಾಯಾಂಗ ಬಂಧನ
ಎಚ್ ಡಿ ರೇವಣ್ಣ ಅವರ ಸಹಚರರು ತಮ್ಮ ತಾಯಿಯನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ 20 ವರ್ಷದ ಯುವಕನೊಬ್ಬ ಪೊಲೀಸ್ ದೂರು ದಾಖಲಿಸಿದ್ದಾರೆ. ಮಹಿಳೆಯನ್ನು ಹುಣಸೂರಿನಲ್ಲಿ ಪತ್ತೆಹಚ್ಚಲಾಗಿದೆ ಮತ್ತು ಪ್ರಸ್ತುತ, ಅವರು ಮಹಿಳೆಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಪಹರಣ ಪ್ರಕರಣದ ಆರೋಪಿ ಸತೀಶ್ ಬಾಬು ಅಲಿಯಾಸ್ ಸತೀಶ್ ಬಾಬಣ್ಣನನ್ನು ಪೊಲೀಸರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications