ಎಂಎಲ್ಸಿ ಡಾ. ಸೂರಜ್ ರೇವಣ್ಣ ಜು.1ರ ತನಕ ಸಿಐಡಿ ವಶಕ್ಕೆ
ಬೆಂಗಳೂರು, ಜೂನ್ 24: ಜೆಡಿಎಸ್ ನಾಯಕ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣರನ್ನು ಸಿಐಡಿ ವಶಕ್ಕೆ ನೀಡಲಾಗಿದೆ. ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಭಾನುವಾರ ಅವರನ್ನು ಬಂಧಿಸಲಾಗಿತ್ತು. ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಪುತ್ರ ಡಾ. ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರದ ಗ್ರಾಮಾಂತರ ಠಾಣೆಯಲ್ಲಿ ಶನಿವಾರ ಸಂಜೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.

ಐಪಿಸಿ ಸೆಕ್ಷನ್ 377, 342, 506 ಅಡಿ ಕೇಸ್ ದಾಖಲಾಗಿದ್ದು, ಪೊಲೀಸರು ಭಾನುವಾರ ಮುಂಜಾನೆ 4 ಗಂಟೆಯ ತನಕ ಅವರನ್ನು ವಿಚಾರಣೆ ನಡೆಸಿ, ಬಳಿಕ ಬಂಧಿಸಿದ್ದರು. ಡಾ. ಸೂರಜ್ ರೇವಣ್ಣ ಎಂಎಲ್ಸಿಯಾದ ಕಾರಣ ಅವರನ್ನು ಬೆಂಗಳೂರಿಗೆ ಕರೆತಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಸಿಐಡಿ ವಶಕ್ಕೆ ಡಾ. ಸೂರಜ್ ರೇವಣ್ಣ: ಭಾನುವಾರ ಸಂಜೆ ನ್ಯಾಯಾಧೀಶರು ಡಾ. ಸೂರಜ್ ರೇವಣ್ಣರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಕರ್ನಾಟಕ ಸರ್ಕಾರ ಡಾ. ಸೂರಜ್ ರೇವಣ್ಣ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.
ಆದ್ದರಿಂದ ಸೋಮವಾರ ಸಿಐಡಿ ಪೊಲೀಸರು ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿ ಡಾ. ಸೂರಜ್ ರೇವಣ್ಣ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪೊಲೀಸರ ಮನವಿ ಪರಿಗಣಿಸಿ, ಜುಲೈ 1ರ ತನಕ ಡಾ. ಸೂರಜ್ ರೇವಣ್ಣರನ್ನು ಸಿಐಡಿ ವಶಕ್ಕೆ ನೀಡಿ, ಆದೇಶಿಸಿದೆ.
ಆಪ್ತ ಶಿವಕುಮಾರ್ ನಾಪತ್ತೆ: ಡಾ. ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಯುವಕ ಹಣಕ್ಕಾಗಿ ಸೂರಜ್ಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಠಾಣೆಗೆ ವಿವರಣೆ ನೀಡಲು ಡಾ. ಸೂರಜ್ ರೇವಣ್ಣ ಬಂದಿದ್ದರು. ಆಗ ಪೊಲೀಸರು ಅವರನ್ನು ಬಂಧಿಸಿದ್ದರು.
ಸೂರಜ್ಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂಬ ಆರೋಪದ ಕುರಿತು ಸೂರಜ್ ಆಪ್ತ ಶಿವಕುಮಾರ್ ಪೊಲೀಸರಿಗೆ ದೂರು ನೀಡಿದ್ದರು. ಅರಕಲಗೂಡು ಮೂಲದ ಯುವಕನನ್ನು ಡಾ. ಸೂರಜ್ಗೆ ಪರಿಚಯ ಮಾಡಿಸಿದ್ದು ಇದೇ ಶಿವಕುಮಾರ್ ಎಂಬ ಮಾಹಿತಿ ಇದೆ.
ಶಿವಕುಮಾರ್ ಸೂರಜ್ ಬಳಿ ಒಳ್ಳೆಯ ಹುಡುಗ ಈತ. ಊರುಕಡೆ ಒಳ್ಳೆಯ ಸಂಘಟನೆ ಮಾಡಿಕೊಂಡಿದ್ದಾನೆ. ನಮ್ಮ ಪಕ್ಷಕ್ಕೆ ದುಡಿಯುತ್ತಾನೆ ಎಂದು ಖಾಸಗಿ ಫೈನಾನ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ಅರಕಲಗೂಡು ಮೂಲದ ಯುವಕನನ್ನು 4 ತಿಂಗಳ ಹಿಂದೆ ಕರೆತಂದು ಪರಿಚಯ ಮಾಡಿಸಿದ್ದರು.
ಸೂರಜ್ ಆಪ್ತರಾಗಿರುವ ಶಿವಕುಮಾರ್ ಮೂಲಕವೇ ಡಾ. ಸೂರಜ್ ರೇವಣ್ಣರನ್ನು ಟ್ರಾಪ್ ಮಾಡಲಾಗಿದೆ ಎಂಬುದು ಸದ್ಯದ ಆರೋಪ. ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟವಾದ ದಿನ ಬಿಜೆಪಿ ನಾಯಕರು, ಕಾರ್ಯಕರ್ತರ ಜೊತೆ ಈ ಯುವಕ ಕಾಣಿಸಿಕೊಂಡಿದ್ದ.
ಹಾಸನ ಚುನಾವಣೆಯಲ್ಲಿ ಪ್ರಜ್ವಲ್ ಸೋತಾಗ ಶ್ರೇಯಸ್ ಪರವಾಗಿ ನಡೆದ ವಿಜಯೋತ್ಸವದಲ್ಲಿ ಬಿಜೆಪಿ ನಾಯಕರ ಜೊತೆಗೆ ಶಿವಕುಮಾರ್ ಪಾಲ್ಗೊಂಡಿದ್ದರು. ಡಾ. ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದ ಬಳಿಕ ಶಿವಕುಮಾರ್ ನಾಪತ್ತೆಯಾಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications