Muniratna: ನಿನ್ನ ನೋಡಿದ್ರೆ ಮೈಜುಮ್ ಎನಿಸುತ್ತೆ ಎಂದು ಮುನಿರತ್ನ ನನ್ನ ತಬ್ಬಿಕೊಂಡ್ರು! ಸಂತ್ರಸ್ತೆ ದೂರಿನಲ್ಲಿ ಹೇಳಿದ್ದೇನು?
ಬೆಂಗಳೂರು,ಸೆಪ್ಟೆಂಬರ್ 19: ಜಾತಿನಿಂದನೆ ಹಾಗೂ ಜೀವ ಬೆದರಿಕೆ ಆರೋಪದಲ್ಲಿ ಸಿಲುಕಿರುವ ಮಾಜಿ ಸಚಿವ ಹಾಗೂ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಈ ಮಧ್ಯೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಕಷ್ಟ ಎದುರಾಗಿದ್ದು, ಪ್ರಕರಣ ದಾಖಲಾಗಿದೆ.
ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿನ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಮುನಿರತ್ನ ವಿರುದ್ಧ ರಾಮನಗರದ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನನ್ನ ಮೇಲೆ ಅತ್ಯಾಚಾರ ಆಗಿದೆ. ಕಗ್ಗಲೀಪುರದ ರೆಸಾರ್ಟ್ನಲ್ಲಿ ಈ ಕೃತ್ಯ ನಡೆದಿದೆ ಎಂದು ಮಹಿಳೆಯೊಬ್ಬರು ಆರೋಪಿಸಿ ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ. ಮುನಿರತ್ನ ಸೇರಿ ಒಟ್ಟು 7 ಜನರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಅಂತೆಯೇ ಪೊಲೀಸರು ಬಿಎನ್ಎಸ್ 354ಎ, 354 ಸಿ, 376, 506, 504, 120(B), 149, 384, 406, 308 ಅಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತ ಮಹಿಳೆ ದೂರಿನಲ್ಲಿ ನೀಡಿರುವ ಅಂಶಗಳೇನು ಗೊತ್ತಾ..?
* ಕೋವಿಡ್ ಸಮಯದಲ್ಲಿ ನನ್ನ ಸೇವೆ ಗುರುತಿಸಿ ಕರೆ ಮಾಡಿದ್ದ ಮುನಿರತ್ನ
* ನಮಸ್ತೆ ಲೀಡರ್ ನಾನು ನಿಮ್ಮ ಭಾಗದ ಶಾಸಕ ನನ್ನನ್ನು ಬಂದು ಭೇಟಿ ಮಾಡಿ ಅಂತ ಕರೆ ಮಾಡಿ ಎಂದಿದ್ದ ಮುನಿರತ್ನ
* ಅದರಂತೆ ಭೇಟಿ ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು
* ಆಗ್ಗಾಗ್ಗೆ ವಿಡೀಯೊ ಕಾಲ್ ನಲ್ಲಿ ಮಾತನಾಡ್ತಿದ್ರು
* ಈ ವೇಳೆ ನಗ್ನವಾಗಿ ಕರೆ ಮಾಡುವಂತೆ ಒತ್ತಾಯಿಸಿದಾಗ ನಾನು ನಿರಾಕರಿಸಿದ್ದೆ
* ಸ್ಪಾಟ್ ವೊಂದಕ್ಕೆ ಬರೋದಕ್ಕೆ ಹೇಳಿ ನಿನ್ನ ನೋಡಿದ್ರೆ ಮೈ ಜುಮ್ಮೆನ್ನುತ್ತದೆ ಎಂದು ಹೇಳಿ ತಬ್ಬಿಕೊಳ್ಳಲು ಮುಂದಾದ್ರು
* ನಾನು ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇದೆಲ್ಲಾ ಕಾಮನ್ ಎಂದರು

* ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ಶಾಸಕನಿದ್ದೇನೆ ಅಪಾರ ಜನಬೆಂಬಲವಿದೆ ಸುಮ್ಮನಿದ್ದರೆ ಸರಿ , ಇಲ್ಲವಾದರೆ ನಿನ್ನ ವಿರುದ್ಧವೇ ಕಂಪ್ಲೆಂಟ್ ನೀಡುತ್ತೇನೆ ಅಂತಾ ಹೆದರಿಸಿ ಅತ್ಯಾಚಾರ ಎಸಗಿದ್ರು
* ಅತ್ಯಾಚಾರದ ಬಳಿಕ ಈ ರೂಂ ನಲ್ಲಿ ಸೀಕ್ರೆಟ್ ವಿಡೀಯೊ ರೆಕಾರ್ಡರ್ ಇಟ್ಟಿದ್ದು, ಎಲ್ಲಾ ದೃಶ್ಯಗಳು ಸೆರೆಯಾಗಿದ್ದು , ನಿನ್ನ ವಿಡೀಯೊ ಎಡಿಟ್ ಮಾಡಿ ಹಂಚುತ್ತೇನೆ, ಹೇಳಿದಂತೆ ಕೇಳಬೇಕು ಅಂತಾ ಹನಿಟ್ರ್ಯಾಪ್ ಮಾಡುವಂತೆ ಹೇಳಿ ಬಳಸಿಕೊಂಡರು
* ಜೊತೆಗೆ ಚಿತ್ರೀಕರಿಸಿದ ವಿಡೀಯೊಗಳನ್ನ ಟಿವಿಯಲ್ಲಿ ಹಾಕಿ ನನಗೆ ತೋರಿಸಿದ್ದಾರೆ
* ಇದೇ ವಿಡೀಯೊ ಇಟ್ಕೊಂಡು 2020 ರಿಂದ 2022 ರ ಅವಧಿಯಲ್ಲಿ ನಿರಂತರ ಅತ್ಯಾಚಾರ ನಡೆಸಿದ್ದಾರೆ. ಇದೇ ವೇಳೆ ಹನಿಟ್ರ್ಯಾಪ್ ಗು ಬಳಕೆ ಮಾಡಿಕೊಂಡಿದ್ದಾರೆ.
* ಹೇಳಿದಂತೆ ಕೇಳಲಿಲ್ಲ ಅಂದ್ರೆ ಗಂಡ ಮತ್ತು ಮಕ್ಕಳಿಗೆ ವಿಡೀಯೊ ತೋರಿಸೋದಾಗಿ ಬೆದರಿಕೆ ಹಾಕಿದ್ದಾರೆ.
* ತನಗೆ ಪರಿಚಯ ಇರುವ ಮತ್ತೊಬ್ಬ ಮಹಿಳೆ ಜೊತೆ ಸೇರಿ ಆತ ಹೇಳಿದವರನ್ನ ಹನಿಟ್ರ್ಯಾಪ್ ಮಾಡಿಸಿದ್ದಾರೆ.
* ಮರ್ಯಾದೆ ಹಾಗು ಪ್ರಾಣಕ್ಕೆ ಅಂಜಿ ಶಾಸಕ ಮುನಿರತ್ನ ಹೇಳಿದಂತೆ ಕೇಳಿದ್ದೇನೆ ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
7 ಮಂದಿ ವಿರುದ್ಧ FIR!
ಎ1 ಮುನಿರತ್ನ ನಾಯ್ಡು
ಎ2 ವಿಜಯ್ ಕುಮಾರ್
ಎ3 ಸುಧಾಕರ್
ಎ4 ಕಿರಣ್ ಕುಮಾರ್
ಎ5 ಲೋಹಿತ್ ಗೌಡ
ಎ6 ಮಂಜುನಾಥ್
ಎ7 ಲೋಕಿ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications