ಗುಜರಾತಿ ಗುಲಾಮಿತನಕ್ಕೆ ನಾಚಿಕೆಯಗಲ್ಲವೇ: ನಿರ್ಮಲ ಸೀತಾರಾಮನ್ಗೆ ಜೆಡಿಎಸ್ ತರಾಟೆ
ಬೆಂಗಳೂರು, ಏಪ್ರಿಲ್ 25: ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಮನ್ ಅವರು ನಾನು ಈಗಲೂ ಅಮುಲ್ ಖರೀದಿಸುತ್ತೇನೆ. ಅದು ಕರ್ನಾಟಕದ ವಿರುದ್ಧ ಎಂದು ಅಲ್ಲ ಎಂದು ಹೇಳಿದ್ದರ ವಿರುದ್ಧ ಜೆಡಿಎಸ್ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
ನಿರ್ಮಲ ಸೀತಾರಾಮನ್ ಅವರಿಗೆ ಖಾರವಾಗಿ ಪ್ರಶ್ನಿಸಿರುವ ಜೆಡಿಎಸ್ ನಂದಿನಿ ಇಲ್ಲದಿರುವಾಗ ಅಮುಲ್ ಖರೀದಿಸುವುದು ಕರ್ನಾಟಕದ ವಿರುದ್ಧದ ಕೃತ್ಯವಲ್ಲ ಎಂದು ರಾಜ್ಯದಿಂದಲೆ ಸಂಸದರಾಗಿರುವ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ. ಆದರೆ ನಂದಿನಿ ಇಲ್ಲದಾಗುವಂತೆ ಮಾಡಲು ಹವಣಿಸುತ್ತಿರುವವರು ಯಾರು ಎಂದು ಅವರು ಹೇಳಿಲ್ಲ. ಯಾಕೆಂದರೆ ಇದು 'ಗುಜರಾತಿ ಕುತಂತ್ರಿ'ಗಳ ಕೃತ್ಯ ಎಂದು ಅವರಿಗೂ ತಿಳಿದಿದೆ ಎಂದು ಹೇಳಿದೆ.

ರಾಜ್ಯದಿಂದಲೆ ಆಯ್ಕೆಯಾಗಿರುವ ನಿರ್ಮಲ ಸೀತಾರಾಮನ್ ನಮ್ಮ ರೈತರ ಹಿತಾಸಕ್ತಿಗಳನ್ನು ಕಾಪಾಡುವಷ್ಟಾದರೂ ನಿಯತ್ತು ತೋರಬೇಕಿತ್ತು. ಕನ್ನಡ ನೆಲದಲ್ಲೆ ನಿಂತು ಕನ್ನಡಿಗರ ವಿರುದ್ಧವೇ ಮಾತನಾಡುವ ಕರ್ನಾಟಕದಿಂದಲೇ ಆಯ್ಕೆಯಾದ ಬಿಜೆಪಿಯ ಸಂಸದೆಯ 'ಗುಜರಾತಿ ಗುಲಾಮಿ'ತನಕ್ಕೆ ನಾಚಿಕೆಯಾಗಬೇಕು. ಯಾವುದೆ ಕಾರಣಕ್ಕೂ ಗುಜರಾತಿ ಉದ್ಯಮಿಗಳಿಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.
ರಾಜ್ಯದಿಂದಲೆ ಆಯ್ಕೆಯಾಗಿರುವ @nsitharaman ನಮ್ಮ ರೈತರ ಹಿತಾಸಕ್ತಿಗಳನ್ನು ಕಾಪಾಡುವಷ್ಟಾದರೂ ನಿಯತ್ತು ತೋರಬೇಕಿತ್ತು. ಕನ್ನಡ ನೆಲದಲ್ಲೆ ನಿಂತು ಕನ್ನಡಿಗರ ವಿರುದ್ಧವೆ ಮಾತನಾಡುವ @BJP4Karnatakaದ ಸಂಸದೆಯ 'ಗುಜರಾತಿ ಗುಲಾಮಿ'ತನಕ್ಕೆ ನಾಚಿಕೆಯಾಗಬೇಕು. ಯಾವುದೆ ಕಾರಣಕ್ಕೂ ಗುಜರಾತಿ ಉದ್ಯಮಿಗಳಿಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ.2/3
— Janata Dal Secular (@JanataDal_S) April 25, 2023
'ಲಿಂಪಿ ವೈರಸ್'ನಿಂದಾಗಿ ಜಾನುವಾರುಗಳು ಅಸುನೀಗಿ ರೈತರು ಕಣ್ಣೀರು ಸುರಿಸುತ್ತಿರುವಾಗ, ಗೋವಿನ ಹೆಸರು ಹೇಳಿ ರಾಜಕೀಯ ಮಾಡುವ ಬಿಜೆಪಿ ಸರ್ಕಾರವಾಗಲಿ, ನಿರ್ಮಲ ಸೀತಾರಾಮನ್ ಆಗಲಿ ಅನುಕಂಪ ಕೂಡಾ ವ್ಯಕ್ತಪಡಿಸಿರಲಿಲ್ಲ. ಆದರೆ ಗುಜರಾತಿ ವ್ಯಾಪಾರಿಗಳ ಹಿತಾಸಕ್ತಿಗೆ ಧಕ್ಕೆಯಾದಾಗ ರಾಜ್ಯಕ್ಕೆ ಓಡೋಡಿ ಬರುತ್ತಾರೆ. ಹಾಗಾದರೆ ಇವರು ಯಾರ ಪರ? ಎಂದು ಪ್ರಶ್ನಿಸಿದೆ.

ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಟ್ವೀಟ್ ಮಾಡಿ ನಿರ್ಮಲ ಸೀತಾರಾಮನ್ ಅವರ ತರಾಟೆಗೆ ತೆಗೆದುಕೊಂಡಿದ್ದರು. ಈಗಾಗಲೇ ನಿರ್ಮಲಾ ಸೀತಾರಾಮನ್ ಅವರಿಗೆ ಹತ್ತಾರು ಬಾರಿ ಪ್ರಶ್ನೆಗಳನ್ನು ಕೇಳಿದ್ದೇನೆ ಆದರೂ ಅವರು ಹೇಳಿದ ಸುಳ್ಳುಗಳನ್ನೆ ಹೇಳಿಕೊಂಡು ಓಡಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು, ರಾಜ್ಯಕ್ಕೆ ಕೇಂದ್ರದ ಕೊಡುಗೆಗಳೇನು? ಎಂದು ಪ್ರಶ್ನಿಸಿದ್ದರು.
ಆರ್ಥಿಕತೆ, ಅಭಿವೃದ್ಧಿಯ ವಿಚಾರದಲ್ಲಿ ಕರ್ನಾಟಕದ ಬೆನ್ನಿಗೆ ಎಷ್ಟು ಸಾರಿ ಮೋದಿ ಅಮಿತ್ ಶಾ ಸರ್ಕಾರ ಇರಿದಿದೆ ಎಂಬುದರ ಗಾಯದ ಗುರುತುಗಳು ಹೇಳುತ್ತಿವೆ ಎಂದು ಹೇಳಿದ್ದಾರೆ. ಅಲ್ಲದೇ ಮೊದಲು ಈ ಪ್ರಶ್ನೆಗಳಿಗೆ ಉತ್ತರ ಕೊಟ್ಟು ನಂತರ ನಮ್ಮ ನಂದಿನಿಯ ಬಗ್ಗೆ ಮಾತನಾಡಲಿ ಸಿದ್ದರಾಮಯ್ಯ ಗರಂ ಆಗಿದ್ದರು. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹೈಕಮಾಂಡ್ ನಾಯಕರ ಅಬ್ಬರದ ಪ್ರಚಾರದ ನಡುವೆ ರೈತರ ಜೀವನಾಡಿ ನಂದಿನಿ ಹಾಗೂ ಅಮುಲ್ ವಿವಾದ ಜೋರಾಗಿ ಸದ್ದು ಮಾಡುತ್ತಿದೆ. ಈ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications