ಜನಶಕ್ತಿ ಪಕ್ಷ ಸ್ಥಾಪಿಸಿದ ಶಂಕರ ಬಿದರಿ

ಗುರುವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಂಕರ ಬಿದರಿ, ರಾಜ್ಯದ ಯಾವ ಪಕ್ಷವೂ ಸರಿಯಿಲ್ಲ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೊಸ ಪಕ್ಷ ಸ್ಥಾಪಿಸಿದ್ದೇನೆ ಎಂದು ಹೇಳಿದರು. ಮುಂದಿನ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಶೀಘ್ರದಲ್ಲೇ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ತೊರೆದ ಮೇಲೆ ಬಿಜೆಪಿ, ಜೆಡಿಎಸ್, ಬಿಎಸ್ಪಿ ಪಕ್ಷದಿಂದ ನನಗೆ ಆಹ್ವಾನ ಬಂದಿತ್ತು. ಆದರೆ, ನಾನು ನಂಬಿದ ತತ್ವ ಸಿದ್ಧಾಂತಗಳಿಗೆ ಯಾವ ಪಕ್ಷವೂ ಪೂರಕವಾದ ಕಾರಣ ಜನಶಕ್ತಿ ಎಂಬ ಪಕ್ಷ ಸ್ಥಾಪಿಸಿದ್ದೇನೆ ಎಂದು ಶಂಕರ ಬಿದರಿ ಹೇಳಿದರು.ಪಕ್ಷದ ಕಾರ್ಯಕಾರಿ ಸಮಿತಿಯ 15 ಸದಸ್ಯರ ಹೆಸರನ್ನು ಈ ಸಂದರ್ಭದಲ್ಲಿ ಅವರು ಬಿಡುಗಡೆ ಮಾಡಿದರು. [ಬಿದರಿ ಕೈ ತಪ್ಪಿದ ರಾಜ್ಯಾಧ್ಯಕ್ಷ ಸ್ಥಾನ]
ಜನಶಕ್ತಿ ಎಂಬುದು ಶಂಕರ ಬಿದರಿ ಅವರ ನೂತನ ಪಕ್ಷದ ಹೆಸರಾಗಿದ್ದು, ಜಸಾಮಾನ್ಯ ಜನರಿಗೆ ಶಕ್ತಿ ಎಂಬುದು ಪಕ್ಷದ ಅಡಿ ಬರಹವಾಗಿದೆ. ಫೆಬ್ರವರಿ ತಿಂಗಳಿನಿಂದ ರಾಜ್ಯದಲ್ಲಿ ಪಕ್ಷ ಸಂಘಟನೆಯ ಕೆಲಸವನ್ನು ಆರಂಭಿಸಲಾಗುವುದು ಎಂದು ಶಂಕರ ಬಿದರಿ ತಿಳಿಸಿದರು. ಪಕ್ಷದ ಚಿಹ್ನೆ ನೀಡುವ ಕುರಿತು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದರು.
ಕಳೆದ ಒಂದು ವರ್ಷದ ಅವಧಿಯಲ್ಲಿ ಎರಡು ಪಕ್ಷಗಳನ್ನು ತೊರೆದು ಸೂಕ್ತ ಪಕ್ಷದ ಹುಡುಕಾಟದಲ್ಲಿದ್ದ ಶಂಕರ ಬಿದರಿ ಕೊನೆಗೂ ಯಾವ ಪಕ್ಷವನ್ನು ಸೇರದೆ ತಮ್ಮ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳು ಯಶಸ್ವಿಯಾದ ಉದಾಹರಣೆಗಳು ಶಂಕರ ಬಿದರಿ ಅವರ ಮುಂದಿದೆ. ಆದರೆ, ತಮ್ಮ ಹೊಸ ಪಕ್ಷ ಸ್ಥಾಪಿಸಿದ್ದಾರೆ. ಜನಶಕ್ತಿ ಪಕ್ಷದ ಮೂಲಕ ಬಿದರಿ ಹೊಸ ರಾಜಕೀಯ ಹೆಜ್ಜೆ ಆರಂಭಿಸಿದ್ದಾರೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications