ಮಾತೆ ಮಹಾದೇವಿ ನಾಲಾಯಕ್ ಎಂದ ಕೊಳದ ಮಠದ ಸ್ವಾಮೀಜಿ
Recommended Video

ಬಾಗಲಕೋಟೆ, ಸೆಪ್ಟೆಂಬರ್ 4: "ಆಕೆ ಮಾತಿನ ದೆವ್ವ, ಮಾತೆ ಮಹಾದೇವಿಯಲ್ಲ. ಗುರು ದ್ರೋಹಿ ಹಾಗೂ ನಾಲಾಯಕ್" ಎಂದು ಮಾತೆ ಮಹಾದೇವಿ ವಿರುದ್ಧ ಕೊಳದ ಮಠದ ಶಾಂತವೀರ ಸ್ವಾಮೀಜಿ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿ ನಡೆಯುತ್ತಿರುವ ವಿವಿಧ ಮಠಾಧೀಶರ ಸಭೆಯಲ್ಲಿ ಭಾಗವಹಿಸಿರುವ ಅವರು ಮಾಧ್ಯಮಗಳ ಜತೆ ಮಾತನಾಡಿ, "ಬಸವಣ್ಣನವರ ವಚನಗಳ ಅಂಕಿತ ಕೂಡಲ ಸಂಗಮದೇವ ಎಂಬುದನ್ನು ಲಿಂಗದೇವ ಎಂದು ಬದಲಾಯಿಸಿದ್ದಾರೆ. ಯಾರು ಆ ಲಿಂಗದೇವ? ಮಾತೆ ಮಹಾದೇವಿಗೂ ಆ ಲಿಂಗದೇವನಿಗೂ ಏನು ಸಂಬಂಧ? ಆತ ಬದುಕಿದ್ದಾನೋ ಅಥವಾ ಸತ್ತಿದ್ದಾನೋ" ಎಂದು ಪ್ರಶ್ನಿಸಿದ್ದಾರೆ.

"ಲಿಂಗದೇವ ಹಾಗೂ ಮಹಾದೇವಿ ಮಧ್ಯೆ ಅದೆಂಥ ಸಂಬಂಧ? ತಾಯಿ-ಮಗನದೋ, ತಾಯಿ-ಮಗಳದೋ? ಅದೇನು ಅಂತ ಅವರೇ ತಿಳಿಸಬೇಕು" ಎಂದು ಕೂಡ ಹೇಳಿದ್ದಾರೆ. ತಮ್ಮ ಮಾತಿನ ಉದ್ದಕ್ಕೂ ಮಾತೆ ಮಹಾದೇವಿ ಅವರನ್ನು ಶಾಂತವೀರ ಸ್ವಾಮೀಜಿ ಏಕವಚನದಲ್ಲಿ ಸಂಬೋಧಿಸಿದ್ದಾರೆ.
ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮಾತೆ ಮಹಾದೇವಿ, ನಮ್ಮ ಗುರುಗಳ ಹೆಸರು ಲಿಂಗಾನಂದ ಸ್ವಾಮೀಜಿ. ಅವರ ಹೆಸರನ್ನು ವಚನಗಳಿಗೆ ಇಟ್ಟಿದ್ದೇನೆ. ಇನ್ನು ಪರಮಾತ್ಮನನ್ನು ಲಿಂಗದೇವ ಎನ್ನುತ್ತಾರೆ. ಸಾತ್ವಿಕ ಹಾದಿಯಲ್ಲಿ ಪ್ರಶ್ನಿಸುವವರಿಗೆ ಉತ್ತರಿಸಬಹುದು. ಈ ರೀತಿಯ ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕು ಎಂಬ ಹೋರಾಟದಲ್ಲಿ ಇರುವ ಸ್ವಾಮೀಜಿಗಳ ಗುಂಪಿನಲ್ಲಿ ಮಾತೆ ಮಹಾದೇವಿ ಅವರು ಕೂಡ ಇದ್ದಾರೆ. ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಆಗಲಿ ಎಂಬುದು ಪಂಚಪೀಠ ಸೇರಿದಂತೆ ಕೆಲವು ಸ್ವಾಮೀಜಿಗಳ ಅಭಿಪ್ರಾಯ ಆಗಿದೆ.
ಈ ಹೋರಾಟದ ವಿಚಾರವಾಗಿಯೇ ಮಾತೆ ಮಹಾದೇವಿ ಅವರ ವಿರುದ್ಧ ಈ ಹಿಂದೆ ರಂಭಾಪುರಿ ಶ್ರೀಗಳು ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಕೊಳದ ಮಠದ ಸ್ವಾಮೀಜಿ ಕೂಡ ಆಕ್ಷೇಪಾರ್ಹ ಅನಿಸುವಂಥ ಹೇಳಿಕೆ ನೀಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications