ಮಾತೆ ಮಹಾದೇವಿ ನಾಲಾಯಕ್ ಎಂದ ಕೊಳದ ಮಠದ ಸ್ವಾಮೀಜಿ
Recommended Video

ಬಾಗಲಕೋಟೆ, ಸೆಪ್ಟೆಂಬರ್ 4: "ಆಕೆ ಮಾತಿನ ದೆವ್ವ, ಮಾತೆ ಮಹಾದೇವಿಯಲ್ಲ. ಗುರು ದ್ರೋಹಿ ಹಾಗೂ ನಾಲಾಯಕ್" ಎಂದು ಮಾತೆ ಮಹಾದೇವಿ ವಿರುದ್ಧ ಕೊಳದ ಮಠದ ಶಾಂತವೀರ ಸ್ವಾಮೀಜಿ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿ ನಡೆಯುತ್ತಿರುವ ವಿವಿಧ ಮಠಾಧೀಶರ ಸಭೆಯಲ್ಲಿ ಭಾಗವಹಿಸಿರುವ ಅವರು ಮಾಧ್ಯಮಗಳ ಜತೆ ಮಾತನಾಡಿ, "ಬಸವಣ್ಣನವರ ವಚನಗಳ ಅಂಕಿತ ಕೂಡಲ ಸಂಗಮದೇವ ಎಂಬುದನ್ನು ಲಿಂಗದೇವ ಎಂದು ಬದಲಾಯಿಸಿದ್ದಾರೆ. ಯಾರು ಆ ಲಿಂಗದೇವ? ಮಾತೆ ಮಹಾದೇವಿಗೂ ಆ ಲಿಂಗದೇವನಿಗೂ ಏನು ಸಂಬಂಧ? ಆತ ಬದುಕಿದ್ದಾನೋ ಅಥವಾ ಸತ್ತಿದ್ದಾನೋ" ಎಂದು ಪ್ರಶ್ನಿಸಿದ್ದಾರೆ.

"ಲಿಂಗದೇವ ಹಾಗೂ ಮಹಾದೇವಿ ಮಧ್ಯೆ ಅದೆಂಥ ಸಂಬಂಧ? ತಾಯಿ-ಮಗನದೋ, ತಾಯಿ-ಮಗಳದೋ? ಅದೇನು ಅಂತ ಅವರೇ ತಿಳಿಸಬೇಕು" ಎಂದು ಕೂಡ ಹೇಳಿದ್ದಾರೆ. ತಮ್ಮ ಮಾತಿನ ಉದ್ದಕ್ಕೂ ಮಾತೆ ಮಹಾದೇವಿ ಅವರನ್ನು ಶಾಂತವೀರ ಸ್ವಾಮೀಜಿ ಏಕವಚನದಲ್ಲಿ ಸಂಬೋಧಿಸಿದ್ದಾರೆ.
ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮಾತೆ ಮಹಾದೇವಿ, ನಮ್ಮ ಗುರುಗಳ ಹೆಸರು ಲಿಂಗಾನಂದ ಸ್ವಾಮೀಜಿ. ಅವರ ಹೆಸರನ್ನು ವಚನಗಳಿಗೆ ಇಟ್ಟಿದ್ದೇನೆ. ಇನ್ನು ಪರಮಾತ್ಮನನ್ನು ಲಿಂಗದೇವ ಎನ್ನುತ್ತಾರೆ. ಸಾತ್ವಿಕ ಹಾದಿಯಲ್ಲಿ ಪ್ರಶ್ನಿಸುವವರಿಗೆ ಉತ್ತರಿಸಬಹುದು. ಈ ರೀತಿಯ ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕು ಎಂಬ ಹೋರಾಟದಲ್ಲಿ ಇರುವ ಸ್ವಾಮೀಜಿಗಳ ಗುಂಪಿನಲ್ಲಿ ಮಾತೆ ಮಹಾದೇವಿ ಅವರು ಕೂಡ ಇದ್ದಾರೆ. ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಆಗಲಿ ಎಂಬುದು ಪಂಚಪೀಠ ಸೇರಿದಂತೆ ಕೆಲವು ಸ್ವಾಮೀಜಿಗಳ ಅಭಿಪ್ರಾಯ ಆಗಿದೆ.
ಈ ಹೋರಾಟದ ವಿಚಾರವಾಗಿಯೇ ಮಾತೆ ಮಹಾದೇವಿ ಅವರ ವಿರುದ್ಧ ಈ ಹಿಂದೆ ರಂಭಾಪುರಿ ಶ್ರೀಗಳು ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಕೊಳದ ಮಠದ ಸ್ವಾಮೀಜಿ ಕೂಡ ಆಕ್ಷೇಪಾರ್ಹ ಅನಿಸುವಂಥ ಹೇಳಿಕೆ ನೀಡಿದ್ದಾರೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications