ಮನೆ ಬಾಗಿಲಿಗೆ ಬರಲಿದೆ ಮೇಕೆ, ಕುರಿ ಮಾಂಸ, ಬೆಲೆಯೂ ಕಡಿಮೆ
ಬೆಂಗಳೂರು, ಅಕ್ಟೋಬರ್ 15: ಮನೆ ಬಾಗಿಲಿಗೆ ಆಹಾರ ತಲುಪಿಸುವ ಅನೇಕ ಅಪ್ಲಿಕೇಶನ್ಗಳಿವೆ. ಆದರೆ ರಾಜ್ಯದ ಸಂಘವೊಂದು ಮನೆ ಬಾಗಿಲಿಗೆ ಮಾಂಸವನ್ನು ತಲುಪಿಸುವ ಯೋಚನೆ ಮಾಡಿದೆ.
ಗ್ರಾಹಕರ ಮನೆ ಬಾಗಿಲಿಗೆ ಕುರಿ ಮತ್ತು ಮೇಕೆಯ ಉತ್ಕೃಷ್ಟ ಗುಣಮಟ್ಟದ ಮಾಂಸವನ್ನು ಪೂರೈಸುವ 'ಡಯಲ್ ಫಾರ್ ಮಟನ್' ಎಂಬ ಆಪ್ ಅನ್ನು ಅಭಿವೃದ್ಧಿ ಪಡಿಸುವ ನಿರ್ಣಯವನ್ನು ರಾಜ್ಯ ಕುರಿ ಮತ್ತು ಮೇಕೆ ಸಾಗಾಣಿಕೆದಾರರ ಸಂಘ ಮಾಡಿದೆ.
ನಗರದ ಕೆಲವು ಭಾಗಗಳಲ್ಲಿ ಮುಂದಿನ ವಾರದಿಂದ ಗ್ರಾಹಕರ ಮನೆ ಬಾಗಿಲಿಗೆ ಮಾಂಸ ಪೂರೈಕೆ ಮಾಡಲಾಗುತ್ತದೆ. ಸ್ಥಳೀಯ ಪಶುವೈದ್ಯರು ಪ್ರಮಾಣೀಕರಿಸಿದ ಮಾಂಸವನ್ನು ಮಾರುಕಟ್ಟೆ ದರದಲ್ಲೇ ಒದಗಿಸಲು ನಿರ್ಧರಿಸಲಾಗಿದ್ದು, ಕನಿಷ್ಟ ಅರ್ಧ ಕೆಜಿ ಮಾಂಸ ಆರ್ಡರ್ ಮಾಡಬೇಕಾಗಿದೆ.

ಬೆಂಗಳೂರು ಮಾತ್ರವಲ್ಲದೆ ಇನ್ನೂ ಕೆಲವು ಜಿಲ್ಲೆಗಳಲ್ಲಿಯೂ ಈ ಆಪ್ ಮೂಲಕ ಕುರಿ ಮತ್ತು ಮೇಕೆಯ ಮಾಂಸವನ್ನು ತಿನ್ನುವವರ ಮನೆ ಬಾಗಿಲಿಗೆ ತಲುಪಿಸುವ ಯೋಚನೆ ಕುರಿ ಮತ್ತು ಮೇಕೆ ಸಾಗಾಣಿಕೆದಾರರ ಸಂಘಕ್ಕೆ ಇದೆ. ಚಿತ್ರದುರ್ಗ, ಬಾಗಲಕೋಟೆ, ಚಿಕ್ಕಬಳ್ಳಾಪುರದಲ್ಲಿ ಈ ವಧಾಗಾರಗಳನ್ನು ತೆರೆಯಲಾಗುವುದು ಎಂದರು.
ಸಾಕಿದ ಕುರಿ-ಮೇಕೆಗಳನ್ನು ಬೇರೆಯವರಿಗೆ ಮಾರಾಟ ಮಾಡುತ್ತಿದ್ದೆವು, ಇದರಲ್ಲಿ ಬಹುತೇಕ ಹಣ ದಲ್ಲಾಳಿಗಳಿಗೆ ಸೇರುತ್ತಿದ್ದು ಸಾಗಾಣಿಕೆದಾರರಿಗೆ ಹೆಚ್ಚಿನ ಹಣ ದೊರೆಯುತ್ತಿಲ್ಲ ಹಾಗಾಗಿ ನಾವೇ ಗ್ರಾಹಕರಿಗೆ ಮಾಂಸವನ್ನು ತಲುಪಿಸುತ್ತೇವೆ ಎಂದು ರಾಜ್ಯ ಕುರಿ-ಮೇಕೆ ಸಾಗಾಣಿಕೆದಾರರ ಸಂಘದ ಅಧ್ಯಕ್ಷ ಸಿ.ವಿ.ಲೋಕೇಶ್ಗೌಡ ಹೇಳಿದ್ದಾರೆ.
ರಾಜ್ಯದ 24 ಜಿಲ್ಲೆಗಳಲ್ಲಿ ಕುರಿ-ಮೇಕೆ ಸಾಕಾಣಿಕೆ ಮಾಡಲಾಗುತ್ತಿದ್ದು, 15 ಲಕ್ಷ ಸಾಕಾಣಿಕೆದಾರರಿದ್ದು, 97 ಲಕ್ಷ ಕುರಿ ಹಾಗೂ 47 ಲಕ್ಷ ಮೇಕೆಗಳಿವೆ. ಆರೋಗ್ಯವಂತ ವ್ಯಕ್ತಿಗೆ ವಾರ್ಷಿಕ 11 ಕೆಜಿ ಮಾಂಸ ಬೇಕಾಗಿದ್ದು, ಈಗ ಆರು ಕೆಜಿ ಮಾತ್ರ ಬಳಕೆಯಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications