ಶಿಡ್ಲಘಟ್ಟದಲ್ಲಿ ಅಮರ ವಿಜ್ಞಾನಿ ಹರೀಶ್ ಸ್ಮರಣೆ
ಶಿಡ್ಲಘಟ್ಟ, ನವೆಂಬರ್ 19: ಇಲ್ಲಿನ ಕ್ರೆಸೆಂಟ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ಕನ್ನಡ ಸಾರಸ್ವತ ಪರಿಚಾರಿಕೆ ವತಿಯಿಂದ ದಿವಂಗತ ವಿಜ್ಞಾನಿ ಹರೀಶ್ ಆರ್ ಭಟ್ ಅವರ ಶ್ರದ್ಧಾಂಜಲಿ ಹಾಗೂ ಸಂಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮುಖಪುಟ ವಿನ್ಯಾಸಗಳನ್ನು ಪ್ರದರ್ಶಿಸಿ ವಿನ್ಯಾಸಕ ಅಜಿತ್ ಕೌಂಡಿನ್ಯ ಮಾತನಾಡಿದರು. ವಿದ್ಯಾರ್ಥಿಗಳು ವಿವಿಧ ಪಕ್ಷಿಗಳ ಛಾಯಾಚಿತ್ರಗಳನ್ನು ವೀಕ್ಷಿಸಿದರು

ಮುಖಪುಟ ವಿನ್ಯಾಸವೆಂಬುದನ್ನು ಒಂದು ವಿಶಿಷ್ಟ ಕಲೆ. ಚಿತ್ರಕಲೆಯಂತೆಯೇ ಇದೂ ಕೂಡ ಕಲಾಕೃತಿಯೆಂಬಂತೆ ಒಪ್ಪಬಹುದು. ಮುಖಪುಟ ಕಲೆಯಲ್ಲಿ ಹೇರಳವಾದ ಪ್ರಯೋಗಗಳು ನಡೆಯುತ್ತಿವೆ ಎಂದು ಮುಖಪುಟ ವಿನ್ಯಾಸಕ ಅಜಿತ್ ಕೌಂಡಿನ್ಯ ತಿಳಿಸಿದರು.
ಕನ್ನಡ ಸಾರಸ್ವತ ಪರಿಚಾರಿಕೆ ವತಿಯಿಂದ ಆಯೋಜಿಸಿದ್ದ ದಿವಂಗತ ವಿಜ್ಞಾನಿ ಹರೀಶ್ ಆರ್ ಭಟ್ ಅವರ ಶ್ರದ್ಧಾಂಜಲಿ ಹಾಗೂ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮುಖಪುಟ ವಿನ್ಯಾಸಗಳನ್ನು ಪ್ರದರ್ಶಿಸಿ ಅವರು ಮಾತನಾಡಿದರು.

ಮುಖಪುಟ ವಿನ್ಯಾಸ ಮಾಡುವುದು ಕೂಡ ಅತ್ಯಂತ ಸೃಜನಶೀಲತೆಯಿಂದ ಕೂಡಿರುತ್ತದೆ. ಕಲೆಯ ಅಭಿವ್ಯಕ್ತಿಗೆ ತಂತ್ರಜ್ಞಾನವನ್ನು ಪೂರಕವಾಗಿ ಬಳಸಿಕೊಳ್ಳಬಹುದು. ಆದರೆ ತಂತ್ರಜ್ಞಾನಕ್ಕೂ ಮಿಗಿಲಾಗಿ ಕಲಾವಿದನ ಆಲೋಚನಾ ಕ್ರಮ, ಸೃಜನಶೀಲತೆ, ಚಿಂತನೆ, ಬಣ್ಣಗಳ ಆಯ್ಕೆ, ಅಭಿವ್ಯಕ್ತಿ ಎಲ್ಲವೂ ಬಹಳ ಮುಖ್ಯ. ಮುಖಪುಟ ರಚಿಸುವಾಗ ಹಲವಾರು ಸವಾಲುಗಳಿರುತ್ತವೆ. ಓದುಗ ಖರೀದಿಸಲು ಆಕರ್ಷಕವಾಗಿರುವಂತೆಯೇ ಪುಸ್ತಕದ ಆಶಯವನ್ನೂ ಅದು ಬಿಂಬಿಸಬೇಕು ಎಂದು ಹೇಳಿದರು.
'ಶಿಡ್ಲಘಟ್ಟ ತಾಲ್ಲೂಕಿನ ಜೀವವೈವಿಧ್ಯ' ಎಂಬ ವಿಷಯವಾಗಿ ಮಾತನಾಡಿದ ವನ್ಯಜೀವಿ ಛಾಯಾಗ್ರಾಹಕ ಡಿ.ಜಿ.ಮಲ್ಲಿಕಾರ್ಜುನ, ಹಕ್ಕಿಗಳು, ಹಾವುಗಳು, ಕೀಟಗಳು ಮುಂತಾದ ಚಿತ್ರಗಳನ್ನು ಸ್ಲೈಡ್ ಶೋ ಮೂಲಕ ಪ್ರದರ್ಶಿಸಿ ವಿವರಿಸಿದರು.

ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಮಾತನಾಡಿ, ದಿವಂಗತ ವಿಜ್ಞಾನಿ ಹರೀಶ್ ಆರ್ ಭಟ್ ಅವರ ಸಾಧನೆ, ಕೊಡುಗೆ, ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಅವರು ನೀಡಿರುವ ಪ್ರೇರಣೆ ಹಾಗೂ ಅವರ ಒಡನಾಟದ ಬಗ್ಗೆ ಹೇಳಿದರು.
ಕ್ರೆಸೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ತಮೀಮ್ ಅನ್ಸಾರಿ, ಕನ್ನಡ ಸಾರಸ್ವತ ಪರಿಚಾರಿಕೆ ಕಾರ್ಯದರ್ಶಿ ಎ.ಎಂ.ತ್ಯಾಗರಾಜ್, ಹೋಟೆಲ್ ವ್ಯವಸ್ಥಾಪಕ ವಿ.ವೆಂಕಟರಮಣ, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications