Karnataka By Election: ಅ.22ರಂದು ಕಾಂಗ್ರೆಸ್ 3 ಅಭ್ಯರ್ಥಿಗಳು ಘೋಷಣೆ: ಸಚಿವ
ಧಾರವಾಡ, ಅಕ್ಟೋಬರ್ 21: ರಾಜ್ಯದಲ್ಲಿ ಉಪಚುನಾವಣೆ ಕಾವು ಏರತೊಡಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಂದ ಎರಡು ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಆಗಿದೆ. ಆಡಳಿತ ಪಕ್ಷ ಕಾಂಗ್ರೆಸ್ ಈಗಾಗಲೇ ಸಚಿವರು, ಸ್ಥಳೀಯ ನಾಯಕರ ಅಭಿಪ್ರಾಯ ಕೇಳಲು ಸಿಎಂ ಸಿದ್ದರಾಮಯ್ಯ ಸಭೆ ಕರೆದಿದ್ದರು. ಸಭೆಗೆ ಹೋದ ನಾವು ಅಭಿಪ್ರಾಯ ತಿಳಿಸಿದ್ದೇವೆ. ಮಂಗಳವಾರ ಅಭ್ಯರ್ಥಿಗಳ ಘೋಷಣೆ ಆಗಬಹುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಧಾರವಾಡದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ಸೇರಿದಂತೆ ರಾಜ್ಯದ ಮೂರು ವಿಧಾನ ಸಭಾ ಉಪ ಚುನಾವಣೆಯ ಟಿಕೆಟ್ ಘೋಷಣೆ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾನುವಾರೆ ಸಭೆ ನಡೆಸಿದ್ದಾರೆ. ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸಭೆಗೆ ಹಾಜರಾದ ನಾವೆಲ್ಲವರೂ ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದೇವೆ. ಇನ್ನೂ ಉಪ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಪಕ್ಷದಲ್ಲಿ ಗೊಂದಲ ವಿಚಾರದ ಬಗ್ಗೆ ಮಾತನಾಡಿದ ಅವರು, ಮಂಗಳವಾರ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ ಬರಲಿದೆ. ಶಿಗ್ಗಾಂವಿ ಟಿಕೆಟ್ ನಲ್ಲಿಯೂ ಗೊಂದಲ ವಿಚಾರದಲ್ಲಿ ಸಹ ನಮ್ಮ ನಮ್ಮ ಅಭಿಪ್ರಾಯ ಈಗಾಗಲೇ ತಿಳಿಸಿದ್ದೇವೆ ಎಂದರು.
ಅಂತಿಮವಾಗಿ ಹೈಕಮಾಂಡ್ ಯಾವುದೇ ತೀರ್ಮಾನ ಮಾಡಿರದರೂ ಅದೇ ಫೈನಲ್ ಆಗಿರುತ್ತದೆ. ಮಂಡ್ಯ ಜಿಲ್ಲೆಯ ಚನ್ನಪಟ್ಟಣದಲ್ಲಿ ಬಿಜೆಪಿ ಸಿ.ಪಿ. ಯೋಗೇಶ್ವರ್ ಅವರಿಗೆ ಕಾಂಗ್ರೆಸ್ ಕರೆತರುವ ಚರ್ಚೆ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಆ ಭಾಗದ ಕುರಿತು ಹೆಚ್ಚಿನ ಮಾಹಿತಿ ಇಲ್ಲ. ನಮ್ಮ ಪಕ್ಷದ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಲ್ಲಿನ ಜವಾಬ್ದಾರಿ ಇದೆ, ಮುಖ್ಯಮಂತ್ರಿಗಳಿಗೂ ಅಲ್ಲಿನ ಜವಾಬ್ದಾರಿ ಇದೆ ಎಂದಷ್ಟು ತಿಳಿಸಿದರು.
ಗೊಂದಲವಾಗದಂತೆ ಹೈಕಮಾಂಡ್ ಅಂತಿಮ ನಿರ್ಧಾರಕ್ಕೆ ಬರಲಿದೆ. ಈ ಬಗ್ಗೆ ಎಲ್ಲ ಮಾಹಿತಿ ನನಗಿಲ್ಲ. ಈ ಉಪಚುನಾವಣೆಯಲ್ಲಿ ಮೂರಕ್ಕೆ ಮೂರು ಸ್ಥಾನ ಗೆಲ್ಲುತ್ತೇವೆ. ಲೋಕಸಭಾ ಚುನಾವಣೆಯಲ್ಲಿ
ಚನ್ನಪಟ್ಟಣದಲ್ಲಿ ಪಾರ್ಲಿಮೆಂಟ್ ಚುನಾವಣೆಯಲ್ಲಿ ಕಾಂಗ್ರೆಸ್ ಲೀಡ್ನಲ್ಲಿತ್ತು. ಶಿಗ್ಗಾಂವಿ ಸಹ ಲೀಡ್ ಗೆ ಬಂದಿತ್ತು. ಅದಕ್ಕಿಂತ ಬಳ್ಳಾರಿ ಜಿಲ್ಲೆಯ ಸಂಡೂರು ಸಹ ಎರಡು ಬಾರಿ ಲೀಡ್ ನಲ್ಲಿದ್ದೇವೆ. ಹೀಗಾಗಿ ನಗೆ ನಂಬಿಕೆ ಇದೆ ಇದರ ಆಧಾರದ ಮೇಲೆ ಮೂರಕ್ಕೆ ಮೂರು ಸ್ಥಾನವನ್ನು ನಾವು ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ಗೆ ಬರ್ತಾರಾ ಸಿಪಿವೈ
ಸಚಿವ ಹೇಳಿಕೆ ನೋಡಿದರೆ ನಾಳೆ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ ಅವರನ್ನು ಕಾಂಗ್ರೆಸ್ಗೆ ಕರೆ ತರುವ ಯತ್ನ ನಡೆಯುತ್ತಿದೆ. ಇದು ನಿಜವೇ ಆದಲ್ಲಿ ನಾಳೆ ಮಂಗಳವಾರ ಎರಡು ಕ್ಷೇತ್ರಗಳಿಗೆ ಮಾತ್ರವೇ ಟಿಕೆಟ್ ಘೋಷಿಸಿ ಚನ್ನಪಟ್ಟಣದಲ್ಲಿ ಕಾದು ನೋಡುವ ತಂತ್ರ ಮಾಡಬಹು ಎಂಬ ಮಾತುಗಳ ಕೇಳಿ ಬರುತ್ತಿವೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications