ಗೃಹ ಸಚಿವ ಶಿಂದೆ ಫರ್ಮಾನಿಗೆ ಸಿಟಿ ರವಿ ಕಿಡಿಕಿಡಿ

'ಕೇಂದ್ರ ಗೃಹ ಸಚಿವ ಶಿಂದೆ ಪತ್ರ ಬರೆದಿರುವುದು ಅಸಂವಿಧಾನಿಕ ಮತ್ತು ಖಂಡನೀಯ. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಾ ಶಿಂದೆ ಇಂಥ ಪತ್ರ ಬರೆದಿದ್ದಾರೆ' ಎಂದು ಇಬ್ಬರೂ ನಾಯಕರು ಅಭಿಪ್ರಾಪಟ್ಟಿದ್ದಾರೆ.
'ಮತೀಯ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಪ್ರಯತ್ನ ಇದಾಗಿದೆ. ನಾವು ಜಾತ್ಯತೀತವಾದಿಗಳು ಎಂದು ಹೇಳುವ ಕಾಂಗ್ರೆಸ್ ನಾಯಕರು ಕೇವಲ ಒಂದು ಧರ್ಮದ ಯುವಕರ ಕುರಿತು ಕಾಳಜಿ ತೋರಿಸುವುದು ಸರಿಯಲ್ಲ. ನಿರಪರಾಧಿಗಳನ್ನು ಬಂಧಿಸಬಾರದು ಎಂದು ಸೂಚನೆ ನೀಡಿದ್ದರೆ ಒಪ್ಪಬಹುದಿತ್ತು. ಕೇಂದ್ರ ಗೃಹ ಸಚಿವರು ತಮ್ಮ ಹುದ್ದೆಗೆ ಘನತೆ ತರುವಂತೆ ನಡೆದುಕೊಂಡಿಲ್ಲ. ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು' ಎಂದೂ ಅವರು ಒತ್ತಾಯಿಸಿದ್ದಾರೆ.
'ದೇವಸ್ಥಾನದ ಚಿನ್ನದ ಮೇಲೆ ಆರ್ ಬಿಐ ಕಣ್ಣು ಹಾಕಿದೆ. ಭಕ್ತರು ಕೊಟ್ಟಿರುವ ಕಾಣಿಕೆಯನ್ನು ಯಾವ ಸರಕಾರಗಳೂ ವಾಪಸ್ ಪಡೆಯಬಾರದು. ಒಂದು ವೇಳೆ ವಶಕ್ಕೆ ಪಡೆದರೆ ಸರಕಾರ ಅಧಿಕಾರದಲ್ಲಿ ಉಳಿಯುವುದಿಲ್ಲ. ಕೇಂದ್ರದ ಯುಪಿಎ ಸರಕಾರದ ಮಂತ್ರಿಗಳು ಕೋಟಿ ಕೋಟಿ ಲೂಟಿ ಹೊಡೆದು ಆರ್ಥಿಕ ಪರಿಸ್ಥಿತಿ ಹದಗೆಡುವಂತೆ ಮಾಡಿ ಈಗ ಪರಿಸ್ಥಿತಿ ನಿಭಾಯಿಸಲು ದೇವಸ್ಥಾನಗಳ ಚಿನ್ನದ ಮೇಲೆ ಕಣ್ಣು ಹಾಕಿದ್ದಾರೆ' ಎಂದು ಸಿಟಿ ರವಿ ಕಟಕಿಯಾಡಿದರು.
ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ:
'ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ವಿನಾಕಾರಣ ಬಂಧಿಸಿ ಹಲ್ಲೆ ನಡೆಸಿ ಪೊಲೀಸರು ಸುಳ್ಳು ಮೊಕದ್ದಮೆ ದಾಖಲಿಸುತ್ತಿದ್ದಾರೆ. ಗದಗದ ಲಕ್ಷ್ಮೇಶ್ವರದಲ್ಲಿ ಮತ್ತು ಚಿಕ್ಕಮಗಳೂರಿನ ಹಲ್ದೂರಿನಲ್ಲಿ ಗಣಪತಿ ಮೆರವಣಿಗೆ ನಡೆಸುತ್ತಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿ ಹಲ್ಲೆ ನಡೆಸಲಾಗಿದೆ. ಶಿರಾದಲ್ಲೂ ಹೀಗೇ ಆಗಿದೆ. ಅನ್ಯ ಧರ್ಮೀಯರ ಭಾವನೆಗೆ ಯಾವುದೇ ಧಕ್ಕೆಯಾಗದಂತೆ ಮೆರವಣಿಗೆ ನಡೆಸಿದರೂ ಕಾರ್ಯಕರ್ತರನ್ನು ಬಂಧಿಸಿರುವುದು ಸರಿಯಲ್ಲ' ಎಂದು ರವಿ ಟೀಕಿಸಿದ್ದಾರೆ.
'ದೇಶದ ಎಲ್ಲ ಮುಸ್ಲಿಮರನ್ನು ಅನುಮಾನದಿಂದ ನೋಡುವುದು ಸರಿಯಲ್ಲ. ಭಾರತ ವಿಭಜನೆಯಾದ ಕಾಲಕ್ಕೆ ಕೋಟ್ಯಂತರ ಮುಸ್ಲಿಮರು ಇಲ್ಲೇ ಉಳಿದರು. ಅವರನ್ನೂ ಅನುಮಾನದಿಂದ ನೋಡಲಾದೀತೆ? ಎಂದು ಮಾಜಿ ಪ್ರಧಾನಿ ದೇವೇಗೌಡರು ಪ್ರಶ್ನಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications