ಶಿರಾಡಿ ಮತ್ತೆ ಬಂದ್: ಸುರಂಗ ಮಾರ್ಗ ನಿರ್ಮಾಣದ ಆಶ್ವಾಸನೆ ಏನಾಯಿತು?
ಬೆಂಗಳೂರು ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆ ಮತ್ತೊಮ್ಮೆ ಬಂದ್ ಆಗಿದೆ. ಆ ಮೂಲಕ, ಪ್ರತೀ ಮಳೆಗಾಲದ ವೇಳೆ ಈ ಭಾಗದ ಜನರು ರಾಜಧಾನಿ ತಲುಪಲು ಹರಸಾಹಸ ಪಡುವುದು ಮುಂದುವರಿದಿದೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಭೂಕುಸಿತ ಉಂಟಾಗಿದ್ದು, ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿರುವುದರಿಂದ ಕರಾವಳಿ ಹಾಗೂ ರಾಜಧಾನಿಗೆ ಇದ್ದ ಸಂಪರ್ಕ ಕೊಂಡಿ ಕಳಚಿದೆ.
ಈ ನಡುವೆ ಪ್ರತಿವರ್ಷ ಮಳೆಗಾಲದಲ್ಲಿ ಸಾರಿಗೆ ವಾಹನ ಚಾಲಕರು, ಪ್ರಯಾಣಿಕರು ತಮ್ಮ ಎಲ್ಲಾ ವಹಿವಾಟುಗಳ ವ್ಯವಸ್ಥೆಯನ್ನು ಬದಲಾವಣೆ ಮಾಡುವಂತಹ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ಶಿರಾಡಿ ವಿಚಾರದಲ್ಲಿ ಕೊಟ್ಟಂತಹ ಆಶ್ವಾಸನೆಗಳನ್ನು ಜನ ಯಾಕೆ ಮರೆಯುತ್ತಾರೆ?

ಕಳೆದ ಹಲವಾರು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಿಂದ ಆಶ್ವಾಸನೆ ಸುರಿಮಳೆಯನ್ನೇ ಕೇಳಿದ್ದಾಗಿದೆ, ಆದರೆ, ಪ್ರಕೃತಿಗೆ ಹೊಂದಾಣಿಕೆಯಾಗುವ ಮತ್ತು ಎಲ್ಲಾ ಹವಾಮಾನಗಳಿಗೆ ಒಪ್ಪುವ ರಸ್ತೆ ಮಾಡುವಲ್ಲಿ ಕೇಂದ್ರ ಸರ್ಕಾರ ಹಿಂದೆ ಬಿದ್ದಿದೆ.
ವಾಣಿಜ್ಯ ನಗರಿ, ಹಾರ್ಬರ್ ನಗರ, ವಿದ್ಯಾವಂತರ ನಗರ ಅಂತ ಹೆಸರು ಗಳಿಸಿರುವ ದಕ್ಷಿಣ ಕನ್ನಡದಿಂದ ಆಯ್ಕೆ ಆಗಿ ಸಾಲು ಸಾಲು ಕೇಂದ್ರ ಮಂತ್ರಿಗಳು ಇದ್ದರೂ ಮತ್ತು ಆದರೂ, ಮತ್ತು ಮಾಜಿ ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣನವರು ಗುಂಡ್ಯದಲ್ಲಿ ಸಮಾವೇಶ ಮಾಡಿದರೂ ರಸ್ತೆ ಮಾತ್ರ ಬದಲಾವಣೆ ಆಗಲಿಲ್ಲ.

ಜ್ಯೆಕೊ ಸಂಸ್ಥೆಯಿಂದ ಸುರಂಗ ಮಾರ್ಗ ನಿರ್ಮಾಣದ ಆಶ್ವಾಸನೆಗಳೂ ಗಾಳಿಯಲ್ಲಿ ಗುಂಡು ಆಗಿದೆ. ಹಾಗಾಗಿ, ಮಂಗಳೂರು ಮತ್ತು ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಪ್ರಯಾಣ ಬಹಳ ಪ್ರಯಾಸ. ಸರ್ವಖುತು ರಸ್ತೆ ನಿರ್ಮಾಣ ಅದ್ಯಾವಾಗ ಆಗುತ್ತೋ? ಇನ್ನೆಷ್ಟು ದಿನ ರಾಜಕೀಯ ಇದರಲ್ಲಿ ಮೆರೆಯುತ್ತಾ?
ಬೆಂಗಳೂರಿನಿಂದ ಕರಾವಳಿ ಜಿಲ್ಲೆಗಳಿಗೆ ಸದ್ಯವಿರುವ ಬದಲಿ ಮಾರ್ಗ
1. ಮೈಸೂರು - ಮಡಿಕೇರಿ - ಸಂಪಾಜೆ ಘಾಟ್
2. ತೀರ್ಥಹಳ್ಳಿ - ಹುಲಿಕಲ್ - ಬಾಳೇಬಾರಿ ಘಾಟ್
3. ಹಾಸನ - ಅರಕಲಗೂಡು - ಚಾರ್ಮಾಡಿ ಘಾಟ್
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications