ಶಿರಾಡಿ ಘಾಟ್: ತಜ್ಞ ಇಂಜಿನಿಯರ್ಸ್ ಸಿಎಂಗೆ ನೀಡಿದ ವರದಿಯಲ್ಲೇನಿದೆ?
Recommended Video

ಭಾರೀ ಮಳೆ ಮತ್ತು ಭೂಕುಸಿತದಿಂದ ಬಂದ್ ಆಗಿರುವ ಶಿರಾಡಿ ಘಾಟ್ ಮತ್ತೆ ಸಂಚಾರಕ್ಕೆ ಮುಕ್ತವಾಗುವುದು ಯಾವಾಗ ಎನ್ನುವ ಗೊಂದಲಕ್ಕೆ ಶನಿವಾರ (ಸೆ 1) ರಾಜ್ಯ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ತೆರೆಯೆಳೆದಿದ್ದರು. ಮುಂದಿನ ಹತ್ತು ದಿನದೊಳಗೆ ಸ್ಥಳೀಯ ತಜ್ಞರ ವರದಿಯನ್ನು ಆಧರಿಸಿ ಭಾರೀ ವಾಹನಗಳನ್ನು ಹೊರತು ಪಡಿಸಿ ಇತರ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದಿದ್ದರು.
ಆದರೆ, ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಸೆಪ್ಟಂಬರ್ ಮೂರರಿಂದಲೇ ಸಂಚಾರಕ್ಕೆ ಶಿರಾಡಿ ಮುಕ್ತಗೊಳಿಸಬಹುದು ಎಂದು ಹೆದ್ದಾರಿ ಕಾರ್ಯಪಾಲಕ ಇಂಜಿನಿಯರ್, ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.
ಈ ನಡುವೆ, ಗುಂಡ್ಯ ಮತ್ತು ಶಿರಾಡಿ ಪರಿಸರದಲ್ಲಿರುವ ಜನರ ವಿನಂತಿಯ ಮೇರೆಗೆ, ಪುತ್ತೂರು ಅಸೋಸಿಯೇಶನ್ಸ್ ಆಫ್ ಸಿವಿಲ್ ಇಂಜಿನಿಯರ್ಸಿನ ಹನ್ನೆರಡು ಜನರ ತಂಡ ದಿನಾಂಕ ಆಗಸ್ಟ್ 27ರಂದು, ಶಾಸಕಿ ತೇಜಸ್ವಿನಿ ರಮೇಶ್ ಅವರೊಂದಿಗೆ ಶಿರಾಡಿ ಘಾಟ್ ಸಂಚರಿಸಿ, ವಿಸ್ಕೃತ ವರದಿ ಮತ್ತು ತೆಗೆದುಕೊಳ್ಳಬಹುದಾದ ಪರಿಹಾರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ.
ರಾಜಧಾನಿಯಿಂದ ಕರಾವಳಿ ತಲುಪಲು ಅತ್ಯಂತ ಪ್ರಮುಖ ಕೊಂಡಿಯಾಗಿರುವ ಶಿರಾಡಿ ಘಾಟ್ ಶೀಘ್ರ ಸಂಚಾರಕ್ಕೆ ಮತ್ತು ಶಾಶ್ವತ ಪರಿಹಾರಕ್ಕೆ ಖುದ್ದಾಗಿ ಘಾಟ್ ನಲ್ಲಿ ಸಂಚರಿಸಿ ವರದಿ ನೀಡಿದ, ಪುತ್ತೂರು ಅಸೋಸಿಯೇಶನ್ಸ್ ಆಫ್ ಸಿವಿಲ್ ಇಂಜಿನಿಯರ್ಸಿನ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತಾ, ಸಿಎಂಗೆ ತಂಡ ನೀಡಿದ ವರದಿಯ ಯಥಾವತ್ ಕಾಪಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಮುಂದೆ ಓದಿ

ಹನ್ನೆರಡು ಭಾಗಗಳಲ್ಲಿ ಭೂಕುಸಿತ ಕಂಡುಬರುತ್ತಿದೆ,
1. ನದಿಯ ಬದಿಗೆ ತಾಗಿಕೊಂಡಿರುವ ರಸ್ತೆಯು ಸುಮಾರು ಹನ್ನೆರಡು ಭಾಗಗಳಲ್ಲಿ ಭೂಕುಸಿತ ಕಂಡುಬರುತ್ತಿದೆ, ಇದೊಂದು ಗಂಭೀರ ಸಮಸ್ಯೆ. ನದಿಯ ಅಂಚಿನಲ್ಲಿರುವ ರಸ್ತೆ ಭಾಗಗಳ ಕುಸಿತ ಎಷ್ಟು ಭೀಕರವಾಗಿದೆಯೆಂದರೆ ಸದರಿ ರಸ್ತೆಯು ಈ ಭಾಗಗಳಲ್ಲಿ ಘನ ಮತ್ತು ಮಧ್ಯಮ ಸಾಮರ್ಥ್ಯದ ಸರಕು ಸಾಗಾಟ ವಾಹನಗಳು ಸಂಚರಿಸಿದರೆ, ಅನಾಹುತಗಳನ್ನು ಆಹ್ವಾನಿಸಿದಂತೆ ಆಗಬಹುದು.
2. ಹೆಚ್ಚಿನ ಎಲ್ಲಾ ತಿರುವುಗಳಲ್ಲಿ ರಸ್ತೆಯ ಇನ್ನೊಂದು ಬದಿಯಲ್ಲಿರುವ ಗುಡ್ಡಗಳು ಸಹ ಕೆಲವು ಕಡೆ ಕುಸಿದಿರುವುದು ಕಂಡುಬಂದಿದ್ದು, ಮುಂದೆಯೂ ಕುಸಿಯುವ ಸಂಭವ ಕಂಡುಬರುತ್ತಿದೆ.

ಒರತೆ ನೀರನ್ನು ಒಯ್ಯಲು ಬೇಕಾದಷ್ಟು ಪಾತ್ರವನ್ನು ಹೊಂದಿರುವುದಿಲ್ಲ
3. ರಸ್ತೆಯ ಬದಿಯ ಬಸಿಕಾಲುವೆಗಳು ಸಮರ್ಪಕವಾಗಿಲ್ಲ. ಈ ಕಾಲುವೆಗಳು ಮಳೆನೀರು ಮತ್ತು ಒರತೆ ನೀರನ್ನು (scapage water) ಒಯ್ಯಲು ಬೇಕಾದಷ್ಟು ಪಾತ್ರವನ್ನು ಹೊಂದಿರುವುದಿಲ್ಲ. ಇದರಿಂದಾಗಿ, ಗುಡ್ಡೆಯ ಬದಿಯ ನೀರು ರಸ್ತೆಯ ಮೇಲೆ ಬಂದು ನಂತರ ಇನ್ನೊಂದು ಮಗ್ಗುಲಿಗೆ ಅಂದರೆ ಹೊಳೆಯ ಬದಿ ಹರಿದುಬರುತ್ತಿರುವುದು ಕಂಡುಬಂದಿದೆ.

ಹೆಚ್ಚಿನ ಎಲ್ಲಾ ಕಡೆಗಳಲ್ಲಿ ಮಣ್ಣು ಕರಗಿರುವುದು ಕಂಡು ಬರುತ್ತಿದೆ
4. ಮೋರಿಗಳಿಂದ ನೀರು ಹರಿದು ಹೋಗುವಲ್ಲಿ ಹೆಚ್ಚಿನ ಎಲ್ಲಾ ಕಡೆಗಳಲ್ಲಿ ಮಣ್ಣು ಕರಗಿರುವುದು ಕಂಡು ಬರುತ್ತಿದೆ.
5. ಶಿರಾಡಿ ಘಾಟಿನ ಹೊಸ ಕಾಂಕ್ರೀಟ್ ರಸ್ತೆ ಮತ್ತು ಈ ಹಿಂದಿನ ಕಾಂಕ್ರೀಟ್ ರಸ್ತೆಗಳಲ್ಲಿ ಒಂದು ಕಡೆ ಮಾತ್ರ ಸಣ್ಣ ಪ್ರಮಾಣದ (ಭೂಕುಸಿತದ ಪ್ರದೇಶಗಳಲ್ಲಿ) ಹಾನಿಯಾಗಿರುವುದು ಕಂಡುಬರುತ್ತಿದೆ.
(ಇದಕ್ಕೆ ಸೂಚಿಸಿರುವ ಪ್ರಮುಖ ಪರಿಹಾರಗಳನ್ನು ಮುಂದಿನ ಸ್ಲೈಡುಗಳಲ್ಲಿ)

ಚರಂಡಿ ವ್ಯವಸ್ಥೆಯೊಂದಿಗೆ ರಸ್ತೆ ನಿರ್ಮಿಸುವುದು
ರಸ್ತೆಬದಿಯ ಬಸಿಕಾಲುವೆಗಳ ಗಾತ್ರವನ್ನು ದೊಡ್ಡದು ಮಾಡುವುದು ಮತ್ತು ಕಾಲುವೆಯ ತಳಭಾಗದಲ್ಲಿ ಒರತೆ ನೀರು ಹಾದು ಹೋಗಲು ಸಮರ್ಪಕವಾದ ತೂತುಗಳನ್ನು ಒದಗಿಸುವುದು. ಭೂಕುಸಿತ ಉಂಟಾದ ಪ್ರದೇಶಗಳಲ್ಲಿರುವ ನದಿಪಾತ್ರದ ಭೂಮಿ ಭಾಗವು ಕಡಿದಾಗಿದೆ. ನದಿಪಾತ್ರವು 50-100 ಅಡಿ ಆಳದಲ್ಲಿರುತ್ತದೆ ಮತ್ತು ಅಂದಾಜು ನಾಲ್ಕು ನೂರು ಅಡಿ ಉದ್ದವಿರುತ್ತದೆ. ಇಲ್ಲಿ ತಡೆಗೋಡೆ ನಿರ್ಮಿಸುವುದು ಕಷ್ಟ. ಹಾಗಾಗಿ, ಈ ಪ್ರದೇಶಗಳಲ್ಲಿ ರಸ್ತೆಯ ಇನ್ನೊಂದು ಬದಿಯನ್ನು ಅಗಲಗೊಳಿಸಿ ಸರಿಯಾದ, ಚರಂಡಿ ವ್ಯವಸ್ಥೆಯೊಂದಿಗೆ ರಸ್ತೆ ನಿರ್ಮಿಸುವುದು.

ಸೂಕ್ತ ಪೊಲೀಸ್ ಬಂದೋಬಸ್ತ್ ಮುಖಾಂತರ ವಾಹನ ಸಂಚಾರಕ್ಕೆ ಅನುವು
ಭೂಕುಸಿತ ಉಂಟಾದ ಅರ್ಧಭಾಗದಲ್ಲಿ ವಾಹನ ಸಂಚರಿಸಿದರೆ ತೊಂದರೆಗಳಾಗುವ ಸಾಧ್ಯತೆ ಇರುವುದರಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ಮುಖಾಂತರ ಘನ ಮತ್ತು ಮಧ್ಯಮ ಸಾಮರ್ಥ್ಯದ ಸರಕು ಸಾಗಟು ವಾಹನಗಳನ್ನು ಹೊರತು ಪಡಿಸಿ ಇತರ ಎಲ್ಲಾ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುವುದು.
ಭೂಕುಸಿತದ ಪ್ರದೇಶಗಳಲ್ಲಿ ರಸ್ತೆ ಬದಿಗಳಿಗೆ ಸಮರ್ಪಕವಾದ ಸೇಫ್ ಗಾರ್ಡ್ ವಾಲ್ ಮಾಡುವುದು. ಈ ಸೇಫ್ ಗಾರ್ಡ್ ಮಾಡಿದ ಭಾಗಗಳಲ್ಲಿ ರಸ್ತೆ ಮತ್ತು ಸೇಫ್ ಗಾರ್ಡ್ ಮಾಡಿದ ಎಲ್ಲಾ ಪ್ರದೇಶಗಳಲ್ಲಿ ನೀರು ಇಂಗಿ ಹೋಗದಂತೆ ಸುದೃಢವಾದ ಇಂಟರ್ ಲಾಕ್ ಅಳವಡಿಸಿವುದು. ನಂತರವಷ್ಟೇ ಘನ ಮತ್ತು ಮಧ್ಯಮ ಸಾಮರ್ಥ್ಯದ ಸರಕು ಸಾಗಾಟ ವಾಹನಗಳನ್ನು ಸಂಚರಿಸುವಂತೆ ಅನುವು ಮಾಡಿಕೊಡುವುದು.

ಘನ, ಮಧ್ಯಮ ಸರಕು ಸಾಗಾಟ ವಾಹನಗಳನ್ನು ಪಾರ್ಕ್ ಮಾಡದಂತೆ ನಿರ್ಬಂಧಿಸುವುದು
ಶಿರಾಡಿ ಘಾಟ್ ಆರಂಭದಿಂದ ಅಂತ್ಯದವರೆಗೂ ರಸ್ತೆಯ ಎರಡೂ ಬದಿಗಳಲ್ಲಿ ಯಾವುದೇ ಘನ ಮತ್ತು ಮಧ್ಯಮ ಸಾಮರ್ಥ್ಯದ ಸರಕು ಸಾಗಾಟ ವಾಹನಗಳನ್ನು ಪಾರ್ಕ್ ಮಾಡದಂತೆ ನಿರ್ಬಂಧಿಸುವುದು. ಮೋರಿಗಳಿಂದ ನೀರು ಹೋಗುವಲ್ಲಿ ಎಲ್ಲಾ ಕಡೆ ಕಪ್ಪುಕಲ್ಲು ಹಾಸುವುದು. ಯಾವುದೇ ರಸ್ತೆಗಳ ನಕ್ಷೆ ಸಿದ್ದಪಡಿಸುವಾಗ ಸ್ಥಳೀಯ ಜನರ ಮತ್ತು ಇಂಜಿನಿಯರುಗಳ ಅಭಿಪ್ರಾಯ ಮತ್ತು ಸಲಹೆ ಸಂಗ್ರಹಿಸುವುದು ಸೂಕ್ತ. ಶಿರಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಆರಂಭ ಮಾಡಿದ ನಂತರದ ಒಂದು ತಿಂಗಳಲ್ಲಿ ತಜ್ಞ ಇಂಜಿನಿಯರುಗಳು ರಸ್ತೆಯ ದೃಢತೆಯ ಬಗ್ಗೆ ಪ್ರತೀದಿನವೂ ಪರಿಶೀಲಿಸಿ ವರದಿ ನೀಡುವುದು ಉತ್ತಮ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications