ಶಿರಾಡಿ ಘಾಟ್ ಸುರಂಗ ಮಾರ್ಗಕ್ಕೆ ಒಪ್ಪಿಗೆ ಕೊಟ್ಟ ಪರಿಸರ ಇಲಾಖೆ
ಬೆಂಗಳೂರು, ಜುಲೈ 06 : 'ಶಿರಾಡಿ ಘಾಟ್ನಲ್ಲಿ 19 ಕಿ.ಮೀ.ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಪರಿಸರ ಇಲಾಖೆ ಒಪ್ಪಿಗೆ ನೀಡಿದೆ. ಪರಿಸರ ಸ್ನೇಹಿಯಾಗಿ ನಿರ್ಮಾಣ ಮಾಡುವುದರಿಂದ ಕಾಡಿನ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ' ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.
ಮಂಗಳವಾರ ವಿಧಾನಪರಿಷತ್ತಿನಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಶಿರಾಡಿ ಘಾಟ್ನಲ್ಲಿ ಮಳೆ ಬಂದಾಗ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ 19 ಕಿ.ಮೀ.ಸುರಂಗ ಮಾರ್ಗ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ' ಎಂದರು. [ಏನಿದು ಶಿರಾಡಿ ಘಾಟ್ ಬೈಪಾಸ್ ಕಾಮಗಾರಿ?]

'ಶಿರಾಡಿಯಲ್ಲಿ 11 ತಿರುವುಗಳು ಬರಲಿದ್ದು, ಸಂಚಾರದ ವೇಳೆ ಅಪಘಾತಗಳಾಗುತ್ತಿವೆ. ಆದ್ದರಿಂದ ತಿರುವುಗಳ ಬದಲಿಗೆ ನೇರ ರಸ್ತೆ ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಪರಿಸರ ಇಲಾಖೆಯು ಇದಕ್ಕೆ ಒಪ್ಪಿಗೆ ನೀಡಿದೆ' ಎಂದು ಸಚಿವರು ವಿವರಣೆ ನೀಡಿದರು. [ಶಿರಾಡಿ ಘಾಟ್ ಸುರಂಗ ಮಾರ್ಗ ಕಾಮಗಾರಿ ಶೀಘ್ರ ಆರಂಭ]
ಕಾಮಗಾರಿ ಯಾವಾಗ? : '2016ರ ಡಿಸೆಂಬರ್ ಅಂತ್ಯದೊಳಗೆ ಶಿರಾಡಿ ಘಾಟ್ ನಲ್ಲಿ ಉದ್ದೇಶಿತ ಬೈಪಾಸ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು' ಎಂದು ಕೇಂದ್ರ ಬಂದರು ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು 2015ರ ಡಿಸೆಂಬರ್ನಲ್ಲಿ ಮಂಗಳೂರಿಗೆ ಭೇಟಿ ನೀಡಿದಾಗ ಹೇಳಿದ್ದರು. [ಚಿತ್ರಗಳು : ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ-ಮುಕ್ತ]
'ಕಾಮಗಾರಿಗೆ ಸಂಬಂಧಪಟ್ಟಂತೆ ಡಿಪಿಆರ್ ಸರ್ವೆ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 6 ಸುರಂಗಗಳು ಮತ್ತು 12 ಸೇತುವೆಗಳ ನಿರ್ಮಾಣಗೊಳ್ಳಲಿವೆ. ಯೋಜನೆಗೆ ಸುಮಾರು 12 ಸಾವಿರ ಕೋಟಿ ರೂ. ವೆಚ್ಚವಾಗಲಿದೆ' ಎಂದು ಸಚಿವರು ತಿಳಿಸಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications