ಅಗತ್ಯವಿದ್ದರೆ ಶೀರೂರು ಶ್ರೀಗಳ ಸಾವಿನ ಬಗ್ಗೆ ತನಿಖೆ : ಕುಮಾರಸ್ವಾಮಿ
ಬೆಂಗಳೂರು, ಜುಲೈ 19 : 'ಉಡುಪಿಯ ಶೀರೂರು ಲಕ್ಷ್ಮೀವರ ತೀರ್ಥರ ಸಾವಿನ ಬಗ್ಗೆ ಅಗತ್ಯ ಎನಿಸಿದರೆ ತನಿಖೆಗೆ ಅದೇಶ ನೀಡಲಾಗುತ್ತದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಕೆಲವು ವ್ಯಕ್ತಿಗಳು ಲಕ್ಷ್ಮೀವರ ತೀರ್ಥರ ಸಾವು ಅಸಹಜ ಎಂದು ಹೇಳುತ್ತಿದ್ದಾರೆ. ಅಗತ್ಯ ಎಂದು ಅನ್ನಿಸಿದರೆ ತನಿಖೆಗೆ ಆದೇಶಿಸುತ್ತೇವೆ' ಎಂದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, 'ಲಕ್ಷ್ಮೀವರ ತೀರ್ಥರ ಸಾವಿಗೆ ವಿಷ ಪ್ರಾಶನ ಕಾರಣ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆದರೆ, ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ' ಎಂದು ಸ್ಪಷ್ಟಪಡಿಸಿದರು.

ಉಡುಪಿಯ ಶೀರೂರು ಲಕ್ಷ್ಮೀವರ ತೀರ್ಥರು ಗುರುವಾರ ಬೆಳಗ್ಗೆ ಮಣಿಪಾಲಿನ ಕಸ್ತೂರ ಬಾ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಸದ್ಯ, ಮರಣೋತ್ತರ ಪರೀಕ್ಷೆ ನಡೆಸಿ ಮಠದ ಸಿಬ್ಬಂದಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ.
ಸಹಜ ಸಾವು : ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪೇಜಾವರ ಶ್ರೀಗಳು, 'ಶೀರೂರು ಲಕ್ಷ್ಮೀವರ ತೀರ್ಥರ ಅಗಲಿಕೆ ದುಖಃ ತಂದಿದೆ. ವಿಷ ಪ್ರಾಶನದ ಬಗ್ಗೆ ಮಾಹಿತಿ ಇಲ್ಲ' ಎಂದು ಹೇಳಿದ್ದಾರೆ.
'ವಿಷ ನೀಡುವ ಪ್ರಮೇಯವೇ ಇಲ್ಲ. ಸ್ವಾಮೀಜಿಗಳನ್ನು ಯಾರೂ ಕೊಲೆ ಮಾಡುವುದಿಲ್ಲ. ಅರದ್ದು ಕೊಲೆ ಎಂಬುದು ಶುದ್ಧ ಸುಳ್ಳು. ಅವರದು ಸಹಜ ಸಾವು, ಸಾವಿನ ಬಗ್ಗೆ ಸಂಶಯ ಪಡುವುದು ಸರಿಯಲ್ಲ' ಎಂದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications