ಶಿರೂರು ಶ್ರೀ ನಿಧನ: ಆರು ಮಠಗಳ ವಿರುದ್ಧದ ಕೇವಿಯಟ್ ಅನೂರ್ಜಿತ
ಬೆಂಗಳೂರು, ಜುಲೈ 23: ಪಟ್ಟದ ದೇವರನ್ನು ತಮಗೆ ವಾಪಸ್ ನೀಡುತ್ತಿಲ್ಲ ಎಂದು ಆರೋಪಿಸಿ ಶಿರೂರು ಲಕ್ಷ್ಮೀವರ ತೀರ್ಥರು ಸಲ್ಲಿಸಿದ್ದ ಕೇವಿಯಟ್ ಅನೂರ್ಜಿತವಾಗಲಿದೆ.
ಅರ್ಜಿ ಸಲ್ಲಿಸಿದ್ದ ಲಕ್ಷ್ಮೀವರ ತೀರ್ಥರು ನಿಧನರಾಗಿರುವುದರಿಂದ ಕೇವಿಯಟ್ ಪರಿಗಣನೆಗೆ ಬರುವುದಿಲ್ಲ.
ಈ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಲಕ್ಷ್ಮೀವರ ತೀರ್ಥರು, ನಿತ್ಯವೂ ಪೂಜೆ ನಡೆಸಲು ಸಾಧ್ಯವಾಗದ ಕಾರಣಕ್ಕೆ ಮಠದ ಪಟ್ಟದ ದೇವರು ವಿಠ್ಠಲ ಮೂರ್ತಿ ಹಾಗೂ ಇನ್ನಿತರೆ ವಿಗ್ರಹಗಳನ್ನು ಉಡುಪಿಯ ಕೃಷ್ಣ ದೇವಸ್ಥಾನಕ್ಕೆ ಒಪ್ಪಿಸಿದ್ದರು.
ಬಳಿಕ ಪಟ್ಟದ ದೇವರನ್ನು ತಮಗೆ ವಾಪಸ್ ನೀಡದ ಕಾರಣ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪುತ್ತಿಗೆ ಮಠದ ಶ್ರೀಗಳನ್ನು ಹೊರತುಪಡಿಸಿ ಅಷ್ಟ ಮಠದ ಉಳಿದೆಲ್ಲ ಮಠಗಳ ವಿರುದ್ಧ ಅವರು ಕೇವಿಯಟ್ ಸಲ್ಲಿಸಿದ್ದರು.

ವಿಗ್ರಹಗಳನ್ನು ವಾಪಸ್ ನೀಡಲು ಒಪ್ಪದ ಮಠಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೂಡ ಅವರು ಸಿದ್ಧತೆ ನಡೆಸಿದ್ದರು.
ಶಿರೂರು ಶ್ರೀಗಳು ಬ್ರಹಮ್ಚರ್ಯ ಪಾಲಿಸಿಲ್ಲ. ಇದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಹೀಗಾಗಿ ಅವರು ಯತಿಯಲ್ಲ. ಯತಿಗಳಲ್ಲದವರು ಪೀಠಾಧೀಶರಾಗಿ ಮುಂದುವರಿಯಬಾರದು.
ಶಿರೂರು ಶ್ರೀಗಳು ಶಿಷ್ಯ ಸ್ವೀಕಾರ ಮಾಡಿ ಪೀಠವನ್ನು ತ್ಯಾಗ ಮಾಡಬೇಕು. ಯತಿಗಳಲ್ಲದವರು ಪಟ್ಟದ ದೇವರ ಪೂಜೆ ಮಾಡುವಂತಿಲ್ಲ. ಹೀಗಾಗಿ ಅವುಗಳನ್ನು ಅವರು ವಾಪಸ್ ಕೇಳಬಾರದು ಎಂದು ಆರು ಮಠಗಳು ವಾದಿಸಿದ್ದವು.
ಎರಡು ದಿನದಲ್ಲಿ ಮರಣೋತ್ತರ ಪರೀಕ್ಷೆ
ಅಸಹಜವಾಗಿ ಮೃತಪಟ್ಟ ಶಿರೂರು ಲಕ್ಷ್ಮೀವರ ತೀರ್ಥರ ಮರಣೋತ್ತರ ಪರೀಕ್ಷೆಯ ತಾತ್ಕಾಲಿಕ ವರದಿ ಎರಡು ದಿನಗಳಲ್ಲಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.
ಶಿರೂರು ಶ್ರೀಗಳ ಮರಣೋತ್ತರ ಪರೀಕ್ಷೆಯನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ವಿಭಾಗದ ಮರಣೋತ್ತರ ಪರೀಕ್ಷೆ ವಿಭಾಗದಲ್ಲಿ ನಡೆಸಲಾಗಿತ್ತು.
ಶ್ರೀಗಳ ದೇಹದಲ್ಲಿ ವಿಷಕಾರಿ ಅಂಶ ಇರುವುದು ಪರೀಕ್ಷೆಯಲ್ಲಿ ಪತ್ತೆಯಾಗಿತ್ತು. ಅದರ ವಿಸ್ತೃತವಾದ ವರದಿಯು ವಿಧಿವಿಜ್ಞಾನ ಪ್ರಯೋಗಾಲಯದಿಂದ ಬರಬೇಕಿದ್ದು, ಎರಡು ವಾರ ಬೇಕಾಗಬಹುದು ಎನ್ನಲಾಗಿದೆ.
ಈ ವರದಿಯಲ್ಲಿ ಶ್ರೀಗಳ ಸಾವಿಗೆ ಕಾರಣವಾದ ವಿಷ, ಅದರ ಪ್ರಮಾಣ ಮುಂತಾದವುಗಳ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications