ಶಿರೂರು ಶ್ರೀ ನಿಧನ: ಆರು ಮಠಗಳ ವಿರುದ್ಧದ ಕೇವಿಯಟ್ ಅನೂರ್ಜಿತ
ಬೆಂಗಳೂರು, ಜುಲೈ 23: ಪಟ್ಟದ ದೇವರನ್ನು ತಮಗೆ ವಾಪಸ್ ನೀಡುತ್ತಿಲ್ಲ ಎಂದು ಆರೋಪಿಸಿ ಶಿರೂರು ಲಕ್ಷ್ಮೀವರ ತೀರ್ಥರು ಸಲ್ಲಿಸಿದ್ದ ಕೇವಿಯಟ್ ಅನೂರ್ಜಿತವಾಗಲಿದೆ.
ಅರ್ಜಿ ಸಲ್ಲಿಸಿದ್ದ ಲಕ್ಷ್ಮೀವರ ತೀರ್ಥರು ನಿಧನರಾಗಿರುವುದರಿಂದ ಕೇವಿಯಟ್ ಪರಿಗಣನೆಗೆ ಬರುವುದಿಲ್ಲ.
ಈ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಲಕ್ಷ್ಮೀವರ ತೀರ್ಥರು, ನಿತ್ಯವೂ ಪೂಜೆ ನಡೆಸಲು ಸಾಧ್ಯವಾಗದ ಕಾರಣಕ್ಕೆ ಮಠದ ಪಟ್ಟದ ದೇವರು ವಿಠ್ಠಲ ಮೂರ್ತಿ ಹಾಗೂ ಇನ್ನಿತರೆ ವಿಗ್ರಹಗಳನ್ನು ಉಡುಪಿಯ ಕೃಷ್ಣ ದೇವಸ್ಥಾನಕ್ಕೆ ಒಪ್ಪಿಸಿದ್ದರು.
ಬಳಿಕ ಪಟ್ಟದ ದೇವರನ್ನು ತಮಗೆ ವಾಪಸ್ ನೀಡದ ಕಾರಣ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪುತ್ತಿಗೆ ಮಠದ ಶ್ರೀಗಳನ್ನು ಹೊರತುಪಡಿಸಿ ಅಷ್ಟ ಮಠದ ಉಳಿದೆಲ್ಲ ಮಠಗಳ ವಿರುದ್ಧ ಅವರು ಕೇವಿಯಟ್ ಸಲ್ಲಿಸಿದ್ದರು.

ವಿಗ್ರಹಗಳನ್ನು ವಾಪಸ್ ನೀಡಲು ಒಪ್ಪದ ಮಠಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೂಡ ಅವರು ಸಿದ್ಧತೆ ನಡೆಸಿದ್ದರು.
ಶಿರೂರು ಶ್ರೀಗಳು ಬ್ರಹಮ್ಚರ್ಯ ಪಾಲಿಸಿಲ್ಲ. ಇದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಹೀಗಾಗಿ ಅವರು ಯತಿಯಲ್ಲ. ಯತಿಗಳಲ್ಲದವರು ಪೀಠಾಧೀಶರಾಗಿ ಮುಂದುವರಿಯಬಾರದು.
ಶಿರೂರು ಶ್ರೀಗಳು ಶಿಷ್ಯ ಸ್ವೀಕಾರ ಮಾಡಿ ಪೀಠವನ್ನು ತ್ಯಾಗ ಮಾಡಬೇಕು. ಯತಿಗಳಲ್ಲದವರು ಪಟ್ಟದ ದೇವರ ಪೂಜೆ ಮಾಡುವಂತಿಲ್ಲ. ಹೀಗಾಗಿ ಅವುಗಳನ್ನು ಅವರು ವಾಪಸ್ ಕೇಳಬಾರದು ಎಂದು ಆರು ಮಠಗಳು ವಾದಿಸಿದ್ದವು.
ಎರಡು ದಿನದಲ್ಲಿ ಮರಣೋತ್ತರ ಪರೀಕ್ಷೆ
ಅಸಹಜವಾಗಿ ಮೃತಪಟ್ಟ ಶಿರೂರು ಲಕ್ಷ್ಮೀವರ ತೀರ್ಥರ ಮರಣೋತ್ತರ ಪರೀಕ್ಷೆಯ ತಾತ್ಕಾಲಿಕ ವರದಿ ಎರಡು ದಿನಗಳಲ್ಲಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.
ಶಿರೂರು ಶ್ರೀಗಳ ಮರಣೋತ್ತರ ಪರೀಕ್ಷೆಯನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ವಿಭಾಗದ ಮರಣೋತ್ತರ ಪರೀಕ್ಷೆ ವಿಭಾಗದಲ್ಲಿ ನಡೆಸಲಾಗಿತ್ತು.
ಶ್ರೀಗಳ ದೇಹದಲ್ಲಿ ವಿಷಕಾರಿ ಅಂಶ ಇರುವುದು ಪರೀಕ್ಷೆಯಲ್ಲಿ ಪತ್ತೆಯಾಗಿತ್ತು. ಅದರ ವಿಸ್ತೃತವಾದ ವರದಿಯು ವಿಧಿವಿಜ್ಞಾನ ಪ್ರಯೋಗಾಲಯದಿಂದ ಬರಬೇಕಿದ್ದು, ಎರಡು ವಾರ ಬೇಕಾಗಬಹುದು ಎನ್ನಲಾಗಿದೆ.
ಈ ವರದಿಯಲ್ಲಿ ಶ್ರೀಗಳ ಸಾವಿಗೆ ಕಾರಣವಾದ ವಿಷ, ಅದರ ಪ್ರಮಾಣ ಮುಂತಾದವುಗಳ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications