ಶಿವಮೊಗ್ಗ ಏರ್ಪೋರ್ಟ್: ನೈಟ್ ಲ್ಯಾಂಡಿಂಗ್ಗಾಗಿ ಉಪಕರಣ ಅಳವಡಿಕೆಗೆ ಮಣ್ಣು ಪೂರಕ, ಸಮೀಕ್ಷೆ ವರದಿ
ಶಿವಮೊಗ್ಗ: ಜಿಲ್ಲೆಯ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಬಹುನಿರೀಕ್ಷಿತ ವಿಮಾನಗಳ ನೈಟ್ ಲ್ಯಾಂಡಿಂಗ್ ಸೌಲಭ್ಯಕ್ಕೆ ಅಗತ್ಯವಿರುವ ಪ್ರಕ್ರಿಯೆಗಳು ವೇಗ ಪಡೆದುಕೊಂಡಿವೆ. ಈ ಸಂಬಂಧ ಕೈಗೊಳ್ಳಲಾಗಿದ್ದ ಮಣ್ಣು ಪರೀಕ್ಷೆಯ ವರದಿ ಬಂದಿದ್ದು, ವರದಿಯಲ್ಲಿ ಸಕರಾತ್ಮಕ ಅಂಶಗಳನ್ನು ತಿಳಿಸಲಾಗಿದೆ. ಅವುಗಳ ವಿವರ ಇಲ್ಲಿದೆ.
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರು ಈ ಕುರಿತು ಹೇಳಿಕೆ ನೀಡಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, 'ವಿಮಾನ ನಿಲ್ದಾಣದಲ್ಲಿ ಡಾಪ್ಲರ್ ವೆರಿ ಹೈ ಫ್ರೀಕ್ವೆನ್ಸಿ ಓಮ್ನಿ ರೇಂಜ್ (DoVR) ಉಪಕರಣ ಅಳವಡಿಸಲು ಉದ್ದೇಶಿಸಲಾಗಿದೆʼ ಎಂದು ತಿಳಿಸಿದರು. ಅತ್ಯಾಧುನಿಕ ತಾಂತ್ರಿಕ ಉಪಕರಣ ಅಳವಡಿಸಲು ಮೊದಲು ಆ ಪ್ರದೇಶದ ಭೂಮಿಯ ಸ್ಥಿರತೆ ಪರೀಕ್ಷಿಸುವುದು ಕಡ್ಡಾಯವಾಗಿದೆ. ಅದರಂತೆ DoVR ಸ್ಥಾಪಿಸಲು ಉದ್ದೇಶಿಸಲಾದ ಜಾಗದ ಮಣ್ಣನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈಗ ಮಣ್ಣಿನ ಪರೀಕ್ಷಾ ವರದಿ ಲಭ್ಯವಾಗಿದ್ದು, ಉಪಕರಣ ಅಳವಡಿಕೆಗೆ ಮಣ್ಣು ಪೂರಕವಾಗಿದೆ ಎಂದು ದೃಢಪಟ್ಟಿದೆ.

ಮಣ್ಣು ಪರೀಕ್ಷೆ ಯಶಸ್ವಿಯಾದ ಬೆನ್ನಲ್ಲೇ, DoVR ಕೆಲಸ ಪ್ರಾರಂಭವಾಗಿದೆ ಎಂದು ನಂಜಯ್ಯನಮಠ ಅವರು ತಿಳಿಸಿದ್ದಾರೆ. ಈ ತಾಂತ್ರಿಕ ಸೌಲಭ್ಯವು ಕಾರ್ಯಗತಗೊಂಡರೆ, ವಿಮಾನಗಳು ರಾತ್ರಿ ವೇಳೆ ಹಾಗೂ ಮಂದ ವಾತಾವರಣ ಇರುವ ಸಂದರ್ಭದಲ್ಲೂ ಸುರಕ್ಷಿತವಾಗಿ ವಿಮಾನ ಇಳಿಯಲು ಸಹಕಾರಿಯಾಗಲಿದೆ.
ಆಗುಂಬೆ: ಘನ ವಾಹನಗಳ ಸಂಚಾರಕ್ಕೆ ಹಣ ವಸೂಲಿ ಆರೋಪ!
ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಆದೇಶವಿದ್ದರೂ ಆಗುಂಬೆ ಘಾಟಿಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರ ನಿರಂತರವಾಗಿ ಸಾಗಿದೆ. ಆದರೆ ಇದು ಸರ್ಕಾರದ ಅನುಮತಿಯಿಂದಲ್ಲ, ಬದಲಾಗಿ ಚೆಕ್ ಪೋಸ್ಟ್ನಲ್ಲಿ ನಡೆಯುತ್ತಿರುವ ಹಣದ ದಂಧೆ ಯಿಂದ! ರಾತ್ರಿ ಹತ್ತು ಗಂಟೆ ಕಳೆದರೆ ಸಾಕು, ಆಗುಂಬೆ ಚೆಕ್ ಪೋಸ್ಟ್ ಅಕ್ರಮದ ಅಡ್ಡೆಯಾಗಿ ಬದಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಸರಿ ಸುಮಾರು 19 ರಿಂದ 20 ಅಡಿ ಉದ್ದದ ಗಾಡಿಗಳನ್ನು ರಾತ್ರಿಯ ವೇಳೆ ಹಣ ಪಡೆದುಕೊಂಡು ಆಗುಂಬೆ ಘಾಟಿಯಲ್ಲಿ ಬಿಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ. ಈ ಬಗ್ಗೆ ಚೆಕ್ ಪೋಸ್ಟ್ ನಲ್ಲಿದ್ದವರನ್ನು ವಿಚಾರಿಸಿದರೆ ನಮಗೇನು ಗೊತ್ತಿಲ್ಲ ದಿನ ಹೋಗುತ್ತಿವೆ ಎಂಬ ಸಬೂಬು ನೀಡುತ್ತಿದ್ದಾರೆ. ಸಿಸಿಟಿವಿ ಹಾಳಾಗಿದೆ, ಅರಣ್ಯಾಧಿಕಾರಿಗಳು ಬರಬೇಕು ಎಂಬ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಒಂದು 19 ಅಡಿ ಉದ್ದದ ಟ್ರಕ್/ಲಾರಿಗೆ ಒಂದು ಸಾವಿರಕ್ಕೂ ಹೆಚ್ಚು ಹಣ ಪಡೆದುಕೊಳ್ಳುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಈ ಹಣ ಯಾರ ಜೇಬಿಗೆ ಹೋಗುತ್ತದೆ ಎಂಬುದು ತಿಳಿಯಬೇಕಿದೆ.
ಘಾಟಿಯಲ್ಲಿ ಪಾಸಾದ 19 ಅಡಿ ಟ್ರಕ್ ಗಾಡಿಗಳು ಎರಡು ಮೂರನೇ ಕಿರಿದಾದ ತಿರುವುಗಳಲ್ಲಿ ಗಾಡಿಯು ಸರಿಯಾಗಿ ತಿರುಗದೆ ಗಾಡಿಯ ಡ್ರೈವರ್ ಗಾಡಿಯನ್ನು ಹಿಂದೆ ಮುಂದೆ ತೆಗೆದು ಹರಸಾಹಸಪಟ್ಟು ಗಾಡಿಯನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಇನ್ನೂ ಕೆಲವು ಗಾಡಿಯವರು ರಾತ್ರಿಯ ಸಮಯವಾದ್ದರಿಂದ ಹಿಂದೆ ಮುಂದೆ ಗಾಡಿ ತೆಗೆಯಲು ಗೊತ್ತಾಗದೆ ರೋಡ್ ದಂಡೆಗೆ ಲಾರಿಗುದ್ದಿ ಘಾಟಿದಂಡೆ ಪುಡಿ ಪುಡಿ ಮಾಡಿ ಹಿಂದೆ ಮುಂದೆ ಲಾರಿತೆಗೆದು ಹೋಗುತ್ತಿದ್ದಾರೆ. ಈ ರೀತಿ ಇತ್ತೀಚೆಗೆ ರಾತ್ರಿ 10 ಗಂಟೆ ನಂತರ ಸಮಯದಲ್ಲಿ ಗಾಡಿಗಳು ಪಾಸಾಗುತ್ತಿವೆ ಎಂಬ ಮಾತು ನಿರಂತರವಾಗಿ ಕೇಳಿ ಬರುತ್ತಿದೆ.
ಹಾಗೆಯೇ ಸಣ್ಣ ವಾಹನಗಳಾದ ಬಾಳೆಕಾಯಿ, ತರಕಾರಿ, ಜಲ್ಲಿ, ಮೀನು, ಕೋಳಿ ಗಾಡಿಗಳಿಗೆ ಸಣ್ಣ ಪುಟ್ಟ ಗೂಡ್ಸ್ ಪಿಕಪ್ ಗಳಿಗೆ 50 ರಿಂದ ನೂರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನಲಾಗಿದೆ. ವಾಹನಗಳಲ್ಲಿ ಏನಿದೆ ಎಂಬುದನ್ನು ಪರಿಶೀಲಿಸದೆ ಹಣ ನೀಡಿದರೆ ಸಾಕು ಬಿಟ್ಟು ಬಿಡುತ್ತಿದ್ದಾರೆ. ತೆಗೆದುಕೊಂಡು ವಾಹನ ಬಿಡುತ್ತಿದ್ದಾರೆ ಎಂಬ ದೂರು ವಾಹನ ಚಾಲಕರಿಂದಲೇ ಕೇಳಿ ಬಂದಿದೆ. ಜಿಲ್ಲಾಧಿಕಾರಿಗಳ ಆದೇಶ ಇದ್ದರು ಸಹ ಹಣ ವಸೂಲಿ ಮಾಡಿ ಘನ ( ಅತೀ ದೊಡ್ಡ) ವಾಹನ ಓಡಾಟಕ್ಕೆ ಅನುಮತಿ ನೀಡುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ದೂರು ಕೇಳಿ ಬಂದಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications