Shivamogga: ಈದ್ ಮಿಲಾದ್ ವೇಳೆ ಕಲ್ಲು ತೂರಾಟ, 144 ಸೆಕ್ಷನ್ ಜಾರಿ, ಹಲವರ ಬಂಧನ
ಶಿವಮೊಗ್ಗ, ಅಕ್ಟೋಬರ್ 01: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಮೊನ್ನೆ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿ ಯುವಕರ ಗುಂಪು ಪೊಲೀಸರ ಮೇಲೆ ಕಲ್ಲು ಎಸೆದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು 144 ಸೆಕ್ಷನ್ ಜಾರಿ ಮಾಡಿದ್ದಾರೆ.
ಕಳೆದ ತಿಂಗಳು 28ರಂದು ಗುರುವಾರ ಈದ್ ಮಿಲಾದ್ ಅನ್ನು ಮುಸಲ್ಮಾನು ಅದ್ಧೂರಿಯಾಗಿ ಆಚರಿಸಿದ್ದಾರೆ. ಈ ವೇಳೆ ಜಿಲ್ಲೆಯ ರಾಗಿಗುಡ್ಡದಲ್ಲಿ ಮತ್ತು ಇನ್ನಿತರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆದಿತ್ತು. ಈ ವೇಳೆ ರಾಗಿಗುಡ್ಡದಲ್ಲಿ ಸಾವಿರಾರು ಮುಸ್ಲಿಂರು ಪಾಲ್ಗೊಂಡಿದ್ದರು.

ಈ ವೇಳೆ ಪುಂಡರ ಗುಂಡ ಪೊಲೀಸರ ಮೇಲೆ ಕಲ್ಲೆದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತು. ಪೊಲೀಸರು ಕಲ್ಲೆಸೆದ ಸುಮಾರು 10ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಹಲವರಿಗಾಗಿ ಶೋಧ ನಡೆದಿದೆ. ಸದ್ಯ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸುಮಾರು 2,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಈದ್ ಮಿಲಾದ್ ಆಚರಣೆ ವೇಳೆ ಕಲ್ಲೆಸೆತ ಘಟನೆ ತಿಳಿದು ಬರುತ್ತಿದ್ದಂತೆ ಪೊಲೀಸರ ವಿಶೇಷ ತಂಡ ಸ್ಥಳಕ್ಕೆ ಧಾವಿಸಿ, ಅಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿತು. ಸ್ಥಳಕ್ಕೆ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಭೇಟಿ ಮಾಡಿ ಪರಿಶೀಲಿಸಿದರು. ಶಾಂತಿನಗರದ ರಾಗಿಗುಡ್ಡದಲ್ಲಿ ಪುಂಡರ ಮೆಲೆ ಲಘು ಲಾಠಿ ಪ್ರಹಾರ ನಡೆಸಲಾಯಿತು.
ಘಟನೆ ಬಳಿಕ ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ನಿಷೇಧಾಜ್ಞೆ ಜಾರಿ ಮಾಡಲಾಯಿತು. ನಂತರ ಕಲ್ಲು ತೂರಿದ್ದವರನ್ನು ಪೊಲೀಸರು ಮನೆ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಒಬ್ಬೊಬ್ಬರನ್ನೇ ಬಂಧಿಸಿ ವಶಕ್ಕೆ ಪಡೆಯುತ್ತಿದ್ದಾರೆ. ಸದ್ಯ ಶಿವಮೊಗ್ಗದ ಈ ಭಾಗ ಬೂದಿ ಮುಚ್ಚಿದ ಕೆಂಡದಂತಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications