ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದಕ್ಕೆ ಪ್ರತಾಪ್ ಸಿಂಹ, ಸೋಮಣ್ಣ ಕಿಡಿ: ಶಿವರಾಜ್ ಕುಮಾರ್ ಪ್ರತಿಕ್ರಿಯೆ ಏನು?
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ ಮಾಡಿದ್ದಕ್ಕೆ, ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜ್ ಕುಟುಂಬ ಎನ್ನುವುದನ್ನು ಮುಂದಿಟ್ಟು ಇಬ್ಬರೂ ಶಿವಣ್ಣ ನಡೆದ ಪರೋಕ್ಷವಾಗಿಯೇ ವಿರೋಧ ವ್ಯಕ್ತಪಡಿಸಿದ್ದರು.
ಪ್ರತಾಪ್ ಸಿಂಹ ಮತ್ತು ವಿ ಸೋಮಣ್ಣ ಹೇಳಿಕೆಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. "ಪ್ರತಾಪ್ ಸಿಂಹ ಮತ್ತು ವಿ ಸೋಮಣ್ಣ ಕೂಡ ನಮಗೆ ಆಪ್ತರು. ಅವರ ಬಗ್ಗೆ ನಮಗೆ ಸಾಕಷ್ಟು ಗೌರವ ಇದೆ, ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಸ್ಪರ್ಧೆ ಮಾಡುವ ಬಗ್ಗೆ ನನಗೆ ಗೊತ್ತಿರಲಿಲ್ಲ. ಅವರು ಕರೆದರೆ ನಾನು ಪ್ರಚಾರಕ್ಕೆ ಹೋಗಲು ಸಿದ್ದ, ಆದರೆ ಇದುವರೆಗೂ ಯಾವ ಬಿಜೆಪಿಯವರು ನನ್ನನ್ನು ಸಂಪರ್ಕಿಸಿಲ್ಲ" ಎಂದು ಹೇಳಿದರು.

ವಿ ಸೋಮಣ್ಣ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿಸಿದ್ದಾರೆ ಎನ್ನುವ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಾಪ್ ಸಿಂಹ ಪರೋಕ್ಷವಾಗಿ ಶಿವರಾಜ್ ಕುಮಾರ್ ಅವರ ನಡೆಯನ್ನು ಟೀಕಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಅನೇಕ ಜನ ನಿಮ್ಮ ರಾಜಕೀಯದಲ್ಲಿ ಪುನೀತ್ ಹೆಸರು ತರಬೇಡಿ ಎಂದು ಪ್ರತಾಪ್ ಸಿಂಹ ಅವರನ್ನು ಜಾಡಿಸಿದ್ದರು.
ವಿ ಸೋಮಣ್ಣ ಕೂಡ ಈ ಬಗ್ಗೆ ಮಾತನಾಡಿ, 40 ವರ್ಷಗಳಿಂದ ನನಗೆ ರಾಜ್ ಕುಮಾರ್ ಕುಟುಂಬದ ಜೊತೆ ನಂಟಿದೆ, ಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದ್ರು ಗೊತ್ತಿಲ್ಲ ಎಂದು ಹೇಳಿದ್ದರು. ಸಿದ್ದರಾಮಯ್ಯ ಸೋಲಿನ ಭಯದಿಂದ ಸಿನಿಮಾ ಸ್ಟಾರ್ ಗಳನ್ನು ಕರೆಸಿ ಪ್ರಚಾರ ಮಾಡ್ತಿದ್ದಾರೆ ಎಂದು ಸೋಮಣ್ಣ ಹೇಳಿದ್ದರು.
ಚುನಾವಣೆ ಅಖಾಡದಲ್ಲಿ ಸಿನಿ ತಾರೆಯರ ದಂಡು
ಈ ಬಾರಿ ರಾಜ್ಯ ಚುನಾವಣಾ ಅಖಾಡ ರಂಗೇರಿದೆ. ಕಾಂಗ್ರೆಸ್ ಮತ್ತು ಅಧಿಕಾರದ ಗದ್ದುಗೆ ಹಿಡಿಯಲು ತೀವ್ರ ಪೈಪೋಟಿ ನಡೆಸುತ್ತಿವೆ. ಮತದಾರರನ್ನು ಸೆಳೆಯಲು ಚಲನಚಿತ್ರ ಮತ್ತು ಕಿರುತೆರೆ ಸ್ಟಾರ್ ಗಳನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಬಿಜೆಪಿ ಪರವಾಗಿ ಸುದೀಪ್, ಜಗ್ಗೇಶ್, ಶೃತಿ, ತಾರಾ, ಹರ್ಷಿಕಾ ಪೂಣಚ್ಚ ಸೇರಿದಂತೆ ಹಲವು ಕಿರುತೆರೆ ಕಲಾವಿದರು ಪ್ರಚಾರ ಮಾಡುತ್ತಿದ್ದಾರೆ.
ಕಾಂಗ್ರೆಸ್ ಪರವಾಗಿ ಶಿವರಾಜ್ ಕುಮಾರ್, ರಮ್ಯಾ, ನಿಶ್ವಿಕಾ ನಾಯ್ಡು, ದುನಿಯಾ ವಿಜಯ್ ಸೇರಿದಂತೆ ಇತರೆ ಕಲಾವಿದರು ಪ್ರಚಾರಕ್ಕೆ ಇಳಿದಿದ್ದಾರೆ. ಮತ್ತೊಬ್ಬ ಜನಪ್ರಿಯ ನಟ ದರ್ಶನ್ ಕೂಡ ಪ್ರಚಾರ ಮಾಡುತ್ತಿದ್ದು, ಅವರು ಪಕ್ಷವನ್ನು ನೋಡದೆ ಆಪ್ತರ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್, ಬಿಜೆಪಿ ಮತ್ತು ದರ್ಶನ್ ಪುಟ್ಟಣ್ಣಯ್ಯ ಪರವಾಗಿ ಪ್ರಚಾರ ಮಾಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications