ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದಕ್ಕೆ ಪ್ರತಾಪ್ ಸಿಂಹ, ಸೋಮಣ್ಣ ಕಿಡಿ: ಶಿವರಾಜ್ ಕುಮಾರ್ ಪ್ರತಿಕ್ರಿಯೆ ಏನು?
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ ಮಾಡಿದ್ದಕ್ಕೆ, ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜ್ ಕುಟುಂಬ ಎನ್ನುವುದನ್ನು ಮುಂದಿಟ್ಟು ಇಬ್ಬರೂ ಶಿವಣ್ಣ ನಡೆದ ಪರೋಕ್ಷವಾಗಿಯೇ ವಿರೋಧ ವ್ಯಕ್ತಪಡಿಸಿದ್ದರು.
ಪ್ರತಾಪ್ ಸಿಂಹ ಮತ್ತು ವಿ ಸೋಮಣ್ಣ ಹೇಳಿಕೆಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. "ಪ್ರತಾಪ್ ಸಿಂಹ ಮತ್ತು ವಿ ಸೋಮಣ್ಣ ಕೂಡ ನಮಗೆ ಆಪ್ತರು. ಅವರ ಬಗ್ಗೆ ನಮಗೆ ಸಾಕಷ್ಟು ಗೌರವ ಇದೆ, ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಸ್ಪರ್ಧೆ ಮಾಡುವ ಬಗ್ಗೆ ನನಗೆ ಗೊತ್ತಿರಲಿಲ್ಲ. ಅವರು ಕರೆದರೆ ನಾನು ಪ್ರಚಾರಕ್ಕೆ ಹೋಗಲು ಸಿದ್ದ, ಆದರೆ ಇದುವರೆಗೂ ಯಾವ ಬಿಜೆಪಿಯವರು ನನ್ನನ್ನು ಸಂಪರ್ಕಿಸಿಲ್ಲ" ಎಂದು ಹೇಳಿದರು.

ವಿ ಸೋಮಣ್ಣ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿಸಿದ್ದಾರೆ ಎನ್ನುವ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಾಪ್ ಸಿಂಹ ಪರೋಕ್ಷವಾಗಿ ಶಿವರಾಜ್ ಕುಮಾರ್ ಅವರ ನಡೆಯನ್ನು ಟೀಕಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಅನೇಕ ಜನ ನಿಮ್ಮ ರಾಜಕೀಯದಲ್ಲಿ ಪುನೀತ್ ಹೆಸರು ತರಬೇಡಿ ಎಂದು ಪ್ರತಾಪ್ ಸಿಂಹ ಅವರನ್ನು ಜಾಡಿಸಿದ್ದರು.
ವಿ ಸೋಮಣ್ಣ ಕೂಡ ಈ ಬಗ್ಗೆ ಮಾತನಾಡಿ, 40 ವರ್ಷಗಳಿಂದ ನನಗೆ ರಾಜ್ ಕುಮಾರ್ ಕುಟುಂಬದ ಜೊತೆ ನಂಟಿದೆ, ಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದ್ರು ಗೊತ್ತಿಲ್ಲ ಎಂದು ಹೇಳಿದ್ದರು. ಸಿದ್ದರಾಮಯ್ಯ ಸೋಲಿನ ಭಯದಿಂದ ಸಿನಿಮಾ ಸ್ಟಾರ್ ಗಳನ್ನು ಕರೆಸಿ ಪ್ರಚಾರ ಮಾಡ್ತಿದ್ದಾರೆ ಎಂದು ಸೋಮಣ್ಣ ಹೇಳಿದ್ದರು.
ಚುನಾವಣೆ ಅಖಾಡದಲ್ಲಿ ಸಿನಿ ತಾರೆಯರ ದಂಡು
ಈ ಬಾರಿ ರಾಜ್ಯ ಚುನಾವಣಾ ಅಖಾಡ ರಂಗೇರಿದೆ. ಕಾಂಗ್ರೆಸ್ ಮತ್ತು ಅಧಿಕಾರದ ಗದ್ದುಗೆ ಹಿಡಿಯಲು ತೀವ್ರ ಪೈಪೋಟಿ ನಡೆಸುತ್ತಿವೆ. ಮತದಾರರನ್ನು ಸೆಳೆಯಲು ಚಲನಚಿತ್ರ ಮತ್ತು ಕಿರುತೆರೆ ಸ್ಟಾರ್ ಗಳನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಬಿಜೆಪಿ ಪರವಾಗಿ ಸುದೀಪ್, ಜಗ್ಗೇಶ್, ಶೃತಿ, ತಾರಾ, ಹರ್ಷಿಕಾ ಪೂಣಚ್ಚ ಸೇರಿದಂತೆ ಹಲವು ಕಿರುತೆರೆ ಕಲಾವಿದರು ಪ್ರಚಾರ ಮಾಡುತ್ತಿದ್ದಾರೆ.
ಕಾಂಗ್ರೆಸ್ ಪರವಾಗಿ ಶಿವರಾಜ್ ಕುಮಾರ್, ರಮ್ಯಾ, ನಿಶ್ವಿಕಾ ನಾಯ್ಡು, ದುನಿಯಾ ವಿಜಯ್ ಸೇರಿದಂತೆ ಇತರೆ ಕಲಾವಿದರು ಪ್ರಚಾರಕ್ಕೆ ಇಳಿದಿದ್ದಾರೆ. ಮತ್ತೊಬ್ಬ ಜನಪ್ರಿಯ ನಟ ದರ್ಶನ್ ಕೂಡ ಪ್ರಚಾರ ಮಾಡುತ್ತಿದ್ದು, ಅವರು ಪಕ್ಷವನ್ನು ನೋಡದೆ ಆಪ್ತರ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್, ಬಿಜೆಪಿ ಮತ್ತು ದರ್ಶನ್ ಪುಟ್ಟಣ್ಣಯ್ಯ ಪರವಾಗಿ ಪ್ರಚಾರ ಮಾಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications