ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ಅಧ್ಯಕ್ಷರಾಗಿ ಶಿವಶಂಕರಪ್ಪ ಎಸ್. ಸಾಹುಕಾರ್ ನೇಮಕ

|
Google Oneindia Kannada News

ಬೆಂಗಳೂರು, ಏಪ್ರಿಲ್ 4; ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕೆಪಿಎಸ್‌ಸಿ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ರಾಜ್ಯಪಾಲ ವಜುಭಾಯಿ ವಾಲಾ ಶನಿವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಷಡಾಕ್ಷರಿ ಸ್ವಾಮಿ ಕೆಪಿಎಸ್‌ಸಿ ಅಧ್ಯಕ್ಷರ ಹುದ್ದೆಯಿಂದ ಶನಿವಾರ ನಿವೃತ್ತರಾದರು.

ಕೆಪಿಎಸ್‌ಸಿ ಮತ್ತೊಂದು ಅಕ್ರಮ ಬಯಲು; ಆಯ್ಕೆ ಪಟ್ಟಿ ರದ್ದು ಕೆಪಿಎಸ್‌ಸಿ ಮತ್ತೊಂದು ಅಕ್ರಮ ಬಯಲು; ಆಯ್ಕೆ ಪಟ್ಟಿ ರದ್ದು

ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡುವಂತೆ ಕರ್ನಾಟಕ ಸರ್ಕಾರ ಶಿಫಾರಸು ಮಾಡಿತ್ತು. ರಾಜ್ಯಪಾಲರು ಈ ಶಿಫಾರಸಿಗೆ ಅಂಕಿತ ಹಾಕಿದ್ದಾರೆ. ಶಿವಶಂಕರಪ್ಪ ಅವರ ಅವಧಿ ಇನ್ನೂ ಮೂರುವರೆ ವರ್ಷಗಳು ಇವೆ.

ಕೆಪಿಎಸ್‌ಸಿ ನೇಮಕಾತಿ; ಕೆಎಟಿ ಮಹತ್ವದ ಆದೇಶ ಕೆಪಿಎಸ್‌ಸಿ ನೇಮಕಾತಿ; ಕೆಎಟಿ ಮಹತ್ವದ ಆದೇಶ

Shivashankarappa S Sahukar

ಶಿವಶಂಕರಪ್ಪ ಎಸ್. ಸಾಹುಕಾರ್ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮದವರು. 2019ರ ಸೆಪ್ಟೆಂಬರ್ 3ರಂದು ಅವರು ಕರ್ನಾಟಕ ಲೋಕಸೇವಾ ಆಯೋಗ್ಯ ಸದಸ್ಯರಾಗಿ ನೇಮಕಗೊಂಡಿದ್ದರು.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 402 ಹುದ್ದೆ

Recommended Video

ಕೋವಿಡ್‌ ರೂಲ್ಸ್‌ ಇದೆ ಎಂದ್ರೂ ಕೇಳದ ಪ್ರಯಾಣಿಕರು...ಬಿಎಂಟಿಸಿಯಲ್ಲಿ ಜನಜಂಗುಳಿ | Oneindia Kannada

ಕರ್ನಾಟಕ ಸರ್ಕಾರ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರಾಗಿ ನೇಮಕ ಮಾಡಿದೆ. ಇದರಿಂದಾಗಿ ಒಂದು ಸದಸ್ಯ ಸ್ಥಾನ ಖಾಲಿ ಆಗಿದೆ.

English summary
Karnataka government appointed Shivashankarappa S.Sahukar appointed as president of the Karnataka Public Service Commission (KPSC). Raichur based Shivashankarappa S.Sahukar member of KPSC from 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X