ಕೆಪಿಎಸ್ಸಿ ಅಧ್ಯಕ್ಷರಾಗಿ ಶಿವಶಂಕರಪ್ಪ ಎಸ್. ಸಾಹುಕಾರ್ ನೇಮಕ
ಬೆಂಗಳೂರು, ಏಪ್ರಿಲ್ 4; ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕೆಪಿಎಸ್ಸಿ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ರಾಜ್ಯಪಾಲ ವಜುಭಾಯಿ ವಾಲಾ ಶನಿವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಷಡಾಕ್ಷರಿ ಸ್ವಾಮಿ ಕೆಪಿಎಸ್ಸಿ ಅಧ್ಯಕ್ಷರ ಹುದ್ದೆಯಿಂದ ಶನಿವಾರ ನಿವೃತ್ತರಾದರು.
ಕೆಪಿಎಸ್ಸಿ ಮತ್ತೊಂದು ಅಕ್ರಮ ಬಯಲು; ಆಯ್ಕೆ ಪಟ್ಟಿ ರದ್ದು
ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡುವಂತೆ ಕರ್ನಾಟಕ ಸರ್ಕಾರ ಶಿಫಾರಸು ಮಾಡಿತ್ತು. ರಾಜ್ಯಪಾಲರು ಈ ಶಿಫಾರಸಿಗೆ ಅಂಕಿತ ಹಾಕಿದ್ದಾರೆ. ಶಿವಶಂಕರಪ್ಪ ಅವರ ಅವಧಿ ಇನ್ನೂ ಮೂರುವರೆ ವರ್ಷಗಳು ಇವೆ.
ಕೆಪಿಎಸ್ಸಿ ನೇಮಕಾತಿ; ಕೆಎಟಿ ಮಹತ್ವದ ಆದೇಶ
ಶಿವಶಂಕರಪ್ಪ ಎಸ್. ಸಾಹುಕಾರ್ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮದವರು. 2019ರ ಸೆಪ್ಟೆಂಬರ್ 3ರಂದು ಅವರು ಕರ್ನಾಟಕ ಲೋಕಸೇವಾ ಆಯೋಗ್ಯ ಸದಸ್ಯರಾಗಿ ನೇಮಕಗೊಂಡಿದ್ದರು.
ಕರ್ನಾಟಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ; 402 ಹುದ್ದೆ
Recommended Video
ಕರ್ನಾಟಕ ಸರ್ಕಾರ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷರಾಗಿ ನೇಮಕ ಮಾಡಿದೆ. ಇದರಿಂದಾಗಿ ಒಂದು ಸದಸ್ಯ ಸ್ಥಾನ ಖಾಲಿ ಆಗಿದೆ.