ಯಾವುದೇ ಖಾತೆ ನಿರೀಕ್ಷಿಸಬೇಡಿ: ಡಿಕೆಶಿಗೆ ಸ್ವಾಮೀಜಿ ಸಲಹೆ
Recommended Video

ಬೆಂಗಳೂರು, ಜೂನ್ 15: ಇಂಥದ್ದೇ ಖಾತೆ ಬೇಕು ಎನ್ನುವ ಅಪೇಕ್ಷೆ ಪಡುವುದು ಬೇಡ ದೊರೆತ ಖಾತೆಯಲ್ಲಿ ನಿಷ್ಠೆಯಿಂದ ಮುಂದುವರೆಯಿರಿ ಎಂದು ಕಾಡು ಸಿದ್ದೇಶ್ವರ ಮಠದ ಶಿವಯೋಗಿ ಸ್ವಾಮೀಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ.
ಶಿವಕುಮಾರ್ ಅವರಿಗೆ ತಮ್ಮ ಪಾಲಿಗೆ ಬರುವ ಖಾತೆಯನ್ನು ಅವರು ಸ್ವೀಕರಿಸಲಿ, ಇಂಥದ್ದೇ ಖಾತೆ ಬೇಕು ಎಂದು ಕೇಳುವುದು ಬೇಡ, ಇರುವ ಖಾತೆಯಲ್ಲೇ ಮುಂದುವರೆಯಲಿ, ಯಾವ ಖಾತೆಯಾದರೂ ಕಾಯಕವೇ ಕೈಲಾಸ ಎಂದು ಕೆಲಸ ಮಾಡಲಿ, ಹಾಗೆ ಮಾಡಿದರೆ ಮುಂದೊಂದು ದಿನ ಅವರು ಉನ್ನತ ಸ್ಥಾನಕ್ಕೆ ಏರುತ್ತಾರೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕೆಲವು ಶಾಸಕರು ತಮಗೆ ಸಚಿವ ಸ್ಥಾನ ನೀಡಲಿಲ್ಲ ಎಂದು ಬೇಸರ ಮಾಡಿಕೊಂಡರೆ ಇನ್ನೂ ಸಚಿವ ಸ್ಥಾನ ದೊರೆತವರೂ ಕೂಡ ನೀಡಿರುವ ಖಾತೆ ಬೇಡ ಬೇರೆಯೇ ಖಾತೆ ಬೇಕು, ತಾವು ಕೇಳಿದ ಖಾತೆಯನ್ನು ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ವಿಚಾರವಾಗಿ ಸಿದ್ದೇಶ್ವರ ಸ್ವಾಮೀಜಿ ಸಲಹೆ ನೀಡಿದ್ದಾರೆ.

ಸಿದ್ದೇಶ್ವರ ಮಠವು ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿದೆ. ಇರುವ ಸ್ಥಾನದಲ್ಲಿಯೇ ಅವರು ಸಾಧನೆ ಮಾಡಬೇಕು, ಖಾತೆ ಯಾವುದಾದರೂ ಕಾಯಕ ಒಂದೇ, ಅವರು ಸಿದ್ದೇಶ್ವರ ಮಠದಲ್ಲಿ ಮಗನಾಗಿ ಬೆಳೆದಿದ್ದಾರೆ ಅವರಿಗೆ ದೇವರ ಆಶೀರ್ವಾದವಿದೆ ಎಲ್ಲದೂ ಒಳ್ಳೆಯದೇ ಆಗಲಿದೆ ಎಂದಿದ್ದಾರೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications