ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾವುದೇ ಖಾತೆ ನಿರೀಕ್ಷಿಸಬೇಡಿ: ಡಿಕೆಶಿಗೆ ಸ್ವಾಮೀಜಿ ಸಲಹೆ

By Nayana
|
Google Oneindia Kannada News

Recommended Video

ಕಾಡು ಸಿದ್ದೇಶ್ವರ ಮಠದ ಶಿವಯೋಗಿ ಸ್ವಾಮೀಜಿಗಳಿಂದ ಡಿ ಕೆ ಶಿಯ ಭವಿಷ್ಯ | Oneindia Kannada

ಬೆಂಗಳೂರು, ಜೂನ್ 15: ಇಂಥದ್ದೇ ಖಾತೆ ಬೇಕು ಎನ್ನುವ ಅಪೇಕ್ಷೆ ಪಡುವುದು ಬೇಡ ದೊರೆತ ಖಾತೆಯಲ್ಲಿ ನಿಷ್ಠೆಯಿಂದ ಮುಂದುವರೆಯಿರಿ ಎಂದು ಕಾಡು ಸಿದ್ದೇಶ್ವರ ಮಠದ ಶಿವಯೋಗಿ ಸ್ವಾಮೀಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ.

ಶಿವಕುಮಾರ್ ಅವರಿಗೆ ತಮ್ಮ ಪಾಲಿಗೆ ಬರುವ ಖಾತೆಯನ್ನು ಅವರು ಸ್ವೀಕರಿಸಲಿ, ಇಂಥದ್ದೇ ಖಾತೆ ಬೇಕು ಎಂದು ಕೇಳುವುದು ಬೇಡ, ಇರುವ ಖಾತೆಯಲ್ಲೇ ಮುಂದುವರೆಯಲಿ, ಯಾವ ಖಾತೆಯಾದರೂ ಕಾಯಕವೇ ಕೈಲಾಸ ಎಂದು ಕೆಲಸ ಮಾಡಲಿ, ಹಾಗೆ ಮಾಡಿದರೆ ಮುಂದೊಂದು ದಿನ ಅವರು ಉನ್ನತ ಸ್ಥಾನಕ್ಕೆ ಏರುತ್ತಾರೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ರೇವಣ್ಣ ವಿರುದ್ಧ ಡಿಕೆಶಿ ಗರಂ: ಸಿಎಂ ಮುಂದೆ ಆಕ್ರೋಶರೇವಣ್ಣ ವಿರುದ್ಧ ಡಿಕೆಶಿ ಗರಂ: ಸಿಎಂ ಮುಂದೆ ಆಕ್ರೋಶ

ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕೆಲವು ಶಾಸಕರು ತಮಗೆ ಸಚಿವ ಸ್ಥಾನ ನೀಡಲಿಲ್ಲ ಎಂದು ಬೇಸರ ಮಾಡಿಕೊಂಡರೆ ಇನ್ನೂ ಸಚಿವ ಸ್ಥಾನ ದೊರೆತವರೂ ಕೂಡ ನೀಡಿರುವ ಖಾತೆ ಬೇಡ ಬೇರೆಯೇ ಖಾತೆ ಬೇಕು, ತಾವು ಕೇಳಿದ ಖಾತೆಯನ್ನು ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ವಿಚಾರವಾಗಿ ಸಿದ್ದೇಶ್ವರ ಸ್ವಾಮೀಜಿ ಸಲಹೆ ನೀಡಿದ್ದಾರೆ.

Shivayogi seer advices DKS to dont expect more

ಸಿದ್ದೇಶ್ವರ ಮಠವು ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿದೆ. ಇರುವ ಸ್ಥಾನದಲ್ಲಿಯೇ ಅವರು ಸಾಧನೆ ಮಾಡಬೇಕು, ಖಾತೆ ಯಾವುದಾದರೂ ಕಾಯಕ ಒಂದೇ, ಅವರು ಸಿದ್ದೇಶ್ವರ ಮಠದಲ್ಲಿ ಮಗನಾಗಿ ಬೆಳೆದಿದ್ದಾರೆ ಅವರಿಗೆ ದೇವರ ಆಶೀರ್ವಾದವಿದೆ ಎಲ್ಲದೂ ಒಳ್ಳೆಯದೇ ಆಗಲಿದೆ ಎಂದಿದ್ದಾರೆ.

English summary
Shivayogi Swamiji of Kadusiddeshwar mutt has advised to minister D.K.Shivakumar shouldn't expect any particular portfolio and do his work with efficiency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X