ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆಗೆ ಟಿಕೆಟ್ ಇಲ್ಲ!

Recommended Video

      Lok Sabha Elections 2019 : ಶೋಭಾ ಕರಂದ್ಲಾಜೆಗೆ ಟಿಕೆಟ್ ಇಲ್ಲ! | Oneindia Kannada

      ಬೆಂಗಳೂರು, ಡಿಸೆಂಬರ್ 10 : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಈ ಬಾರಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂಬ ಒತ್ತಾಯ ಕೇಳಿಬಂದಿದೆ. ಹಾಗಾಗರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಸದ್ಯದ ಪ್ರಶ್ನೆ.

      ಶೋಭಾ ಕರಂದ್ಲಾಜೆ ಅವರು ರಾಷ್ಟ್ರ ರಾಜಕೀಯದಲ್ಲಿ ಮುಂದುವರೆಯಲಿದ್ದಾರಾ? ಅಥವ ರಾಜ್ಯ ರಾಜಕೀಯಕ್ಕೆ ವಾಪಸ್ ಬರಲಿದ್ದಾರಾ? ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಸಂದರ್ಭದಲ್ಲಿಯೇ ಸ್ಥಳೀಯ ನಾಯಕರು ಶೋಭಾ ಅವರಿಗೆ ಟಿಕೆಟ್ ಬೇಡ ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.

      ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಬಿಜೆಪಿಯ ಭದ್ರಕೋಟೆ. 2019ರ ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿಗಳು ಸ್ಪರ್ಧೆ ಮಾಡಬೇಕು ಎಂಬುದು ಕಾರ್ಯಕರ್ತರ ಆಗ್ರಹವಾಗಿದೆ. ಆದ್ದರಿಂದ, ಚುನಾವಣೆಯ ಸಮಯದಲ್ಲಿ ಕ್ಷೇತ್ರದ ಅಭ್ಯರ್ಥಿ ಬದಲಾಗುವ ಸಾಧ್ಯತೆ ಇದೆ.

      ಬಿಜೆಪಿ ಸೇರರುವ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಜೀವರಾಜ್ ಅವರ ಹೆಸರುಗಳು ಅಭ್ಯರ್ಥಿ ಸ್ಥಾನಕ್ಕೆ ಕೇಳಿಬರುತ್ತಿವೆ. ಯಾರು ಅಭ್ಯರ್ಥಿಯಾಗಲಿದ್ದಾರೆ? ಎಂದು ಕಾದು ನೋಡಬೇಕಿದೆ....

      2014ರಲ್ಲಿ ದಾಖಲೆಯ ಗೆಲುವು

      2014ರಲ್ಲಿ ದಾಖಲೆಯ ಗೆಲುವು

      ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರು 2014ರ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಿದ್ದಾರೆ. 581168 ಮತಗಳನ್ನು ಪಡೆದಿದ್ದ ಅವರು ಕಾಂಗ್ರೆಸ್‌ನ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಸೋಲಿಸಿದ್ದರು. ಆದರೆ, ಈಗ ಜಯಪ್ರಕಾಶ್ ಹೆಗ್ಡೆ ಬಿಜೆಪಿಯಲ್ಲಿದ್ದಾರೆ.

      ಸ್ಥಳೀಯ ಅಭ್ಯರ್ಥಿ ಬೇಕು

      ಸ್ಥಳೀಯ ಅಭ್ಯರ್ಥಿ ಬೇಕು

      ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾರ್ಯಕರ್ತರು ಸ್ಥಳೀಯ ಅಭ್ಯರ್ಥಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಶೋಭಾ ಕರಂದ್ಲಾಜೆ ಅವರು ಕ್ಷೇತ್ರಕ್ಕೆ ಸರಿಯಾಗಿ ಬರುವುದಿಲ್ಲ ಜನರ ಸಮಸ್ಯೆಗಳನ್ನು ಕೇಳಿಲ್ಲ. ಹೇಳಿಕೊಳ್ಳುವ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂಬುದು ಕಾರ್ಯಕರ್ತರ ಆರೋಪವಾಗಿದೆ.

      ರಾಜ್ಯ ರಾಜಕಾರಣಕ್ಕೆ?

      ರಾಜ್ಯ ರಾಜಕಾರಣಕ್ಕೆ?

      ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ? ಎಂಬ ಸುದ್ದಿಗಳು ಬಲವಾಗಿ ಹಬ್ಬಿವೆ. ಆದ್ದರಿಂದ, ಅವರು ಈ ಬಾರಿಯ ಲೋಕಸಭಾ ಚುನಾವಣೆಗೂ ಸ್ಪರ್ಧೆ ಮಾಡುವುದಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ. ಅದಕ್ಕೆ ಸರಿಯಾಗಿ ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ಕೊಡಿ ಎಂಬ ಕೂಗು ಎದ್ದಿದೆ. ಉಡುಪಿ ಚಿಕ್ಕಮಗಳೂರು ಬಿಜೆಪಿ ಭದ್ರಕೋಟೆ. ಈ ಬಾರಿ ಯಾರಿಗೆ ಟಿಕೆಟ್ ಸಿಗಲಿದೆ? ಎಂದು ಕಾದು ನೋಡಬೇಕು.

      ಯಾರಿಗೆ ಟಿಕೆಟ್?

      ಯಾರಿಗೆ ಟಿಕೆಟ್?

      ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಜೀವರಾಜ್ ಅವರ ಹೆಸರು ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕೇಳಿಬರುತ್ತಿದೆ. ಅದರಲ್ಲೂ ಜಯಪ್ರಕಾಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡಬೇಕು ಎಂಬ ಕಾರಣಕ್ಕಾಗಿಯೇ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಿಲ್ಲ ಎಂಬ ವಿಶ್ಲೇಷಣೆ ಇದೆ.

      2014ರ ಫಲಿತಾಂಶ

      2014ರ ಫಲಿತಾಂಶ

      2014ರ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದರು
      * ಶೋಭಾ ಕರಂದ್ಲಾಜೆ - 581168 ಮತ
      * ಜಯಪ್ರಕಾಶ್ ಹೆಗ್ಡೆ (ಕಾಂಗ್ರೆಸ್) - 399525 ಮತ
      * ವಿ.ಧನಂಜಯ್ ಕುಮಾರ್ (ಜೆಡಿಎಸ್) - 14895 ಮತಗಳು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+