ಸಿಎಂ ಕುರ್ಚಿ ಕದನ: ಕೇರಳದ ಚುನಾವಣೆಯ ಕಾವು ಕರ್ನಾಟಕದಲ್ಲಿ ಏನು ಕೆಲಸ ಮಾಡುತ್ತಿದೆ?: ಶೋಭಾ ಕರಂದ್ಲಾಜೆ
ಬೆಂಗಳೂರು: ಕೇರಳದ ಚುನಾವಣೆಯ ಕಾವು ಕರ್ನಾಟಕದಲ್ಲಿ ಏನು ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದ್ದಾರೆ. ಕರ್ನಾಟಕಕ್ಕೆ ಹೊರದೇಶಗಳಿಂದ ಅಕ್ರಮ ವಲಸೆ ಬರುತ್ತಿರುವವರ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಡ್ರಗ್ ಮಾಫಿಯ ನಿರತ ಅಕ್ರಮ ವಲಸಿಗರ ವಿರುದ್ಧ ಎಲ್ಲ ಇಲಾಖೆಗಳು ಸೇರಿ ಕ್ರಮ ಕೈಗೊಳ್ಳಲಿ ಎಂದು ವಿನಂತಿಸಿದರು. ರಾಜ್ಯ ಸರಕಾರವೂ ರೋಹಿಂಗ್ಯಾಗಳನ್ನು ಪತ್ತೆ ಹಚ್ಚಿ ಹೊರಹಾಕಲು ಸಹಕರಿಸಬೇಕಿದೆ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಯಾರ ಸರಕಾರ ನಡೆಯುತ್ತಿದೆ. ಯಾರಿಗಾಗಿ ಸರಕಾರ ನಡೆಯುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯದ ಮೂಗುದಾರ ಎಲ್ಲಿದೆ? ಕೆ.ಸಿ.ವೇಣುಗೋಪಾಲ್ ಅವರು ಕರ್ನಾಟಕದ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ಟ್ವೀಟ್ ಮಾಡಿ ಸರಕಾರ ಹೇಗೆ ನಡೆಸಬೇಕೆಂದು ಕಿವಿಮಾತು ಹೇಳಿದ್ದಾರೆ. ಅವರದೇ ರಾಜ್ಯದ ಪಿಣರಾಯಿ ವಿಜಯನ್ ಕರ್ನಾಟಕದಲ್ಲಿ ಏನು ಮಾಡಬೇಕು, ಏನು ಮಾಡಬಾರದೆಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಶಿವಕುಮಾರರಿಗೆ ಸರಕಾರ ನಡೆಸಲು ಸಾಂವಿಧಾನಿಕ ಹಕ್ಕು, ಶಕ್ತಿ ಇದೆಯೇ ಇಲ್ಲವೇ? ಎಂದು ಕೇಳಿದರು. ಕೋಗಿಲು ಅಕ್ರಮ ವಲಸಿಗರನ್ನು ನೋಟಿಸ್ ಕೊಟ್ಟು 167 ಮನೆಗಳನ್ನು ತೆರವುಗೊಳಿಸಿದ್ದು ಒಳ್ಳೆಯ ಕೆಲಸ. ತೆರವನ್ನು ಕೆ.ಸಿ.ವೇಣುಗೋಪಾಲ್ ಪ್ರಶ್ನಿಸಿದ್ದಾರೆ. ಪಿಣರಾಯಿ ವಿಜಯನ್ ಒತ್ತಡ ತರುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಈ ವಲಸಿಗರು ಯಾರು? ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಅಲ್ಲಿದ್ದವರೆಲ್ಲ ಪಶ್ಚಿಮ ಬಂಗಾಲದಿಂದ ಬಂದವರು. ಅಲ್ಲಿಯೂ ಸಮರ್ಪಕ ವಿಳಾಸ ಇಲ್ಲದವರು. ಹೆಬ್ಬಾಳದ ಅಮೀನ್ಕೆರೆಯಲ್ಲಿ ವಾಸ ಮಾಡುವವರು, ಅಕ್ರಮ ಚಟುವಟಿಕೆ ಮಾಡುವವರು ಯಾರೆಂದು ಪೊಲೀಸ್ ಕಮೀಷನರ್ಗೆ ಪತ್ರ ಬರೆದಿದ್ದೇನೆ. ಕ್ರಮ ಕೈಗೊಳ್ಳಲು ಹೇಳಿದ್ದೆ. ಅದೇರೀತಿಯ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದವರನ್ನು ಕೋಗಿಲುವಿನಲ್ಲಿ ತೆರವು ಮಾಡಿದ್ದಾರೆ ಎಂದು ವಿವರಿಸಿದರು.
ದೆಹಲಿ ಒತ್ತಡಕ್ಕೆ ಮಣಿದ ಸಿಎಂ, ಡಿಸಿಎಂ
ಬೆಂಗಳೂರಿನ ವಾಸಿಂ ಬಡಾವಣೆ, ಫಕೀರ್ ಬಡಾವಣೆಯಲ್ಲಿ ಯಾರಿದ್ದಾರೆ? ದೆಹಲಿ ಒತ್ತಡಕ್ಕೆ ಮಣಿದು ಸಿಎಂ, ಡಿಸಿಎಂ ಸಭೆ ನಡೆಸುತ್ತಾರೆ. ಬಹಳ ದಿನದಿಂದ ಅವರು ಒಟ್ಟಾಗಿಲ್ಲ; ಕುರ್ಚಿ ಉಳಿಸಿಕೊಳ್ಳಲು ಒಬ್ಬರು, ಕುರ್ಚಿಯನ್ನು ಪಡೆಯಲು ಒಬ್ಬರು ಸ್ಪರ್ಧೆಯ ಮೇಲೆ ದೆಹಲಿ ಹೈಕಮಾಂಡನ್ನು ಸಂತುಷ್ಟಗೊಳಿಸಲು ಒಟ್ಟಿಗೆ ಸಭೆ ನಡೆಸಿ ತೆರವುಗೊಳಿಸಿ ಅಕ್ರಮ ವಲಸಿಗರಿಗೆ ಬೈಯಪ್ಪನಹಳ್ಳಿಯಲ್ಲಿ ಮನೆ ಕೊಡಲು ನಿರ್ಧರಿಸಿದ್ದಾರೆ. ಯಾರವರು? ಯಾವಾಗ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು ಎಂದು ಪ್ರಶ್ನೆಗಳನ್ನು ಮುಂದಿಟ್ಟರು.
ಹಲವೆಡೆ, ಸರಕಾರಿ ಭೂಮಿಗಳಲ್ಲಿ ಇರುವ ಅಕ್ರಮ ವಲಸಿಗರ ಪಟ್ಟಿ ಯಾವಾಗ ತಯಾರು ಮಾಡುತ್ತೀರಿ ಎಂದು ಪ್ರಶ್ನಿಸಿದರು. ಅಮೀನ್ಕೆರೆ ಒಂದು ಸ್ಯಾಂಪಲ್ ಅಷ್ಟೇ. ಅಕ್ರಮ ವಲಸಿಗರಿಗೆ, ರೋಹಿಂಗ್ಯಾಗಳಿಗೆ ಸರಕಾರಿ ಮನೆ ಕೊಟ್ಟರೆ ಬೆಂಗಳೂರು ಏನಾದೀತು ಎಂದು ಆತಂಕ ವ್ಯಕ್ತಪಡಿಸಿದರು. ಕರ್ನಾಟಕ ಸರಕಾರ, ಪೊಲೀಸರು ಅಕ್ರಮ ವಲಸಿಗರ ಗುರುತಿಸುವಿಕೆ ವಿಚಾರದಲ್ಲಿ ಸಹಕಾರ ಕೊಡದೇ ಇದ್ದರೆ ಇವರನ್ನು ಪತ್ತೆ ಮಾಡುವುದು ಹೇಗೆ ಎಂದು ಕೇಳಿದರು.
ನೀವೇ ಅವರಿಗೆ ಮನೆ ಕೊಟ್ಟು, ಸರ್ಟಿಫಿಕೇಟ್ ಕೊಟ್ಟು ಅವರನ್ನು ಖಾಯಂ ಮಾಡುತ್ತಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇವರ ಮತದಾರರ ಚೀಟಿ, ಆಧಾರ್ ಕಾರ್ಡನ್ನು ತಕ್ಷಣ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಕರ್ನಾಟಕದ ಪೊಲೀಸರು ಆಧಾರ್ ಕಾರ್ಡ್ ವಶಕ್ಕೆ ಪಡೆಯಬೇಕು. ಅವರು ಪಶ್ಚಿಮ ಬಂಗಾಲದವರೇ? ಅಥವಾ ಬೇರೆ ಕಡೆಯಿಂದ ಬಂದಿದ್ದಾರಾ ಎಂದು ಪತ್ತೆ ಮಾಡಬೇಕಿದೆ ಎಂದು ಒತ್ತಾಯಿಸಿದರು. ದೇಶದ ಮತ್ತು ಕರ್ನಾಟಕದ ಉಳಿವಿಗಾಗಿ ಪೊಲೀಸರು ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications