ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹರಿದಾಡುತ್ತಿವೆ ಸಿಟಿ ರವಿ, ಮಧ್ವರಾಜ್ ಹೆಸರು: ಶೋಭಾ ಕರಂದ್ಲಾಜೆಗೆ ಸಂಕಷ್ಟ?
ಚಿಕ್ಕಮಗಳೂರು, ಡಿಸೆಂಬರ್ 27: 2024ರ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಈಗಾಗಲೇ ಆರಂಭಗೊಂಡಿದೆ. ಟಿಕೆಟ್ಗಾಗಿ ಲಾಭಿ, ಪಕ್ಷಾಂತರ, ಪ್ರಚಾರ, ಅಭ್ಯರ್ಥಿ ಆಯ್ಕೆ ಸದ್ದಿಲ್ಲದೇ ನಡೆಯುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಾಜಕೀಯ ಕಣ ರಂಗೇರಲಿದೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎದುರು ಊಹಿಸಲಾಗದ ಸೋಲು ಕಂಡಿರುವ ಬಿಜೆಪಿ ಲೋಕಸಭೆ ಚುನಾವಣೆಗೆ ಎದುರು ನೋಡುತ್ತಿದ್ದು, ಈ ಬಾರಿ ಎಲ್ಲಾ ಕ್ಷೇತ್ರದಿಂದ ಬಲಿಷ್ಠ ಅಭ್ಯರ್ಥಿಯನ್ನು ಕಣಕ್ಕಿಲಿಸಲು ಸಜ್ಜಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೆಲುವಿನ ಹೆಸರಿನಲ್ಲಿ ರಾಜ್ಯ ಬಿಜೆಪಿ ಲೋಕಸಭಾ ಚುನಾವಣೆ ಕಣಕ್ಕಿಳಿಯಲು ಮುಂದಾಗಿದ್ದು, ಈಗಾಗಲೇ ಗೆಲುವಿಗೆ ರಣತಂತ್ರ ರೂಪಿಸಲು ಆರಂಭಿಸಿದೆ.
ರಾಜ್ಯದ ಎಲ್ಲಾ ಕ್ಷೇತ್ರಗಳಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ಗಾಗಿ ಹಲವು ಆಕಾಂಕ್ಷಿಗಳ ಹೆಸರು ಕೇಳಿಬರುತ್ತಿದೆ. ಬಿಜೆಪಿ ಭದ್ರಕೋಟೆಯಾಗಿರುವ ಉಡುಪಿ-ಚಿಕ್ಕಮಗಳೂರಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಸಲು ಹೈಕಮಾಂಡ್ ಚಿಂತನೆ ನಡೆಸುತ್ತಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಸಿ.ಟಿ.ರವಿ, ಡಿ.ಎನ್.ಜೀವರಾಜ್ ಹೆಸರು ಕೇಳಿ ಬರುತ್ತಿದ್ದು, ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಕೂಡ ಸ್ಪರ್ಧಿಸಲು ಉತ್ಸುಹಕರಾಗಿದ್ದಾರೆ.

ಸಿ.ಟಿ ರವಿಯತ್ತ ಬಿಜೆಪಿ ಕಾರ್ಯಕರ್ತರ ಒಲವು
ಚಿಕ್ಕಮಗಳೂರು ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಗೆಲುವು ಸಾಧಿಸಿ ಸಚಿವರಾಗಿ, ಬಳಿಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಸಿ.ಟಿ ರವಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಅವಧಿ ಕೂಡ ಮುಗಿದಿದ್ದು, ಸದ್ಯ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಿ.ಟಿ ರವಿ ಅಭ್ಯರ್ಥಿಯಾಗಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದರು. ಕಾರ್ಯಕರ್ತರ ಅಪೇಕ್ಷಗೆ ಪ್ರತಿಕ್ರಯಿಸದ ಸಿ.ಟಿ ರವಿ ಮೌನವಾಗಿಗೆಯೇ ಒಪ್ಪಿಗೆ ನೀಡಿದ್ದರು.
ಇನ್ನು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಳೆದ ಎರಡು ತಿಂಗಳಿಂದ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲೂ ಸಹ ಭಾಗಿಯಾಗುತ್ತಿರುವ ಪ್ರಮೋದ್ ಮಧ್ವರಾಜ್ ಬಿಜೆಪಿ ಕಾರ್ಯಕರ್ತರ ಜೊತೆ ಬೆರೆಯುತ್ತಿದ್ದಾರೆ. ಈ ಮೂಲಕ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಆಕಾಂಕ್ಷಿ ಎನ್ನುವುದನ್ನು ಬಿಂಬಿಸುತ್ತಿದ್ದಾರೆ. ಇವರ ಜೊತೆಗೆ ಡಿ.ಎನ್.ಜೀವರಾಜ್ ಕೂಡ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಎಲ್ಲರಿಗಿಂತ ಮುಖ್ಯವಾಗಿ ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಬಾರಿಯೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುವ ಬಿಜೆಪಿ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ಭಾಗಿಯಾಗುತ್ತಿರುವ ಶೋಭಾ ಕರಂದ್ಲಾಜೆ ಈ ಬಾರಿಯೂ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.

ದತ್ತ ಜಯಂತಿ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಚಿಕ್ಕಮಗಳೂರಿನಲ್ಲಿ ಮೊಕ್ಕಾಂ ಹೂಡಿರುವ ಶೋಭಾ ಕರಂದ್ಲಾಜೆ ಇತ್ತೀಚಿಗೆ ನಡೆದ ಶೋಭಾ ಯಾತ್ರೆಯ ವೇಳೆ ಉಡುಪಿ-ಚಿಕ್ಕಮಗಳೂರಿನಿಂದ ಮತ್ತೆ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ದತ್ತ ಜಯಂತಿಯ ಶೋಭಾ ಯಾತ್ರೆಯಲ್ಲಿ ಮಾತನಾಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ''ಕ್ಷೇತ್ರದ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಹಣ ತಂದಿದ್ದೇನೆ. ನನ್ನ ಪ್ರಯತ್ನದ ಫಲವಾಗಿ ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎರಡು ಕೇಂದ್ರೀಯ ವಿದ್ಯಾಲಯ ಶಾಲೆಗಳನ್ನು ಸ್ಥಾಪಿಸಲಾಗಿದೆ. ವೈದ್ಯಕೀಯ ಕಾಲೇಜು ಮಂಜೂರಾಗಿದ್ದು, ಕಾಲೇಜುಗಳಿಗೆ ಮೂಲಸೌಕರ್ಯ ಕಲ್ಪಿಸಲು ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಎಲ್ಲಾ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಜಿಲ್ಲೆಯಲ್ಲಿ ರಸ್ತೆ, ರೈಲ್ವೆ, ಕುಡಿಯುವ ನೀರಿನ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಯೋಜನೆಗಳನ್ನು ಜಾರಿಗೊಳಿಸಲಾಗಿದೆ" ಎನ್ನುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗುತ್ತಿರುವ ಶೋಭಾ ಕರಂದ್ಲಾಜೆ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತೊಂದು ಕ್ಷೇತ್ರದಿಂದ ಸಹ ಅವಕಾಶವಿದೆ. ಹಾಲಿ ಸಂಸದ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸುತ್ತಿದೆ ಎನ್ನುವ ಮಾತುಗಳು ರಾಜಕೀಯ ಒಲಯದಲ್ಲಿ ಕೇಳಿಬರುತ್ತಿವೆ.

ಶೋಭಾ ಕರಂದ್ಲಾಜೆ ಅವರನ್ನ ಮತ್ತೆ ಒಪ್ಪಿಕೊಳ್ಳುತ್ತಾರಾ ಉಡುಪಿ-ಚಿಕ್ಕಮಗಳೂರು ಜನ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳಾಗಿರುವ ಸಿ.ಟಿ ರವಿ ಹಾಗೂ ಪ್ರಮೋದ್ ಮಧ್ವರಾಜ್ ಅವರನ್ನು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಪ್ರಮುಖವಾಗಿ ಪರಿಗಣಿಸಬೇಕು ಎನ್ನುವ ಆಗ್ರಹಗಳು ಮತದಾರರ ಒಲಯದಲ್ಲಿ ಕೇಳಿ ಬರುತ್ತಿದೆ. ಯಾಕೆಂದರೆ ಸಿ.ಟಿ ರವಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಾಬಲ್ಯತೆ ಹೊಂದಿದ್ದರೆ, ಪ್ರಮೋದ್ ಮಧ್ವರಾಜ್ ಉಡುಪಿ ಜಿಲ್ಲೆಯಲ್ಲಿ ಹಿಡಿತ ಸಾಧಿಸಿದ್ದಾರೆ. ಆದರೆ ಶೋಭಾ ಕರಂದ್ಲಾಜೆ ಬಗ್ಗೆ ಮತದಾರರಲ್ಲಿ ಅಸಮಾಧಾನವಿದೆ.
ಕೊರೊನಾದಂತಹ ಸಂಕಷ್ಟದಲ್ಲಿ ಸಮಯದಲ್ಲಿ ಕ್ಷೇತ್ರದ ಜನರನ್ನು ಮರೆತ ಶೋಭಾ ಕರಂದ್ಲಾಜೆ ಬೆಂಗಳೂರಿನಲ್ಲಿ ಫುಟ್ ಕಿಟ್ ವಿತರಣೆ ಮಾಡಿದ್ದರು, ಇಷ್ಟೇ ಅಲ್ಲದೇ ಚುನಾವಣೆ ಸಂದರ್ಭ ಹೊರತು ಪಡಿಸಿ ಬೇರೆ ಸಮಯದಲ್ಲಿ ಕ್ಷೇತ್ರಗಳಿಗೆ ಭೇಟಿ ನೀಡುವುದಿಲ್ಲ ಎನ್ನುವ ಅಸಮಾಧಾನ ಕ್ಷೇತ್ರದ ಜನರಲ್ಲಿದೆ.
ಇನ್ನು ಈಗಾಗಲೇ ಕಾಂಗ್ರೆಸ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಜಿಲ್ಲಾ ಉಸ್ತುವಾರಿಯನ್ನು ಒಪ್ಪಿಕೊಳ್ಳುತ್ತಿರುವ ಉಡುಪಿಯ ಮತದಾರರು ಕಾಂಗ್ರೆಸ್ ಬಗ್ಗೆ ಒಲವು ತೋರುವ ಸಾಧ್ಯತೆ ಇದೆ. ಹೀಗಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಜನ ನಾಯಕ ಎನಿಸಿಕೊಂಡಿರುವ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೇ ಮಾತ್ರ ಗೆಲುವಿನತ್ತ ಸಾಗಬಹುದಾಗಿದೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications