ಎಸ್ಸಿ, ಎಸ್ಟಿ ಹಾಸ್ಟೆಲ್ಗಳಲ್ಲಿ ಸಿಬ್ಬಂದಿ ಕೊರತೆ: ವರದಿ ಕೊಡಿ
ಬೆಂಗಳೂರು, ಜನವರಿ 17: ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗಾಗಿ ನಡೆಸುತ್ತಿರುವ ಸರ್ಕಾರಿ ವಸತಿ ನಿಲಯಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳ ಭರ್ತಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಹಾಗಾಗಿ ಇದೀಗ ಸರ್ಕಾರ ನೆಪ ಹೇಳದೆ ಖಾಲಿ ಹುದ್ದೆಗಳ ಭರ್ತಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ವಿವರಣೆ ನೀಡಬೇಕಾಗಿದೆ. ಎಸ್ಸಿ, ಎಸ್ಟಿ ಹಾಸ್ಟೆಲ್ಗಳಲ್ಲಿ ಸಿಬ್ಬಂದಿ ಕೊರತೆಯ ಕುರಿತಂತೆ ಮಾಧ್ಯಮಗಳ ವರದಿಯನ್ನು ಆಧರಿಸಿ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಎರಡು ವಾರ ಮುಂದೂಡಿದೆ.

ಹಾಸ್ಟೆಲ್ಗಳಲ್ಲಿನ ಸಿಬ್ಬಂದಿ ಕೊರತೆಯಿಂದ ಅಲ್ಲಿ ಅಧ್ಯಯನ ನಡೆಸುವ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ತೀವ್ರ ತೊಂದರೆಯಾಗಲಿದೆ. ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವ ವಿಚಾರದಲ್ಲಿ ಸಿಬ್ಬಂದಿ ಕೊರತೆ ಕಳವಳಕಾರಿಯಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.
ವಿಚಾರಣೆ ವೇಳೆ ಪ್ರಕರಣದಲ್ಲಿ ಅಮಿಕಸ್ ಕ್ಯೂರಿ ನಿತಿನ್ ರಮೇಶ್, ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ ಎಂದು ವಿವರಿಸಿದರು.
ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಪ್ರಕರಣದ ಅಮಿಕಾಸ್ ಕ್ಯೂರಿ ಅವರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾರ್ಗಸೂಚಿಗಳ ಪ್ರಸ್ತಾಪ ಮಾಡಿದ್ದಾರೆ. ಆ ಬಗ್ಗೆ ಸರ್ಕಾರ ಪ್ರತಿಕ್ರಿಯೆ ನೀಡಬೇಕಾಗಿದೆ. ಆದ್ದರಿಂದ ಸಮಗ್ರವಾದ ವಿವರಣೆಯುಳ್ಳ ಆಕ್ಷೇಪಣೆ ಸಲ್ಲಿಸಬೇಕು ಎಂದು ಸರ್ಕಾರದ ವಕೀಲರಿಗೆ ತಿಳಿಸಿತು.
ಅಲ್ಲದೆ, ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಸಮರೋಪಾದಿಯಲ್ಲಿ ಪ್ರಕ್ರಿಯೆ ಪಾರಾರಂಭಿಸಿ ಆರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಕಳೆದ ವರ್ಷ ಆದೇಶಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಸೂಚನೆ ನೀಡಿತು.
ಪ್ರಕರಣದ ಹಿನ್ನೆಲೆ: 2023ರ ಡಿಸೆಂಬರ್ 7ರಂದು ಮರಾಠಿ ಪತ್ರಿಕೆ 'ತರುಣ್ ಭಾರತ್' ಪತ್ರಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ನಡೆಸುತ್ತಿರುವ ಪರಿಶಿಷ್ಟ ಜಾತಿಯ ಬಾಲಕಿಯರ ಮತ್ತು ಬಾಲಕರ ಹಾಸ್ಟೆಲ್ನಲ್ಲಿ ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿ ಇಲ್ಲ.
ಸಿಬ್ಬಂದಿಯ ನೇಮಕಾತಿಗೆ ನಿರ್ದಿಷ್ಟ ಮಾರ್ಗಸೂಚಿ ಇದ್ದರೂ ನೇಮಕಾತಿ ಮಾಡಿಲ್ಲ. ಕೆಲವೊಂದು ಜಿಲ್ಲೆಗಳಲ್ಲಿ 3-4 ಹಾಸ್ಟೆಲ್ಗಳಲ್ಲಿ ಕೇವಲ ಒಬ್ಬ ವಾರ್ಡನ್ ಇದ್ದಾರೆ. ರಾಜ್ಯದಲ್ಲಿ 1,297 ಪ್ರಿ ಮೆಟ್ರಿಕ್ ಹಾಸ್ಟೆಲ್ಗಳು ಇವೆ. 1,165 ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ಗಳಿವೆ. ಆದರೆ, ವಾರ್ಡನ್ ಮತ್ತು ಅಧೀಕ್ಷಕರು 1,200ಕ್ಕಿಂತ ಕಡಿಮೆಯಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿದೆ ಎಂದು ತಿಳಿಸಿತ್ತು.
ಅಲ್ಲದೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ 400 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. 200 ಖಾಯಂ ಹುದ್ದೆಗಳ ಅಧೀಕ್ಷಕರ ಹುದ್ದೆಗಳನ್ನು ಹಂತವಾರು ನೇಮಿಸಲಾಗುವುದು ಎಂಬುದಾಗಿ ಇಲಾಖೆ ಕಾರ್ಯದರ್ಶಿಯೊಬ್ಬರು ಹೇಳಿದ್ದಾರೆ. ಆದರೆ, ಕಾಲಕಾಲಕ್ಕೆ , ಖಾಯಂ ಸಿಬ್ಬಂದಿ ನೇಮಕಾತಿಗೆ ಯಾವುದೇ ಪ್ರಯತ್ನ ನಡೆಸಿಲ್ಲ ಎಂಬುದು ಈ ವರದಿಯಿಂದ ತಿಳಿಯಲಿದೆ ಎಂದು ತಿಳಿಸಿತ್ತು. ಈ ವರದಿ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ.
-
Horoscope March 6: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಒಳಿತು, ಪ್ರೇಮಿಗಳಿಗೆ ಕಾದಿವೆ ಮಧುರ ಕ್ಷಣ, ದಿನ ಭವಿಷ್ಯ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ












Click it and Unblock the Notifications