Siddaganga Mutt: ಬಸವ ಜಯಂತಿಯಂದು ನೂತನ ಉತ್ತರಾಧಿಕಾರಿಗಳಿಗೆ ಪಟ್ಟಾಭಿಷೇಕ
ತುಮಕೂರು, ಏಪ್ರಿಲ್ 23: ಕರ್ನಾಟಕದ ಪ್ರಮುಖ ಮಠಗಳಲ್ಲಿ ಒಂದಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿಗಳ ನೇಮಕವಾಗಿದ್ದು, ನೂತನ ಶ್ರೀಗಳಿಗೆ ಭಾನುವಾರ ಬಸವ ಜಯಂತಿಯಂದೇ ಪಟ್ಟಾಭಿಷೇಕವನ್ನು ಮಾಡಲಾಗಿದೆ.
ಸಿದ್ದಗಂಗಾ ಮಠ ಸೇರಿದಂತೆ ಮೂರು ಮಠಗಳಿಗೆ ಉತ್ತರಾಧಿಕಾರಿಗಳನ್ನು ಅವರಿಗೂ ಪಟ್ಟಾಧಿಕಾರ ಮಾಡಲಾಗಿದೆ. ಸಿದ್ಧಗಂಗಾಮಠದ ಶ್ರೀಗಳಾಗಿ ಶ್ರೀ ಮನೋಜ್ ಕುಮಾರ್ ಅವರು, ಶ್ರೀ ಕಂಚುಗಲ್ ಬಂಡೇಮಠದ ಶ್ರೀಗಳಾಗಿ ಶ್ರೀ ಹರ್ಷ.ಕೆ.ಎಂ ಅವರು, ದೇವನಹಳ್ಳಿ ಬಸವಕಲ್ಯಾಣ ಮಠದ ಶ್ರೀಗಳಾಗಿ ಶ್ರೀ ಗೌರೀಶ್ ಕುಮಾರ್ ಅವರನ್ನು ಉತ್ತರಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ನಡೆದಾಡುವ ದೇವರ ಪುಣ್ಯಕ್ಷೇತ್ರ ಶ್ರೀ ಸಿದ್ಧಗಂಗಾ ಮಠದ ಪರಂಪರೆಯಂತೆ ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿ ನೇಮಕವು ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗೇಶ್ವರ ಶ್ರೀಗಳ ದಿವ್ಯ ನೇತೃತ್ವದಲ್ಲಿ ಶ್ರೀ ಬಸವಜಯಂತಿ ಹಾಗೂ ಅಕ್ಷಯ ತೃತೀಯದ ಪವಿತ್ರ ದಿನದಂದು ಯಶಸ್ವಿಯಾಗಿ ನೆರವೇರಿದೆ.
ಬೆಳಗ್ಗೆ 5 ಗಂಟೆಯಿಂದ ಸಿದ್ದಗಂಗಾ ಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿ 6:30ಕ್ಕೆ ದೀಕ್ಷಾ ಸಂಸ್ಕಾರ ನಡೆದವು. ಬಳಿಕ ಬೆಳಿಗ್ಗೆ 7:30ಕ್ಕೆ ಪಟ್ಟಾಭಿಷೇಕ ಸರಳವಾಗಿ ನಡೆಯಿತು. ಈ ವೇಳೆ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಹಾಗೂ ಬೇಲಿ ಮಠದ ಶಿವಾನುಭವ ಚರಮೂರ್ತಿ ಶಿವಮೂರ್ತಿ ಮಹಾಸ್ವಾಮಿಗಳು ಸೇರಿ ಅನೇಕ ಮಠಾಧೀಶರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು.
ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಹಿತೈಷಿಗಳು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇನ್ನು ಸರಳವಾಗಿ ಈ ಸಮಾರಂಭ ಆಯೋಜನೆ ಮಾಡಲಾಗುತ್ತಿದ್ದು, ಮಠದ ಭಕ್ತಾದಿಗಳು ಸಹಕಾರ ನೀಡಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿಯಿಂದ ಮನವಿ ಮಾಡಿತ್ತು.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಈಗ ಸುಮಾರು 10 ಸಾವಿರ ವಿದ್ಯಾರ್ಥಿಗಳು ಮಠದಲ್ಲಿ ಅಭ್ಯಾಸ ಮಾಡತ್ತಿದ್ದಾರೆ. ಸ್ವಾತಂತ್ರ್ಯದ ಪೂರ್ವದಿಂದಲೂ ಊಟ, ವಸತಿ ಹಾಗೂ ಶಿಕ್ಷಣ ಸೇರಿ ತ್ರಿವಿಧ ದಾಸೋಹ ನೆರವೇರಿಸುತ್ತಾ ಬಂದಿದ್ದು, ದೇಶದಲ್ಲಿಯೇ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಶ್ರೀ ಶಿವ ಸಿದ್ದೇಶ್ವರ ಸ್ವಾಮೀಜಿ( ಪೂರ್ವಾಶ್ರಮದ ಹೆಸರು ಮನೋಜ್ ಕುಮಾರ್), ಬಂಡೇ ಮಠದ ಉತ್ತರಾಧಿಕಾರಿಯಾಗಿ ಮಹಾಲಿಂಗ ಸ್ವಾಮೀಜಿ ( ಪೂರ್ವಾಶ್ರಮದ ಹೆಸರು ಹರ್ಷ) ದೇವನಹಳ್ಳಿಯ ಬಸವ ಕಲ್ಯಾಣ ಮಠದ ಉತ್ತರಾಧಿಕಾರಿಯಾಗಿ ಸದಾಶಿವ ಸ್ವಾಮೀಜಿ ( ಪೂರ್ವಾಶ್ರಮದ ಹೆಸರು ಗೌರಿಶ್ ಕುಮಾರ್). ನೇಮಕಗೊಂಡಿದ್ದಾರೆ.
ಶ್ರೀ ಶಿವ ಸಿದ್ದೇಶ್ವರ ಸ್ವಾಮೀಜಿ ಅವರ ಪೂರ್ವಶ್ರಮದ ಹೆಸರು ಮನೋಜ್ ಕುಮಾರ್. ಅವರು ದಿನಾಂಕ 02.06.1987ರಲ್ಲಿ ಜನಿಸಿದ್ದಾರೆ. ಅವರ ತಂದೆ ಷಡಾಕ್ಷರಯ್ಯ ತಾಯಿ ವಿರೂಪಾಕ್ಷಮ್ಮ. ಇವರು ಮೂಲತಃ ಬೆಂಗಳೂರು ಗ್ರಾಮಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿಯವರು. ಶಿವ ಸಿದ್ದೇಶ್ವರ ಸ್ವಾಮೀಜಿಯವರು ಬಿಎಸ್ಸಿ, ಬಿಎಡ್ ಎಂಎಸ್ಸಿ, ಎಂಎ ವಿದ್ವತ್ ಪದವಿ ಪಡೆದಿದ್ದಾರೆ. ಇವರು ಮೊದಲು ಸಿದ್ದಗಂಗಾ ಪಾಲಿಟಿಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications