ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗದಿದ್ದಕ್ಕೆ ತೀವ್ರ ಆಕ್ರೋಶ
ಬೆಂಗಳೂರು, ಜನವರಿ 26: ನಿನ್ನೆಯಷ್ಟೆ ಭಾರತದ ಮೂರು ಸಾಧಕರಿಗೆ ಕೇಂದ್ರ ಸರ್ಕಾರವು ಭಾರತ ರತ್ನ ಗೌರವವನ್ನು ಘೋಷಿಸಿದೆ. ಆದರೆ ಈ ಪಟ್ಟಿಯಲ್ಲಿ 'ನಡೆದಾಡುವ ದೇವರು' ಸಿದ್ದಗಂಗಾ ಶ್ರೀಗಳ ಹೆಸರು ಇಲ್ಲದಿರುವುದು ರಾಜ್ಯದ ಜನರಲ್ಲಿ ಆಕ್ರೋಶ ಮೂಡಿಸಿದೆ.
ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಸಂಗೀತ ಮಾಂತ್ರಿಕ ಭೂಪೇನ್ ಹಜಾರಿಕಾ, ಜೆಪಿ ಅವರ ಸಂಗಾತಿ ಆಗಿದ್ದ, ಗ್ರಾಮ ಸ್ವರಾಜ್ಯಕ್ಕೆ ತಮ್ಮನ್ನು ಅರ್ಪಿಸಿದ್ದ ನಾನಾಜಿ ದೇಶ್ಮುಖ್ ಅವರಿಗೆ ದೇಶದ ಅತ್ಯುತ್ತಮ ನಾಗರೀಕ ಗೌರವವಾದ ಭಾರತ ರತ್ನ ಗೌರವ ನೀಡಲಾಗಿದೆ.
ಸೋಮವಾರವಷ್ಟೆ ಇಹಲೋಕ ತ್ಯಜಿಸಿದ ಸೇವಾರತ್ನ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡಬೇಕೆಂದು ಬಹು ವರ್ಷಗಳ ಒತ್ತಾಯವಾಗಿದ್ದು, ಈ ಬಾರಿಯೂ ಅವರಿಗೆ ಭಾರತ ರತ್ನ ನೀಡದಿರುವ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶ್ರೀಗಳನ್ನು ಭಾರತ ರತ್ನಕ್ಕೆ ಪರಿಗಣಿಸದಿರುವುದನ್ನು ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಮುಖ್ಯಮಂತ್ರಿ ಕಚೇರಿ ಸಹ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದಿರುವ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದೆ.
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಸೇರಿದಂತೆ ಇನ್ನೂ ಹಲವು ಅರ್ಹ ಸಾಧಕರಿಗೆ ಪದ್ಮ ಪ್ರಶಸ್ತಿ ನಿರೀಕ್ಷಿಸಿದ್ದೆವು ಆದರೆ ದೊರಕದಿದ್ದಕ್ಕೆ ಬೇಸವಾರಿಗೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಜೊತೆಗೆ ಈಗ ಪ್ರಶಸ್ತಿ ಪಡೆದಿರುವ ಎಲ್ಲರಿಗೂ ಅವರು ಅಭಿನಂಧಿಸಿದ್ದಾರೆ.
ಕೆಲವು ಸಾಧಕರಿಗೆ ಮರಣೋತ್ತರವಾಗಿಯಾದರೂ ಈ ಪ್ರಶಸ್ತಿ ಘೋಷಣೆಯಾಗಿರುವುದು ಹರ್ಷ ತಂದಿದೆ.
— CM of Karnataka (@CMofKarnataka) January 25, 2019
ಆದರೆ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಹಾಗೂ ಇನ್ನೂ ಹಲವು ಅರ್ಹ ಸಾಧಕರಿಗೆ ಪದ್ಮ ಪ್ರಶಸ್ತಿ ನಿರೀಕ್ಷಿಸಿದ್ದೆವು. ಇದು ಕೈಗೂಡದಿರುವುದು ನಿರಾಸೆ ತಂದಿದೆ.#ShivakumaraSwamiji
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಕಳೆದ ಕೆಲ ತಿಂಗಳಿನಿಂದಲೂ ರಾಜ್ಯದಲ್ಲಿ ಕೂಗು ಎದ್ದಿತ್ತು. ಶ್ರೀಗಳು ಅದಕ್ಕೆ ಅತ್ಯಂತ ಅರ್ಹರಾಗಿದ್ದರು ಕೂಡಾ. ಸಿಎಂ ಕುಮಾರಸ್ವಾಮಿ, ವಿರೋಧ ಪಕ್ಷ ನಾಯಕ ಯಡಿಯೂರಪ್ಪ ಸೇರಿ ಪಕ್ಷಭೇದವಿಲ್ಲದೆ ಎಲ್ಲ ರಾಜಕೀಯ ಮುಖಂಡರು ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದ್ದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications