'ಭಾರತ ರತ್ನ'ಕ್ಕಾಗಿ ಸಿದ್ದಗಂಗಾ ಶ್ರೀ ತಪ್ಪು ಹೇಳಿಕೆ: ಮಾತೆ ಮಹಾದೇವಿ
ಸಿದ್ದಗಂಗಾ ಶ್ರೀಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾತೆ ಮಹದೇವೆ. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಶ್ರೀಗಳಿಂದ ತಪ್ಪು ಹೇಳಿಸಿದ್ದಾರೆಂದು ಹೇಳಿಕೆ.
ಬಾಗಲಕೋಟೆ, ಸೆಪ್ಟೆಂಬರ್ 13: ಭಾರತದ ಅತ್ಯಂತ ಪ್ರತಿಷ್ಠಿತ ನಾಗರಿಕ ಗೌರವವಾದ 'ಭಾರತ ರತ್ನ'ವನ್ನು ಕೊಡಿಸುವ ವಾಗ್ದಾನವನ್ನು ಕೆಲ ರಾಜಕಾರಣಿಗಳು ನೀಡಿರುವುದರಿಂದ ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಸಿದ್ದಗಂಗಾ ಶ್ರೀಗಳಿಂದ ಸುಳ್ಳು ಹೇಳಿಸಲಾಗುತ್ತಿದೆ ಎಂದು ಬಸವಪೀಠ ಅಧ್ಯಕ್ಷರಾದ ಮಾತೆ ಮಹಾದೇವಿ ಆರೋಪಿಸಿದ್ದಾರೆ.
ಇತ್ತೀಚೆಗೆ, ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕೆಂಬುದು ಸಿದ್ದಗಂಗಾ ಶ್ರೀಗಳ ಅಭಿಲಾಷೆಯಾಗಿದೆ ಎಂದು ಹೇಳುವ ಮೂಲಕ ಸಚಿವ ಎಂ.ಬಿ. ಪಾಟೀಲ್ ಅವರು ವಿವಾದಕ್ಕೆ ನಾಂದಿ ಹಾಡಿದ್ದರು.

ಇದರ ಬೆನ್ನಲ್ಲೇ ಸಿದ್ದಗಂಗಾ ಮಠದಿಂದ ಸ್ಪಷ್ಟನೆ ಬಂದಿತ್ತು. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ಮಠ, ಲಿಂಗಾಯತ ಹಾಗೂ ವೀರಶೈವ ಒಂದೇ ಎಂದು ಸಿದ್ದಗಂಗಾ ಶ್ರೀಗಳು ಹೇಳಿಲ್ಲ. ಸಚಿವ ಪಾಟೀಲರು ಶ್ರೀಗಳ ಬಗ್ಗೆ ಅಪಪ್ರಚಾರ ನಡೆಸಿದ್ದಾರೆ ಎಂದು ತಿಳಿಸಿತು. ಇದು ಭಾರೀ ವಿವಾದಕ್ಕೆ ಕಾರಣವಾಯಿತಲ್ಲದೆ, ಸಚಿವ ಎಂ.ಬಿ. ಪಾಟೀಲರ ವಿರುದ್ಧ ತೀವ್ರ ವಾಗ್ದಾಳಿಗಳು ಕೇಳಿಬಂದವು.
ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾತೆ ಮಹಾದೇವಿ, ''ಸಿದ್ದಗಂಗಾ ಶ್ರೀಗಳಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ. ಇತ್ತೀಚೆಗೆ ಬೇಲಿ ಮಠದ ಶ್ರೀಗಳು ಮಠಕ್ಕೆ ಬಂದಿದ್ದಾಗ ನೀವು ಯಾರು ಎಂದು ಅವರು ಪ್ರಶ್ನೆ ಮಾಡಿದ್ದರಂತೆ. ಶ್ರೀಗಳ ಇಂಥ ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ಮಠದ ಕೆಲವರು ಕೆಲವು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ'' ಎಂದರು.
''ಶ್ರೀಗಳಿಗೆ ಭಾರತ ರತ್ನ ಕೊಡಿಸುವುದಾಗಿ ಕೆಲವು ರಾಜಕಾರಣಿಗಳು ಶ್ರೀಗಳಿಗೆ ಆಮಿಷ ಒಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಹೇಳಿಕೆಯನ್ನು ಬದಲಿಸಿ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ'' ಎಂದು ಅವರು ತಿಳಿಸಿದ್ದಾರೆ.
ಶ್ರೀಗಳಿಗೆ ಭಾರತ ರತ್ನ ಕೊಡಿಸುವ ಭರವಸೆಯನ್ನು ಕೆಲ ರಾಜಕಾರಣಿಗಳು ಆಶ್ವಾಸನೆ ನೀಡಿರುವುದು ತಮಗೆ ತಿಳಿದುಬಂದಿದೆ ಎಂದಿರುವ ಅವರು, ಶೀಘ್ರದಲ್ಲೇ ಇದರ ವಿವರವನ್ನೂ ಬಹಿರಂಗಗೊಳಿಸುವುದಾಗಿ ಹೇಳಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications