ಒಂದು ಅಥವಾ ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಿ : ಸಿದ್ದರಾಮಯ್ಯ ಸಲಹೆ
ಧಾರವಾಡ, ಡಿಸೆಂಬರ್ 08: ನಿಮಗೆ ಜಾಸ್ತಿ ಮಕ್ಕಳು ಬೇಡ, ನೀವು ಎರಡೇ ಮಕ್ಕಳನ್ನು ಮಾಡಿಕೊಳ್ಳಿ. ಏಕೆಂದರೆ, ಭಾರತದಲ್ಲಿ ಜನಸಂಖ್ಯೆ ಅತಿಯಾಗಿ ಹೆಚ್ಚಾಗುತ್ತಿದೆ. ಜನಸಂಖ್ಯೆ ನಿಯಂತ್ರಣ ಇಂದಿನ ಅಗತ್ಯ ಎಂದು ನೂತನ ದಂಪತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲಹೆ ನೀಡಿದರು.
ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಶಾಸಕ ಎನ್. ಎಚ್.ಕೋನರಡ್ಡಿಯವರು ತಮ್ಮ ಪುತ್ರ ನವೀನಕುಮಾರ ಅವರ ಆರತಕ್ಷತೆ ಅಂಗವಾಗಿ ಆಯೋಜಿಸಿದ್ದ 75 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ನೂತನ ವಧು-ವರರಿಗೆ ಶುಭಾಶಯ ಕೋರಿದ ಸಿಎಂ, ಸರಳ,ಸಾಮೂಹಿಕ ಮತ್ತು ಅಂತರ್ಜಾತಿ ವಿವಾಹ ಗಳು ಸಮಾಜದಲ್ಲಿ ಸಮಾನತೆ ತರಲು ಸಹಕಾರಿ ಎಂದು ಹೇಳಿದರು.

ಇನ್ನೂ ಮದುವೆಯಾದ ನೂತನ ದಂಪತಿಗಳು ಎರಡೇ ಮಕ್ಕಳನ್ನು ಮಾಡಿಕೊಳ್ಳಬೇಕು. ಏಕೆಂದರೆ, ಭಾರತದಲ್ಲಿ ಜನಸಂಖ್ಯೆ ಅತಿಹೆಚ್ಚಾಗುತ್ತಾ ಹೋಗುತ್ತಿದೆ ಎಂದು ಸಲಹೆ ನೀಡಿದರು. ಇಲ್ಲಿ ನಡೆದ 75 ಜೋಡಿಗಳ ಸಾಮೂಹಿಕ ವಿವಾಹದಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಾಜದವರೂ ಮದುವೆ ಯಾಗುತ್ತಿರುವುದು ಸಂತೋಷದ ಕ್ಷಣ. ಸರ್ವ ಧರ್ಮಗಳ ವಧು-ವರರು ಸಾಮೂಹಿಕ ವಿವಾಹ ಆಗುವುದರೊಂದಿಗೆ ಸಮಾಜದಲ್ಲಿ ಅಂತರ್ಜಾತಿ ಮದುವೆಗಳು ಆಗಬೇಕು. ಇದರಿಂದ ಸಮಾಜದ ಸರ್ವರಲ್ಲಿ ಸಮಾನತೆ ತರಲು ಸಹಾಯವಾಗುತ್ತದೆ ಎಂದು ಹೇಳಿದರು.
ಸಮಸಮಾಜ ನಿರ್ಮಾಣ ಮಾಡಬೇಕು, ಜಾತಿ, ವರ್ಗ ತೊಲಗಿಸಬೇಕು, ಎಲ್ಲರಿಗೂ ಸಮಾನ ಅವಕಾಶಗಳು ಹಾಗೂ ಹಕ್ಕುಗಳನ್ನು ಕೊಡಬೇಕು ಎಂದು ಸಂವಿಧಾನ ಹೇಳುತ್ತದೆ. ಇದಾಗದೇ ಹೋದರೇ ದೇಶಕ್ಕೆ ಸ್ವಾತಂತ್ರ್ಯ ದೊರಕಿರುವುದು ಸಾರ್ಥಕವಾಗುವುದಿಲ್ಲ ಎಂದರು. ರಾಜಕೀಯ ಸ್ವಾತಂತ್ರ್ಯ ಬಂದರೆ ಮಾತ್ರ ಸಾಲದು. ಅದಕ್ಕಾಗಿಯೇ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ರೂಪಿಸಿದಾಗ ಎಲ್ಲಾ ಜಾತಿ, ಧರ್ಮಗಳ ಜನರಿಗೆ ತಲುಪುವಂತೆ ಮಾಡಿದ್ದೇವೆ.
ಎಲ್ಲರೂ ಮುಖ್ಯವಾಹಿನಿಗೆ ಬರದೇ ಹೋದರೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಸಾರ್ಥಕವಾಗುವುದಿಲ್ಲ. ಸಂವಿಧಾನ ಜಾರಿಯಾಗಿ 75 ವರ್ಷಗಳಾದರೂ ಸಮಾನತೆ ಬಂದಿಲ್ಲ. ಶ್ರೀಮಂತರು, ಶ್ರೀಮಂತರಾಗಿಯೇ ಇದ್ದಾರೆ, ಬಡವರು ಬಡವರಾಗಿಯೇ ಉಳಿದಿದ್ದಾರೆ. ಜಾತಿ ವ್ಯವಸ್ಥೆಯ ಕಾರಣದಿಂದ ಸಮಾನತೆ ಬಂದಿಲ್ಲ. ನಮ್ಮ ಸರ್ಕಾರ ಇದನ್ನು ಮನಗಂಡು ಭಾಗ್ಯ ಯೋಜನೆಗಳನ್ನು ಹಾಗೂ ಈಗ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.
ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಹಣ ಉಳಿತಾಯವಾಗುತ್ತಿದೆ. ಇದನ್ನು ವ್ಯರ್ಥ ಎಂದು ಕೆಲವರು ಟೀಕೆ ಮಾಡುತ್ತಿದ್ದು, ಇದಕ್ಕೆ ಜನರೇ ಉತ್ತರ ಕೊಡಬೇಕು ಎಂದರು. ಒಂದು ಲಕ್ಷ ಕೋಟಿಗೂ ಹೆಚ್ಚು ವೆಚ್ಚವನ್ನು ಗ್ಯಾರಂಟಿಗಳಿಗೆ ಕೊಡಬೇಕಾದರೆ ಸಮಾನತೆಯನ್ನು ತರಬೇಕೆಂಬ ಉದ್ದೇಶದಿಂದಲೇ ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನೆನೆಸಿಕೊಂಡು ಸಮಾಜದಲ್ಲಿನ ಜಾತೀಯತೆ , ವರ್ಗ ವ್ಯವಸ್ಥೆಯನ್ನು ತೊಡೆದುಹಾಕೋಣ. ನಮ್ಮ ಸರ್ಕಾರ ದಲಿತರು, ರೈತರು, ಮಹಿಳೆಯರು, ಕಾರ್ಮಿಕರ ಪರವಾಗಿರುವ ಸರ್ಕಾರ ಎಂದರು. ಹಾಸನ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಾಗಿವೆ. ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದನ್ನು ನಾವು ಜಾರಿ ಮಾಡಿದ್ದೇವೆ ಎಂದರು. ಇಂದು ಉದ್ಘಾಟನೆ ಮತ್ತು ಶಂಕುಸ್ಥಾಪನೆಗೊಂಡ ಯೋಜನೆಗಳು ಜನೋಪಕಾರಿಯಾಗಿವೆ. ಇನ್ನು ಮುಂದೆಯೂ ಹಾಸನ ಜಿಲ್ಲೆಗೆ ವಿಶೇಷ ಗಮನವನ್ನು ನೀಡಲಾಗುತ್ತದೆ ಎಂದರು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications