ಸ್ವಪಕ್ಷೀಯರಿಂದಲೇ ಭಾರೀ ಟೀಕೆಗೆ ಒಳಗಾಗುತ್ತಿರುವ ಸಿದ್ದರಾಮಯ್ಯ
ಬೆಂಗಳೂರು, ಅ 24: ಬಾದಾಮಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಿದ ಮಾತಿಗೆ, ಕಾಂಗ್ರೆಸ್ ನಲ್ಲಿ ಭಾರೀ ಅಸಮಾಧಾನವೇ ಹೊರಬೀಳುತ್ತಿದೆ. ತನ್ನ ಮಾತು ತಿರುಗುಬಾಣವಾಗುತ್ತಿರುವುದನ್ನು ಅರಿತ ಸಿದ್ದರಾಮಯ್ಯ, ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ಸಿದ್ದರಾಮಯ್ಯ ಹೇಳಿಕೆಗೆ ಬೇಸರ ವ್ಯಕ್ತ ಪಡಿಸಿದ್ದರು. "ಮುಂದಿನ ಸಿಎಂ ಯಾರಾಗುತ್ತಾರೆ ಎನ್ನುವುದಕ್ಕೆ ಶಾಸಕಾಂಗ ಪಕ್ಷದ ನಾಯಕರು ಉತ್ತರಿಸುತ್ತಾರೆ. ಬಹುಷಃ ಸೋನಿಯಾ ಗಾಂಧಿಯವರೇ ಅವರಿಗೆ (ಸಿದ್ದರಾಮಯ್ಯ) ಹೇಳಿರಬಹುದೇನೋ"ಎಂದು ಡಿಕೆಶಿ ಉತ್ತರಿಸಿದ್ದರು.
ಡಿಕೆಶಿ ನಂತರ ಈಗ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸರದಿ. "ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಸಿಎಂ ಯಾರಾಗಬೇಕು ಎನ್ನುವುದರ ಬಗ್ಗೆ ಶಾಸಕರು ಮತ್ತು ಹೈಕಮಾಂಡ್ ನಿರ್ಧರಿಸುತ್ತಾರೆ. ಈ ವಿಚಾರ ಈಗ ಯಾಕೆ"ಎಂದು ಪ್ರಶ್ನಿಸಿದ್ದಾರೆ.

"ಸಿದ್ದರಾಮಯ್ಯನವರು ತಮ್ಮನ್ನು ತಾನೇ ಹೈಕಮಾಂಡ್ ಅಂದುಕೊಂಡಿದ್ದಾರೆ. ಅದಕ್ಕೆ ತಾನು ಮುಖ್ಯಮಂತ್ರಿಯಾದರೆ ಹತ್ತು ಕೆಜಿ ಅಕ್ಕಿ ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ನಾವು ಉಪಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕಿದೆ"ಎಂದು ಎಚ್.ಕೆ.ಪಾಟೀಲ್ ಹೇಳಿದ್ದಾರೆ.
"ಯಾರೂ ಹಸಿವಿನಿಂದ ಮಲಗಬಾರದು, ಹೊಟ್ಟೆ ತುಂಬ ಊಟ ಮಾಡಬೇಕು.ಬರಗಾಲ, ಪ್ರವಾಹ ಏನೇ ಬರಲಿ, ಜನ ಹೊಟ್ಟೆ ತುಂಬ ಊಟ ಮಾಡಿ ನೆಮ್ಮದಿಯಿಂದ ಇರಬೇಕು. ನಮ್ಮ ಸರಕಾರ ಮತ್ತೆ ಅಧಿಕಾರಕ್ಕೆ ಬಂದು, ನಾನು ಸಿಎಂ ಆದರೆ 10 ಕಿಲೋ ಅಕ್ಕಿ ಕೊಡುತ್ತೇನೆ" ಎನ್ನುವ ಮಾತನ್ನು ಸಿದ್ದರಾಮಯ್ಯ ಬಾದಾಮಿಯಲ್ಲಿ ಆಡಿದ್ದರು.
ಸಿದ್ದರಾಮಯ್ಯ ಮಾತಿಗೆ ಅವರ ಆಪ್ತರಾದ ಜಮೀರ್ ಅಹ್ಮದ್ ಖಾನ್ ಕೂಡಾ ಧ್ವನಿಗೂಡಿಸಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ, ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ"ಎಂದು ಹೇಳಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications