ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕೆಲ ದಿನಗಳು ಬಾಕಿ; ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ಬಂದ ಸಿಎಂ,ಡಿಸಿಎಂ
ಮಂಗಳೂರು, ಮೇ 25: ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿದ್ದು, ರಾಜಕೀಯ ನಾಯಕರು ಸೋಲು, ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ. ಇತ್ತ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆ ಹಾಗೂ ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಉಳಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೇರೆ ಕೆಲ ನಾಯಕರು ಇಂದು ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು.
ಕಾಂಗ್ರೆಸ್ ನಾಯಕರನ್ನ ದೇವಸ್ಥಾನದ ಆನೆಗಳು ಮತ್ತು ವಾದ್ಯಘೋಷಗಳ ಸ್ವಾಗತಿಸಲಾಯಿತು. ಪುಣ್ಯಕ್ಷೇತ್ರದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ದೇವಸ್ಥಾನದ ಮುಖ್ಯದ್ವಾರದ ಬಳಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಬರಮಾಡಿಕೊಂಡರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ.
ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತಾಧಿಗಳು ತಮಗೆ ಪ್ರತಿ ತಿಂಗಳು 2 ಸಾವಿರ ಹಣ ಬರುತ್ತಿದೆ ಎಂದು ಸಂತೋಷ ಹಂಚಿಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಅವರ ಮನೆಯಲ್ಲಿ ಗೃಹಜ್ಯೋತಿ ಬೆಳಗುತ್ತಿದೆ. ಅನ್ನಭಾಗ್ಯ ಸಿಗುತ್ತಿದೆ. ಈ ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ ಎಂದು ನಂಬಿದ್ದೇನೆ ಎಂದು ತಿಳಿಸಿದರು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
GBA: ನಗರದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ ಇನ್ನಷ್ಟು ಚುರುಕು -
ಬೆಂಗಳೂರಿನಂತೆ ಇಲ್ಲಿ ಟ್ರಾಫಿಕ್ ಇಲ್ಲ, ನಮ್ಮ ಹೈದರಾಬಾದ್ ಬೆಸ್ಟ್ ಎಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Siddaramaiah: ಡಿಕೆ ಶಿವಕುಮಾರ್ದು ಕಾಂಗ್ರೆಸ್ಗೆ ರಾಜಿಯಿಲ್ಲದ ನಿಷ್ಠೆ: ಸಿದ್ದರಾಮಯ್ಯ, ಸಿಎಂ ಕುರ್ಚಿ ಚರ್ಚೆ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ












Click it and Unblock the Notifications