ನಿಗಮ ಮಂಡಳಿ ಕಸರತ್ತು; ಸಿದ್ದರಾಮಯ್ಯ ನಿವಾಸಕ್ಕೆ ದಿಢೀರ್‌ ಭೇಟಿ ಕೊಟ್ಟ ಡಿ ಕೆ ಶಿವಕುಮಾರ್‌: ಮಹತ್ವದ ಚರ್ಚೆ!

ಬೆಂಗಳೂರು, ನವೆಂಬರ್‌ 22: ಲೋಕಸಭಾ ಚುನಾವಣೆಯ ಹೊತ್ತಲಿ ಕಾಂಗ್ರೆಸ್‌ ಪಾಳಯದಲ್ಲಿನ ಅಸಮಾಧಾನವನ್ನ ಶಮನಗೊಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಗೆ ಮುಂದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ದಿಢೀರ್‌ ಭೇಟಿ ನೀಡಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.

ಈ ಕುರಿತು ಸಿದ್ದರಾಮಯ್ಯ ಅವರ ಜೊತೆಗೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕದ ಕುರಿತು ಡಿ ಕೆ ಶಿವಕುಮಾರ್‌ ಚರ್ಚೆ ನಡೆಸಿದ್ದು, ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್‌, ನಿಗಮ ಮಂಡಳಿ ನೇಮಕ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರ ಅಭಿಪ್ರಾಯವನ್ನು ಪಡೆಯುತ್ತಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗಬೇಕಿದೆ. 28ರಂದು ನಮ್ಮ ದೆಹಲಿ ನಾಯಕರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಆ ಸಭೆ ಬಳಿಕ ನಮ್ಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸುತ್ತೇವೆ ಎಂದರು.

Siddaramaiah And Shivakumar To Discuss On Finalising List Of Presidents For Boards Corporations

ಗೃಹಸಚಿವರು ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಸಮಾಧಾನ ಹೊಂದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಗೃಹಮಂತ್ರಿಗಳು ಮೂರು ದಿನಗಳ ಕಾಲ ಪ್ರವಾಸದಲ್ಲಿದ್ದರು, ಅವರಿಗೆ ಅವರದೇ ಆದ ಕೆಲಸಗಳಿರುತ್ತವೆ. ಸುಮ್ಮನೆ ಯಾರೋ ಹೇಳಿದ್ದನ್ನು ನೀವು (ಮಾಧ್ಯಮಗಳು) ದೊಡ್ಡದಾಗಿ ಬಿಂಬಿಸುತ್ತೀರಿ. ಅವರು ಯಾವ ಕಾರಣಕ್ಕೆ ಅಸಮಾಧಾನಗೊಳ್ಳುತ್ತಾರೆ? ಅಸಮಾಧಾನ ಆಗುವಂತಹದ್ದು ಏನಾಗಿದೆ? ಈ ರೀತಿ ಅಸಮಾಧಾನ ಸೃಷ್ಟಿಸಿ ನಿಮ್ಮ ಘನತೆ ಯಾಕೆ ಹಾಳುಮಾಡಿಕೊಳ್ಳುತ್ತೀರಿ ಎಂದರು.

ಅವರ ಬೆಂಬಲಿಗರಿಗೆ ನಿಗಮ ಮಂಡಳಿ ಸ್ಥಾನದ ವಿಚಾರವಾಗಿ ಬೇಸರವಾಗಿದೆ ಎಂದು ಕೇಳಿದಾಗ, "ಇಲ್ಲಿ ಅವರ ಬೆಂಬಲಿಗರು, ನನ್ನ ಬೆಂಬಲಿಗರು ಎಂಬುದಿಲ್ಲ. ಎಲ್ಲ ಒಟ್ಟಾಗಿ ಕಾಂಗ್ರೆಸ್ ಬೆಂಬಲಿಗರು. ನನಗೆ, ಸಿಎಂ, ಗೃಹ ಸಚಿವರಿಗೆ ಬೆಂಬಲಿಗರು ಇಲ್ಲ. ಇರುವವರೆಲ್ಲಾ ಕಾಂಗ್ರೆಸ್ ಬೆಂಬಲಿಗರು. ಮಂತ್ರಿಗಿರಿ ಸಿಗದ ಹಿರಿಯ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Siddaramaiah And Shivakumar To Discuss On Finalising List Of Presidents For Boards Corporations

ನಿಗಮ ಮಂಡಳಿ ನೇಮಕ ವಿಳಂಬ ಮಾಡುತ್ತಿರುವುದು ಕಲೆಕ್ಷನ್ ಗಾಗಿ ಎಂಬ ಬಿಜೆಪಿ ಆರೋಪದ ಕುರಿತು ಮಾತನಾಡಿ, ನಾವು ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ನಿಗಮ ಮಂಡಳಿ ನೇಮಕ ಮಾಡುತ್ತಿದ್ದೇವೆ. ಅವರು ಅಧಿಕಾರಕ್ಕೆ ಬಂದ ಎಷ್ಟು ವರ್ಷಗಳ ನಂತರ ಮಾಡಿದರು? ಅವರಿಗೆ ನಾಲ್ಕೈದು ಸಚಿವರನ್ನು ನೇಮಕ ಮಾಡಲಾಗದೇ ಮುಖ್ಯಮಂತ್ರಿಗಳೇ ಖಾತೆಯನ್ನು ಇಟ್ಟುಕೊಂಡಿದ್ದರು. ಬಿಜೆಪಿ ತಟ್ಟಿಯಲ್ಲಿ ಹೆಗಣ ಬಿದ್ದದ್ದು, ಮೊದಲು ಅದನ್ನು ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು, ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಬೇಧ ಮರೆತು ಹೋರಾಟ ಮಾಡಲಾಗುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ ಎಂದು ತಿಳಿಸಿದರು.

ನೀವು ಕೂಡ ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲಾ ನಾಯಕರಲ್ಲೂ ಇರುತ್ತದೆ" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+