Siddaramaiah biography: ರೈತ ಕುಟುಂಬದಿಂದ ಬಂದು ಸಿಎಂ ಕುರ್ಚಿ ಏರಿದ ಸಿದ್ದರಾಮಯ್ಯ ಅಹಿಂದ ನಾಯಕನಾಗಿ ಬೆಳೆದ ಯಶೋಗಾಥೆ
ಮೈಸೂರು ಜಿಲ್ಲೆಯ ಕುಗ್ರಾಮದಿಂದ ಬಂದು, ಕರ್ನಾಟಕದ ಅತ್ಯಂತ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ ಸಿದ್ದರಾಮಯ್ಯನವರ ರಾಜಕೀಯ ಪಯಣ ಅತ್ಯಂತ ರೋಚಕ. 2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಐಎನ್ಸಿ) ಕರ್ನಾಟಕದಲ್ಲಿ ಬಿಜೆಪಿಯನ್ನು ಮಣಿಸಿ ಭರ್ಜರಿ ಜಯ ಸಾಧಿಸುವ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಕಾಂಗ್ರೆಸ್ ಪಕ್ಷಕ್ಕೆ ಇದೊಂದು ಬೃಹತ್ ಗೆಲುವಾಗಿತ್ತು. ಈ ಹಿಂದೆ ಮೈತ್ರಿ ಸರ್ಕಾರ ರಚಿಸಿ ಆಂತರಿಕ ಭಿನ್ನಮತದಿಂದ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್, ಈ ಬಾರಿ ಪಕ್ಷವನ್ನು ಒಗ್ಗಟ್ಟಾಗಿ ಕೊಂಡೊಯ್ಯುವಲ್ಲಿ ಯಶಸ್ವಿಯಾಯಿತು.
ಹೊಸ ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿತ್ತು. ಸಿದ್ದರಾಮಯ್ಯ ಅವರು 2013 ರಿಂದ 2018 ರವರೆಗೆ ಕರ್ನಾಟಕದ 22 ನೇ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸಿದ್ದರು. ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಿ.ಕೆ. ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲಾಗಿತ್ತು. ಸಿದ್ದರಾಮಯ್ಯ ಅವರ ಆರಂಭಿಕ ಜೀವನ, ಹಿನ್ನೆಲೆ, ಶಿಕ್ಷಣ, ಕುಟುಂಬ, ರಾಜಕೀಯ ವೃತ್ತಿಜೀವನ ಮತ್ತು ಇತ್ತೀಚಿನ ರಾಜೀನಾಮೆಯ ಕುರಿತಾದ ಸಂಪೂರ್ಣ ಜೀವನ ಚರಿತ್ರೆ ಇಲ್ಲಿದೆ.

ಸಿದ್ದರಾಮಯ್ಯ ಅವರ ಆರಂಭಿಕ ಜೀವನ ಮತ್ತು ಹಿನ್ನೆಲೆ
ಸಿದ್ದರಾಮಯ್ಯ ಅವರು ಆಗಸ್ಟ್ 3, 1947 ರಂದು ಕರ್ನಾಟಕದ ಮೈಸೂರು ಜಿಲ್ಲೆಯ ಕುಗ್ರಾಮವಾದ ಸಿದ್ದರಾಮನಹುಂಡಿಯಲ್ಲಿ ಜನಿಸಿದರು. ಅವರು ಕೃಷಿ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಪೋಷಕರು ಸಿದ್ದರಾಮೇಗೌಡ ಮತ್ತು ಬೋರಮ್ಮ. ಸಿದ್ದರಾಮಯ್ಯನವರಿಗೆ ಹತ್ತು ವರ್ಷ ತುಂಬುವವರೆಗೂ ಯಾವುದೇ ಔಪಚಾರಿಕ ಶಾಲಾ ಶಿಕ್ಷಣ ದೊರೆತಿರಲಿಲ್ಲ. ಆ ನಂತರ ವಿದ್ಯಾಭ್ಯಾಸ ಆರಂಭಿಸಿದ ಅವರು, ಮೈಸೂರು ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಸೈನ್ಸ್ (B.Sc) ಮತ್ತು ಕಾನೂನು ಪದವಿ (LL.B) ಪಡೆದರು. ಕುರುಬ ಗೌಡ ಸಮುದಾಯಕ್ಕೆ ಸೇರಿದ ಸಿದ್ದರಾಮಯ್ಯ ಅವರು ಐದು ಒಡಹುಟ್ಟಿದವರಲ್ಲಿ ಎರಡನೆಯವರಾಗಿದ್ದಾರೆ.

ಸಿದ್ದರಾಮಯ್ಯ ಅವರ ರಾಜಕೀಯ ವೃತ್ತಿಜೀವನ
ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳಲ್ಲೇ ಅತ್ಯುತ್ತಮ ಭಾಷಣಕಾರರಾಗಿ ಮತ್ತು ತಮ್ಮ ವಾಕ್ಚಾತುರ್ಯದಿಂದ ಪ್ರಸಿದ್ಧಿ ಪಡೆದಿದ್ದರು. ಮೈಸೂರಿನಲ್ಲಿ ವಕೀಲರೊಬ್ಬರ ಕೈಕೆಳಗೆ ಕಿರಿಯ ವಕೀಲರಾಗಿ ಕೆಲಸ ಮಾಡುತ್ತಿದ್ದಾಗ, ವಕೀಲ ನಂಜುಂಡಸ್ವಾಮಿ ಅವರ ಕಣ್ಣಿಗೆ ಬಿದ್ದರು. ನಂಜುಂಡಸ್ವಾಮಿ ಅವರು ಸಿದ್ದರಾಮಯ್ಯನವರನ್ನು ಮೈಸೂರು ತಾಲೂಕು ಚುನಾವಣೆಗೆ ಸ್ಪರ್ಧಿಸಲು ಪ್ರೇರೇಪಿಸಿದರು. ಅದರಂತೆ ಸ್ಪರ್ಧಿಸಿದ ಸಿದ್ದರಾಮಯ್ಯ ಗೆಲುವು ಕೂಡ ಸಾಧಿಸಿದರು.
ನಂತರ ಅವರು ಭಾರತೀಯ ಲೋಕದಳದ ಟಿಕೆಟ್ನಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ 1983 ರಲ್ಲಿ 7 ನೇ ಕರ್ನಾಟಕ ವಿಧಾನಸಭೆಯನ್ನು ಪ್ರವೇಶಿಸಿದರು. ಸಾಮಾನ್ಯ ಹಿನ್ನೆಲೆಯಿಂದ ಬಂದ ಸಿದ್ದರಾಮಯ್ಯನವರ ಗೆಲುವು ಎಲ್ಲರನ್ನೂ ಅಚ್ಚರಿಗೊಳಿಸಿತ್ತು ಮತ್ತು ಮೈಸೂರು ಭಾಗದಲ್ಲಿ ಅವರು ಸಂಚಲನ ಮೂಡಿಸಿದರು.
ಜನತಾ ಪಕ್ಷ ಸೇರಿದ ಬಳಿಕ ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾದರು. 1985ರಲ್ಲಿ ಮರು ಆಯ್ಕೆಯಾಗಿ ಪಶುಸಂಗೋಪನೆ ಸಚಿವರಾದರು. ಇದೇ ಅವಧಿಯಲ್ಲಿ ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರ ಧ್ವನಿಯಾಗಿ 'ಅಹಿಂದ' (AHINDA) ಸಂಘಟನೆಯನ್ನು ಹುಟ್ಟುಹಾಕಿ ಬಲಪಡಿಸಿದರು. ಈ ಮೂಲಕ ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ರಾಜ್ಯದ ಪ್ರಬಲ ಅಹಿಂದ ನಾಯಕನಾಗಿ ಬೆಳೆದು ನಿಂತರು.

1990ರ ದಶಕದಲ್ಲಿ ಅವರ ರಾಜಕೀಯ ಜೀವನ ಅನೇಕ ತಿರುವುಗಳನ್ನು ಕಂಡಿತು. ಹಲವು ಚುನಾವಣೆಗಳಲ್ಲಿ ಸೋಲು ಕಂಡ ಅವರು ಆಗಾಗ ಪಕ್ಷ ಬದಲಾಯಿಸುತ್ತಿದ್ದರು. 1994ರಲ್ಲಿ ಎಚ್.ಡಿ ದೇವೇಗೌಡರ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಮಹತ್ವದ ಜವಾಬ್ದಾರಿ ನಿಭಾಯಿಸಿದರು. 1996ರಲ್ಲಿ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡರು. 1999ರಲ್ಲಿ ಸೋಲು ಕಂಡರೂ, 2004ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮತ್ತೆ ಉಪಮುಖ್ಯಮಂತ್ರಿಯಾದರು.
ದೇವೇಗೌಡರೊಂದಿಗಿನ ಭಿನ್ನಾಭಿಪ್ರಾಯದ ನಂತರ ಜೆಡಿಎಸ್ನಿಂದ ಉಚ್ಚಾಟನೆಗೊಂಡ ಸಿದ್ದರಾಮಯ್ಯ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದರು. 2013 ರಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಮುಖ್ಯಮಂತ್ರಿಯಾದರು ಹಾಗೂ 2013 ರಿಂದ 2018 ರವರೆಗೆ ಪೂರ್ಣಾವಧಿ ಸೇವೆ ಸಲ್ಲಿಸಿದರು.
ಬಳಿಕ ಎಚ್.ಡಿ. ದೇವೇಗೌಡರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಜೆಡಿಎಸ್ ನಿಂದ ಉಚ್ಛಾಟನೆಗೊಂಡರು. ನಂತರ 2006ರಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ಸಿ) ಪಕ್ಷಕ್ಕೆ ಸೇರ್ಪಡೆಯಾದರು. ರಾಜ್ಯದಲ್ಲಿ ಬರೋಬ್ಬರಿ 17 ಬಾರಿ ಬಜೆಟ್ ಮಂಡಿಸಿದ ಏಕೈಕ ಹಣಕಾಸು ಸಚಿವ ಎಂಬ ಹೆಗ್ಗಳಿಕೆ ಸಿದ್ದರಾಮಯ್ಯನವರದ್ದು, ಇದೇ ವರ್ಷ(2026) ಮಾರ್ಚ್ನಲ್ಲಿ ದಾಖಲೆಯ 17ನೇ ಬಜೆಟ್ ಮಂಡಿಸಿದ್ದರು. ಡಿ.ದೇವರಾಜ ಅರಸು ಅವರನ್ನು ಹಿಂದಿಕ್ಕಿ, ಕರ್ನಾಟಕದ ಅತ್ಯಂತ 'ಸುದೀರ್ಘಾವಧಿ ಮುಖ್ಯಮಂತ್ರಿ' ಎಂಬ ಕೀರ್ತಿಗೂ ಇವರು ಭಾಜನರಾಗಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ
ಎರಡನೇ ಬಾರಿ ಮುಖ್ಯಮಂತ್ರಿಯಾಗಿ 3 ವರ್ಷ ಪೂರೈಸಿದ್ದ ಸಿದ್ದರಾಮಯ್ಯ, ಇದೀಗ ತಮ್ಮ ರಾಜಕೀಯ ಜೀವನದ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ, ಮೇ 28, 2026ರಂದು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಳಿಗ್ಗೆ ಸಚಿವರೊಂದಿಗೆ ನಡೆಸಿದ ಉಪಾಹಾರ ಕೂಟದಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಪ್ರಕಟಿಸಿ, ಡಿ.ಕೆ ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕನ ಸುದೀರ್ಘ ಅಧಿಕಾರಾವಧಿಯ ಒಂದು ಪ್ರಮುಖ ಅಧ್ಯಾಯ ಅಂತ್ಯಗೊಂಡಿದೆ.












Click it and Unblock the Notifications