ಸಚಿವ ಸಂಪುಟ ವಿಸ್ತರಣೆ, ಲೇಟೆಸ್ಟ್ ಸುದ್ದಿ ಏನಿದೆ?
ಬೆಂಗಳೂರು, ಜೂನ್ 19: ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಪ್ರಕ್ರಿಯೆ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಭಾನುವಾರ ಸಂಜೆ 4 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಇಂದೇ ಹೊಸ ಸಚಿವರಿಗೆ ಖಾತೆ ಹಂಚುವ ಸಾಧ್ಯತೆಯಿದೆ. ಆಲ್ಲಿ ತನಕ ನಡೆಯಲಿರುವ ಬೆಳವಣಿಗೆಗಳ ಕ್ವಿಕ್ ಲುಕ್ ನಿಮಗೆ ಇಲ್ಲಿ ಸಿಗಲಿದೆ.
ಒಟ್ಟು 14 ಹಾಲಿ ಸಚಿವರನ್ನು ಸಂಪುಟದಿಂದ ಕೈ ಬಿಟ್ಟು, 13 ಅಥವಾ 14 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಹಾಲಿ ಸಚಿವರಿಗೆ ಸಿದ್ದರಾಮಯ್ಯ ಅವರೇ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ. [ಸಿದ್ದರಾಮಯ್ಯ ಸಚಿವ ಸಂಪುಟಕ್ಕೆ 13 ಹೊಸಮುಖಗಳ ಸೇರ್ಪಡೆ]
ಆದರೆ, ಇಲ್ಲಿ ತನಕ ಯಾರೂ ರಾಜೀನಾಮೆ ನೀಡಿಲ್ಲ. ಮಧ್ಯಾಹ್ನ 1 ಗಂಟೆ ತನಕ ಗಡುವು ನೀಡಲಾಗಿದೆ. [ಸಿದ್ದರಾಮಯ್ಯ ಸಂಪುಟ ಸೇರುವ ಶಾಸಕರ ಪಟ್ಟಿ]

ಭಾನುವಾರದ ಪ್ರಮುಖ ಬೆಳವಣಿಗೆಗಳು:
ಆದರೆ, ನೂತನ ಸಚಿವರ ಜೊತೆ ಸಂಪುಟ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಕ್ಷದಲ್ಲಿ ಯಾವುದೇ ಬಂಡಾಯ ವಾತಾವರಣವಿಲ್ಲ, 8 ಜನ ರಾಜೀನಾಮೆ ನೀಡುತ್ತಿಲ್ಲ ಎಂದಿದ್ದಾರೆ.
* ಬೆಂಗಳೂರಿನ ಶಾಸಕರಿಂದ ಅಸಮಾಧಾನದ ಹೊಗೆ: ಎಂ ಕೃಷ್ಣಪ್ಪ(ವಿಜಯನಗರ), ಪ್ರಿಯಾಕೃಷ್ಣ, ಎಸ್ ಟಿ ಸೋಮಶೇಖರ್ (ಯಶವಂತಪುರ), ಮುನಿರತ್ನ, ಭೈರತಿ ಬಸವರಾಜ್ (ಕೆಆರ್ ಪುರಂ), ಆರ್ ವಿ ದೇವರಾಜ್(ಚಿಕ್ಕಪೇಟೆ) ರಾಜೀನಾಮೆ ನೀಡಲು ನಿರ್ಧಾರ.
* ಇತ್ತ ಬೆಂಗಳೂರಿನಲ್ಲಿ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಜೋರಾಗಿ ನಡೆದಿದೆ.

* ಕಲಬುರಗಿಯ ಜಗತ್ ವೃತ್ತದಲ್ಲಿ ವೀರಶೈವ ಲಿಂಗಾಯುತ ವೇದಿಕೆಯಿಂದ ಪ್ರತಿಭಟನೆ, ಸಚಿವ ಖಮರುಲ್ ಇಸ್ಲಾಂರನ್ನು ಸಂಪುಟದಿಂದ ಕೈಬಿಡದಂತೆ ಆಗ್ರಹ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ.[ಶ್ರೀನಿವಾಸಪ್ರಸಾದ್ ರನ್ನು ಕೈಬಿಟ್ಟಿದ್ದಕ್ಕೆ ಮೈಸೂರಲ್ಲಿ ಆಕ್ರೋಶ]
* ಉತ್ತರ ಕರ್ನಾಟಕ ಭಾಗದ ಮುಸ್ಲಿಂ ನಾಯಕರನ್ನು ಕಡೆಗಣಿಸಲಾಗಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಏನು ಲಾಭ, ನಾನು ದಿನದಲ್ಲಿ 12ಕ್ಕೂ ಅಧಿಕ ಗಂಟೆಗಳ ಕಾಲ ದುಡಿಯುತ್ತಿದ್ದೇನೆ ಎಂದು ಖಮರುಲ್ ಹೇಳಿದ್ದಾರೆ.

* ಬದಾಮಿ ಶಾಸಕ ಬಿಬಿ ಚಿಮ್ಮನಕಟ್ಟಿ ಅವರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ.
* ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ರಿಂದ ಸಂಪುಟದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಬಗ್ಗೆ ಅಸಮಾಧಾನ. ಅವರ ಅಭಿಮಾನಿಗಳಿಂದ ನಂಜನಗೂಡಿನಲ್ಲಿ ರಸ್ತೆ ತಡೆದು ಪ್ರತಿಭಟನೆ.
* ಸಿಎಂ ದ್ಯಾವಪ್ಪ, ಅಂಬರೀಷ್ ಅಭಿಮಾನಿ, ಪೊಲೀಸರ ವಶಕ್ಕೆ, ಮಂಡ್ಯದ ಸಂಜಯ್ ವೃತ್ತದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ, ದ್ಯಾವಪ್ಪರನ್ನು ರಕ್ಷಿಸಿದ ಪೊಲೀಸರು. [ಅಂಬರೀಶ್ ಅವನತಿಗೆ ಕಾರಣವಾದ ಹೆಂಗಸಿನ ಬಗ್ಗೆ ಜಗ್ಗೇಶ್ ಟ್ವೀಟ್]
* ಬೀದರ್ ಜಿಲ್ಲೆ ಹುಮ್ನಾನಾದ್ ಪಟ್ಟಣ ಬಂದ್ ಆಚರಣೆ, ಶಾಸಕ ರಾಜಶೇಖರ್ ಪಾಟೀಲ್ ಅವರ ಬೆಂಬಲಿಗರಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ, ಬಸ್ ಸಂಚಾರ ಸ್ಥಗಿತ.
* ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಯೋಗೇಶ್ವರ್, ನನಗೆ ಮಂತ್ರಿ ಪದವಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಹೈಕಮಾಂಡ್ ನನಗೆ ನೀಡಿರುವ ಭರವಸೆ ಉಳಿಸಿಕೊಳ್ಳುವ ವಿಶ್ವಾಸವಿದೆ. ಆತ(ಡಿಕೆ ಶಿವಕುಮಾರ್) ಅಧ್ಯಕ್ಷ(ಕೆಪಿಸಿಸಿ) ನಾಗಲು ಯಾರ ಬೆಂಬಲ ಬೇಕಾಗಿಲ್ಲ. ಅದೇ ರೀತಿ ನನಗೆ ಸಚಿವನಾಗಲು ಯಾರ ಬೆಂಬಲ ಬೇಕಿಲ್ಲ ಎಂದಿದ್ದಾರೆ.
* ಶಾಸಕ ಸಿಪಿ ಯೋಗೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ. ಕೊನೆ ಕ್ಷಣದಲ್ಲಿ ಒತ್ತಡ, ಲಾಬಿ ನಡೆಸಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವ ಪ್ರಯತ್ನಗಳನ್ನು ನಡೆಸಿದ್ದಾರೆ. [ಸಿಐಡಿಗೆ ಬೇಕಾದ ಯೋಗೇಶ್ವರ್ ಗೆ ಸಚಿವ ಸ್ಥಾನ ಏಕೆ?]

* ಎಂ ಕೃಷ್ಣಪ್ಪ ಅವರ ಬೆಂಬಲಿಗರಿಂದ ಭಾರಿ ಪ್ರತಿಭಟನೆ, ವಿಜಯನಗರದ ಮೆಟ್ರೋ ನಿಲ್ದಾಣಕ್ಕೆ ನುಗ್ಗಿ ಗಲಾಟೆ, ಆತಂಕಗೊಂಡ ಮೆಟ್ರೋ ಪ್ರಯಾಣಿಕರು. ಏಳೆಂಟು ನಿಮಿಷಗಳ ಕಾಲ ತಡವಾಗಿ ಚಲಿಸಿದ ರೈಲು. ರಸ್ತೆಗಳಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ, ಕೃಷ್ಣಪ್ಪ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಆಗ್ರಹ.
* ಎಂ ಕೃಷ್ಣಪ್ಪ ಅವರ ಹೆಸರು ಸಚಿವ ಸ್ಥಾನಕ್ಕೆ ಕೇಳಿ ಬಂದರೂ ಅವರಿಗೆ ಇನ್ನೂ ಸಿಎಂ ಸಿದ್ದರಾಮಯ್ಯ ಅವರಿಂದ ಕರೆ ಹೋಗಿಲ್ಲ.
* ಸಚಿವ ಸ್ಥಾನ ಆಕಾಂಕ್ಷಿ ಎಚ್ ಶಿವಶಿಂಕರ್ ರೆಡ್ಡಿ ಕಾರ್ಯಕರ್ತರಿಂದ ಗೌರಿಬಿದನೂರಿನಲ್ಲಿ ರಸ್ತೆ ತಡೆದು ಪ್ರತಿಭಟನೆ, ಕಲ್ಲು ತೂರಾಟ.
* ಬೀದರ್ ಜಿಲ್ಲೆ ಹುಮ್ನಾನಾದ್ ಪಟ್ಟಣ ಬಂದ್ ಆಚರಣೆ, ಶಾಸಕ ರಾಜಶೇಖರ್ ಪಾಟೀಲ್ ಅವರ ಬೆಂಬಲಿಗರಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ, ಬಸ್ ಸಂಚಾರ ಸ್ಥಗಿತ.

* ಗೃಹ ಸಚಿವ ಜಿ ಪರಮೇಶ್ವರ ಅವರು ಸಂಪುಟ ವಿಸ್ತರಣೆಯಿಂದ ಅಸಮಾಧಾನಗೊಂಡು, ಪ್ರಮಾಣ ವಚನ ಸಮಾರಂಭಕ್ಕೆ ಗೈರು ಹಾಜರಾಗಲಿದ್ದಾರೆ. ಜರ್ಮನಿಗೆ ತೆರಳಿದ್ದಾರೆ. [ಸಂಪುಟದಿಂದ ಹೊರಹೋಗಲಿರುವ 13 ಸಚಿವರು]
* ಬೆಂಗಳೂರಿನ ವಿಜಯನಗರದಲ್ಲಿ ಲೇಔಟ್ ಕೃಷ್ಣಪ್ಪ ಅವರ ಬೆಂಬಲಿಗರಿಂದ ರಸ್ತೆ ತಡೆ, ಪ್ರತಿಭಟನೆ.
* 'ಅಪ್ಪನ ಘನತೆಗೆ ತಕ್ಕಂತೆ ಕಾರ್ಯನಿರ್ವಹಿಸುವೆ, ಯುವ ಶಾಸಕರಿಗೆ ಅವಕಾಶ ನೀಡುವ ಸಲುವಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ' ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ.
-
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ











Click it and Unblock the Notifications