ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ ಸಚಿವರಿಗೆ ಭೋಜನಕೂಟ ಆಯೋಜಿಸಿದ ಸಿದ್ದರಾಮಯ್ಯ

By Gururaj
|
Google Oneindia Kannada News

Recommended Video

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಡಿನ್ನರ್ ಪಾಲಿಟಿಕ್ಸ್ ಮತ್ತೆ ಶುರು | Oneindia Kannada

ಬೆಂಗಳೂರು, ಆಗಸ್ಟ್ 01 : ಕರ್ನಾಟಕದಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್ ಆರಂಭವಾಗಿದೆ?. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸಚಿವರಿಗೆ ಮಾತ್ರ ಭೋಜನಕೂಟವನ್ನು ಆಯೋಜನೆ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ಸಚಿವರಿಗೆ ಭೋಜನಕೂಟ ಏರ್ಪಡಿಸಿದ್ದಾರೆ. ಬುಧವಾರ ರಾತ್ರಿ ಕಾವೇರಿ ನಿವಾಸದಲ್ಲಿ ಭೋಜನಕೂಟ ಆಯೋಜನೆ ಮಾಡಲಾಗಿದೆ.

ಒಗ್ಗಟಾಗಿದ್ದರೆ ಮಾತ್ರ ಎಲ್ಲಾ ಜಿಲ್ಲೆಗಳ ಅಭಿವೃದ್ಧಿ ಸಾಧ್ಯ : ಸಿದ್ದರಾಮಯ್ಯ ಒಗ್ಗಟಾಗಿದ್ದರೆ ಮಾತ್ರ ಎಲ್ಲಾ ಜಿಲ್ಲೆಗಳ ಅಭಿವೃದ್ಧಿ ಸಾಧ್ಯ : ಸಿದ್ದರಾಮಯ್ಯ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕದ ಬಳಿಕ ಸಿದ್ದರಾಮಯ್ಯ ಅವರು ಸಚಿವರಿಗೆ ಭೋಜನ ಕೂಟ ಆಯೋಜನೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

Siddaramaiah calls dinner party for Congress ministers

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್‌, ಜಮೀರ್ ಅಹಮದ್ ಖಾನ್, ರಮೇಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ 14 ಸಚಿವರು ಇದ್ದಾರೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್‌ನ ಹಲವು ಸಚಿವರು ಇದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ಸಚಿವರನ್ನು ಮಾತ್ರ ಭೋಜನಕೂಟಕ್ಕೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಯಾವ-ಯಾವ ಸಚಿವರು ಪಾಲ್ಗೊಳ್ಳಲಿದ್ದಾರೆ? ಎಂದು ಕಾದು ನೋಡಬೇಕಿದೆ.

ಈ ಹಿಂದೆ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಕಾಂಗ್ರೆಸ್-ಜೆಡಿಎಸ್‌ನ ಎಲ್ಲಾ ಶಾಸಕರಿಗೆ ಭೋಜನಕೂಟ ಏರ್ಪಡಿಸಿದ್ದರು.

English summary
Former Chief Minister Siddaramaiah organized dinner party for Congress ministers on August 1, 2018. Dinner party will be held in Siddaramaiah's house Cauvery.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X